AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀನು ದೇವತೆ ತಾಯಿ, ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ

ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂಬುದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ವೈರಲ್ ಆಗಿದ್ದು,  ಏನೋ ತಿಳಿಯದೆ ನದಿ ನೀರಿಗಿಳಿದ ಪುಟ್ಟ  ಶ್ವಾನವೊಂದು ನೀರಿನ ರಭಸಕ್ಕೆ ಅಲ್ಲಿದ್ದ ಹೊರಬರಲಾರದೆ ಕಷ್ಟಪಟ್ಟಿದೆ. ನಾಯಿ ಮರಿಯ ಈ ಸ್ಥಿತಿಯನ್ನು ನೋಡಲಾರದೆ ಯುತಿಯೊಬ್ಬಳು ನೀರಿಗಿಳಿದು ಶ್ವಾನವನ್ನು ರಕ್ಷಣೆ ಮಾಡಿದ್ದಾಳೆ.

Viral Video: ನೀನು ದೇವತೆ ತಾಯಿ, ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: May 17, 2024 | 6:27 PM

Share

ಮಾನವೀಯತೆಗಿಂತ ದೊಡ್ಡ ಗುಣ ಮತ್ತೊಂದಿಲ್ಲ. ಹೌದು ಈ ಸಮಾಜ ಎಷ್ಟೇ ಮುಂದುವರೆದಿದ್ದರೂ ಮನುಷ್ಯರಾದ ನಮ್ಮಲ್ಲಿ ಮಾನವೀಯತೆ, ದಯಾ ಗುಣ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ನಾವು ಮಾಡುವ ಸಣ್ಣ ಸಹಾಯ ಹಾಗೂ ಮಾನವೀಯ ಕಾರ್ಯ ಇನ್ನೊಬ್ಬರ ಜೀವನವನ್ನೇ ಬೆಳಗಿಸುತ್ತದೆ. ಹೀಗೆ ತೊಂದರೆಗೀಡಾದ ಪ್ರಾಣಿಗಳನ್ನು ರಕ್ಷಿಸುವ, ಇತರರ ಸಹಾಯಕ್ಕೆ ಧಾವಿಸುವ ಮಾನವೀಯ ಗುಣವಿರುವ  ಹಲವು ಜನರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಯುವತಿಯೊಬ್ಬಳು ನದಿ ನೀರಿನಲ್ಲಿ ಸಿಲುಕಿದ ಮುದ್ದಾದ ನಾಯಿ ಮರಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾಳೆ.

ಈ ವಿಡಿಯೋವನ್ನು @1hakankapucu ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸಹಾಯಸ್ತಾಕ್ಕಾಗಿ ಅಳುತ್ತಿದ್ದ ನಾಯಿ ಮರಿಯನ್ನು ಸಮಾಧಾನಪಡಿಸಿ, ಅದರ ಪ್ರಾಣ ರಕ್ಷಣೆ ಮಾಡಿದ ಯುವತಿ” ಎಂಬ ಶಿರ್ಷಿಕೆಯನ್ನು ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ ಪುಟಾಣಿ ನಾಯಿಮರಿಯೊಂದು ಹರಿಯುವ ನೀರಿನ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಿರುವ ದೃಶ್ಯವನ್ನು ಕಾಣಬಹುದು. ನೀರಿನ ರಭಸಕ್ಕೆ ಮೇಲೆ ಬರಲಾರದೆ ಅಲ್ಲೇ ನಿಂತು ಯಾರಾದರೂ ನನ್ನ ಪ್ರಾಣವನ್ನು ಕಾಪಾಡಿ ಎಂದು ಜೋರಾಗಿ ಅಳುತ್ತದೆ. ಶ್ವಾನ ಅಳುವ ಸದ್ದನ್ನು ಕೇಳಿ ಅಲ್ಲಿಗೆ ಧಾವಿಸಿದ ಯುವತಿಯೊಬ್ಬಳು ನೀರಿಗಿಳಿದು, ಶ್ವಾನವನ್ನು ನಿಧಾನಕ್ಕೆ ಸಮಾಧಾನಪಡಿಸಿ, ನೀರಿನಿಂದ ಶ್ವಾನವನ್ನು ಎತ್ತಿಕೊಂಡು ಬಂದು ಅದರ ಪ್ರಾಣ ರಕ್ಷಣೆ ಮಾಡಿದ್ದಾಳೆ.

ಇದನ್ನೂ ಓದಿ; ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ 

ಮೇ 16 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಯುವತಿಯ ಈ ಮಾನವೀಯ ಕಾರ್ಯಕ್ಕೆ ನೆಟ್ಟಿಗರು ಭೇಷ್ ಎಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್