AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ಲೋ ಸತೀಸಾ ವಿಸ್ಯ ಗೊತ್ತಾಯ್ತಾ” RCB ಗೆದ್ದ ಖುಷಿಯಲ್ಲಿ ಮೊಟ್ರೋದಲ್ಲಿ ಅಭಿಮಾನಿಗಳ ಗುಸು ಗುಸು ಮಾತು 

ತವರಿನಲ್ಲಿ CSK ವಿರುದ್ಧದ ಪಂದ್ಯದಲ್ಲಿ ಗೆದ್ದು RCB ರಾಯಲ್‌ ಆಗಿ ಪ್ಲೇ-ಆಫ್‌ ಎಂಟ್ರಿ ಕೊಟ್ಟಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ಖುಷಿಯಲ್ಲಿ RCB ಅಭಿಮಾನಿಗಳಿಬ್ಬರು ಲೋ ಸತೀಸಾ ವಿಸ್ಯ ಗೊತ್ತಾಯ್ತಾ ಎನ್ನುತ್ತಾ ಮೆಟ್ರೋದಲ್ಲಿ ಕುಳಿತು ಕಿರಾತಕ ಸಿನೆಮಾದಲ್ಲಿ ಬರುವ ಡೈಲಾಡ್‌ ಸ್ಟೈಲ್‌ ಅಲ್ಲಿ ಮಾತಕತೆ ನಡೆಸಿದ್ದಾರೆ. ಈ ಫನ್ನಿ ಮಾತುಕತೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. 

Viral Video: ಲೋ ಸತೀಸಾ ವಿಸ್ಯ ಗೊತ್ತಾಯ್ತಾ RCB ಗೆದ್ದ ಖುಷಿಯಲ್ಲಿ ಮೊಟ್ರೋದಲ್ಲಿ ಅಭಿಮಾನಿಗಳ ಗುಸು ಗುಸು ಮಾತು 
ಮಾಲಾಶ್ರೀ ಅಂಚನ್​
| Edited By: |

Updated on: May 20, 2024 | 3:07 PM

Share

ಶನಿವಾರ ನಮ್ಮ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಲ್‌ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 27 ರನ್‌ಗಳಿಂದ ಗೆದ್ದು ಬೀಗುವ ಮೂಲಕ RCB ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. RCB ತಂಡ ಗೆಲ್ಲುತ್ತಿದ್ದಂತೆ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿದ್ದು, ಮಧ್ಯರಾತ್ರಿಯಲ್ಲಿಯೇ ಅಭಿಮಾನಿಗಳು RCB ಗೆಲುವನ್ನು ಸಂಭ್ರಮಿಸಿದ್ದಾರೆ. ಇದೀಗ ಅಭಿಮಾನಿಗಳಿಬ್ಬರು ಆರ್‌ಸಿಬಿಯ ಗೆಲುವನ್ನು ವಿಭಿನ್ನವಾಗಿ ಸಂಭ್ರಮಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ʼಲೋ ಸತೀಸಾ ವಿಸ್ಯ ಗೊತ್ತಾಯ್ತಾʼ ಎನ್ನುತ್ತಾ ಕಿರಾತಕ ಸಿನಿಮಾ ಡೈಲಾಗ್ಸ್‌ ಶೈಲಿಯಲ್ಲಿ ಮಾತುಕತೆ ನಡೆಸಿದ್ದಾರೆ.

ಈ ಕುರಿತ ವಿಡಿಯೋವನ್ನು @rsy_stan ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಯಶ್‌ ಸರ್‌ ಅವರ ಕಿರಾತಕ ಸಿನಿಮಾ ಸಂಭಾಷಣೆಯನ್ನು RCB vs CSK ಪಂದ್ಯದ ನಂತರ ಮರುಸೃಷ್ಟಿಸಲಾಯಿತು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ RCB ಅಭಿಮಾನಿಗಳಿಬ್ಬರು ಕಿರಾತಕ ಸಿನೆಮಾದಲ್ಲಿನ ಡೈಲಾಗ್ಸ್‌ ಶೈಲಿಯಲ್ಲಿ ಮಾತುಕತೆ ನಡೆಸುತ್ತಿರುವ ದೃಶ್ಯವನ್ನು ಕಾಣಬಹುದು.  ಮೆಟ್ರೋದಲ್ಲಿ ಇತ್ತ ಕಡೆ ಕುಳಿತಿದ್ದ ಯುವಕನೊಬ್ಬ ಕಿರಾತಕ ಸಿನಿಮಾ ಸ್ಟೈಲ್‌ ಅಲ್ಲಿ ಲೋ ಸತೀಸಾ… ವಿಸ್ಯ  ಗೊತ್ತಾಯ್ತಾ ಎಂದು ಜೋರಾಗಿ ತನ್ನ ಫ್ರೆಂಡ್‌ ಬಳಿ ಕೂಗಿ ಹೇಳುತ್ತಾನೆ. ಅತ್ತ ಕಡೆ ಕುಳಿತಿದ್ದ ಈತನ ಸ್ನೇಹಿತ ಏನ್ಲಾ ಅದು ಎಂದು ಕೇಳುತ್ತಾನೆ. ಅದಕ್ಕೆ ಆ ಯುವಕ ನಮ್ಮ ಆರ್‌ಸಿಬಿಯವ್ರು ಕೆಎಸ್‌ಕೆ ತಂಡದವ್ರಿಗೆ  ನಾಯಿಗ್‌ ಹೊಡ್ದಂಗೆ ಹೊಡ್ದವ್ರೇ ಅಂತ ಹೇಳ್ತಾನೆ. ಅದಕ್ಕೆ ಆತನ ಸ್ನೇಹಿತ ಹೌದೇನ್ಲಾ ಎಂದು ಸಂಭಾಷಣೆ ನಡೆಸುವುದನ್ನು ಕಾಣಬಹುದು.

ಇದನ್ನೂ ಓದಿ: ಅವ್ರು ಅದೃಷ್ಟ ದೇವತೆ ಕಣ್ರೋ;  RCB ಸೋಲಿಗೆ ಅಶ್ವಿನಿ ಕಾರಣ ಎಂದು ನಿಂದಿಸಿದವರಿಗೆ ಇದು ಸರಿಯಾದ ಉತ್ತರ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಯುವಕರ ತರ್ಲೆ ಮಾತುಕತೆಯನ್ನು ಕೇಳಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ