AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗಾಗಿ ಬೆಂಕಿ ಕಾಯಿಸಿದ ಯುವಕ; ಮುದ್ದಾದ ದೃಶ್ಯ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ಬಹು ಬೇಗನೇ ನಮ್ಮ ಗಮನವನ್ನು ಸೆಳೆಯುತ್ತವೆ. ಇದೀಗ ಅಂತಹದ್ದೇ ಮತ್ತೊಂದು ದೃಶ್ಯ ವೈರಲ್‌ ಆಗಿದ್ದು, ಯುವಕನೊಬ್ಬ ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಿಕೊಳ್ಳಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 06, 2025 | 12:27 PM

Share

ಈಗಂತೂ ಎಲ್ಲಿ ನೋಡಿದ್ರೂ ಸಿಕ್ಕಾಪಟ್ಟೆ ಚಳಿ. ಈ ತಂಪು ವಾತಾವರಣದಲ್ಲಿ ಬೆಚ್ಚಗಿರಲು ಹೆಚ್ಚಿನವರು ಸ್ವೆಟ್ಟರ್‌, ದಪ್ಪನೆಯ ಬಟ್ಟೆ, ಕೈಗಳಿಗೆ ಗೌಸ್‌ ಧರಿಸಿದರೆ ಇನ್ನೂ ಕೆಲವರು ಕೊರೆಯುವ ಚಳಿಯಲ್ಲಿ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಾರೆ. ಆದ್ರೆ ಬೀಡಾಡಿ ಪ್ರಾಣಿಗಳು ಪಾಪ ಚಳಿ ತಡೆಯಲಾರದೆ ಕಷ್ಟ ಅನುಭವಿಸುತ್ತವೆ. ಹೆಚ್ಚಿನವರು ಇವುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಇಲ್ಲೊಬ್ಬ ಯುವಕ ಮಾತ್ರ ನಾಯಿ ಮರಿಗಳು ಕೂಡಾ ಬೆಚ್ಚಗಿರಬೇಕೆಂದು ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಬಹುಪಾಲು ಮಾನವೀಯತೆ ಮರೆಯಾಗಿರುವ ಈ ಕಾಲದಲ್ಲಿಯೂ ದಯೆ, ಕರುಣೆ, ಕಾಳಜಿ ಸಹಾನೂಭೂತಿಯನ್ನು ಹೊಂದಿದವರು, ಪರರ ಕಷ್ಟಕ್ಕೆ ಸಹಾಯವಾಗುವ ಒಂದಷ್ಟು ಜನ ಇದ್ದಾರೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸತ್ಯಮ್ ಸೂರ್ಯವಂಶಿ ಎಂಬ ಯುವಕ ಕೊರೆಯುವ ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಹಾಕಿಕೊಟ್ಟಿದ್ದಾನೆ.

ಈ ಕುರಿತ ವಿಡಿಯೋವನ್ನು satyam_suryanshi123‌ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಸತ್ಯಮ್‌ ಜೊತೆ ಕುಳಿತಿರುವ ಪುಟ್ಟ ಪುಟ್ಟ ನಾಯಿ ಮರಿಗಳು ಬೆಂಕಿಯ ಪಕ್ಕ ಕುಳಿತು ಚಳಿ ಕಾಯಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ರೀಲ್ಸ್‌ ಗಾಗಿ ಚಲಿಸುವ ಕಾರಿನಲ್ಲಿ ಸ್ಟಂಟ್‌ ಮಾಡಿದ ಯುವಕರು, ಈ ಹುಚ್ಚಾಟಕ್ಕೆ ಬಿತ್ತು 33 ಸಾವಿರ ದಂಡ

ಏಳು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 10.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತಹ ಸಹೃದಯಿ ವ್ಯಕ್ತಿಯಿವʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಹೋದರ ನಿನ್ನ ಈ ಕಾರ್ಯಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಯುವಕನ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ