AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗಾಗಿ ಬೆಂಕಿ ಕಾಯಿಸಿದ ಯುವಕ; ಮುದ್ದಾದ ದೃಶ್ಯ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ಬಹು ಬೇಗನೇ ನಮ್ಮ ಗಮನವನ್ನು ಸೆಳೆಯುತ್ತವೆ. ಇದೀಗ ಅಂತಹದ್ದೇ ಮತ್ತೊಂದು ದೃಶ್ಯ ವೈರಲ್‌ ಆಗಿದ್ದು, ಯುವಕನೊಬ್ಬ ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಿಕೊಳ್ಳಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 06, 2025 | 12:27 PM

Share

ಈಗಂತೂ ಎಲ್ಲಿ ನೋಡಿದ್ರೂ ಸಿಕ್ಕಾಪಟ್ಟೆ ಚಳಿ. ಈ ತಂಪು ವಾತಾವರಣದಲ್ಲಿ ಬೆಚ್ಚಗಿರಲು ಹೆಚ್ಚಿನವರು ಸ್ವೆಟ್ಟರ್‌, ದಪ್ಪನೆಯ ಬಟ್ಟೆ, ಕೈಗಳಿಗೆ ಗೌಸ್‌ ಧರಿಸಿದರೆ ಇನ್ನೂ ಕೆಲವರು ಕೊರೆಯುವ ಚಳಿಯಲ್ಲಿ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಾರೆ. ಆದ್ರೆ ಬೀಡಾಡಿ ಪ್ರಾಣಿಗಳು ಪಾಪ ಚಳಿ ತಡೆಯಲಾರದೆ ಕಷ್ಟ ಅನುಭವಿಸುತ್ತವೆ. ಹೆಚ್ಚಿನವರು ಇವುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಇಲ್ಲೊಬ್ಬ ಯುವಕ ಮಾತ್ರ ನಾಯಿ ಮರಿಗಳು ಕೂಡಾ ಬೆಚ್ಚಗಿರಬೇಕೆಂದು ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಬಹುಪಾಲು ಮಾನವೀಯತೆ ಮರೆಯಾಗಿರುವ ಈ ಕಾಲದಲ್ಲಿಯೂ ದಯೆ, ಕರುಣೆ, ಕಾಳಜಿ ಸಹಾನೂಭೂತಿಯನ್ನು ಹೊಂದಿದವರು, ಪರರ ಕಷ್ಟಕ್ಕೆ ಸಹಾಯವಾಗುವ ಒಂದಷ್ಟು ಜನ ಇದ್ದಾರೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸತ್ಯಮ್ ಸೂರ್ಯವಂಶಿ ಎಂಬ ಯುವಕ ಕೊರೆಯುವ ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಹಾಕಿಕೊಟ್ಟಿದ್ದಾನೆ.

ಈ ಕುರಿತ ವಿಡಿಯೋವನ್ನು satyam_suryanshi123‌ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಸತ್ಯಮ್‌ ಜೊತೆ ಕುಳಿತಿರುವ ಪುಟ್ಟ ಪುಟ್ಟ ನಾಯಿ ಮರಿಗಳು ಬೆಂಕಿಯ ಪಕ್ಕ ಕುಳಿತು ಚಳಿ ಕಾಯಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ರೀಲ್ಸ್‌ ಗಾಗಿ ಚಲಿಸುವ ಕಾರಿನಲ್ಲಿ ಸ್ಟಂಟ್‌ ಮಾಡಿದ ಯುವಕರು, ಈ ಹುಚ್ಚಾಟಕ್ಕೆ ಬಿತ್ತು 33 ಸಾವಿರ ದಂಡ

ಏಳು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 10.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತಹ ಸಹೃದಯಿ ವ್ಯಕ್ತಿಯಿವʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಹೋದರ ನಿನ್ನ ಈ ಕಾರ್ಯಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಯುವಕನ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ