AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್‌ ಧರಿಸದೆ ಪ್ರಯಾಣಿಸಿದ ಲೇಡಿ ಕಾನ್ಸ್‌ಟೇಬಲ್‌; ಜನರಿಗೊಂದು ನ್ಯಾಯ ನಿಮಗೊಂದು ನ್ಯಾಯಾನಾ

ಸುರಕ್ಷತೆಯ ದೃಷ್ಟಿಯಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲೇಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಪೊಲೀಸರು ಕೂಡಾ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಾರೆ. ಅಂತದ್ರಲ್ಲಿ ಇಲ್ಲೊಬ್ರು ಲೇಡಿ ಕಾನ್ಸ್‌ಟೇಬಲ್‌ ಹೆಲ್ಮೆಟ್‌ ಧರಿಸದೆ ರಾಜಾರೋಷವಾಗಿ ಪ್ರಯಾಣಿಸಿದ್ದಾರೆ. ಈ ದೃಶ್ಯವನ್ನು ಕಂಡಂತಹ ಯುವಕನೊಬ್ಬ ಜನ ಸಾಮಾನ್ಯರಿಗೊಂದು ನ್ಯಾಯ, ನಿಮಗೊಂದು ನ್ಯಾಯಾನಾ ಎಂದು ಪ್ರಶ್ನಿಸಿದ್ದು, ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ಹೆಲ್ಮೆಟ್‌ ಧರಿಸದೆ ಪ್ರಯಾಣಿಸಿದ ಲೇಡಿ ಕಾನ್ಸ್‌ಟೇಬಲ್‌; ಜನರಿಗೊಂದು ನ್ಯಾಯ ನಿಮಗೊಂದು ನ್ಯಾಯಾನಾ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Mar 20, 2025 | 4:36 PM

Share

ಅಪಘಾತಗಳು (accident) ಸಂಭವಿಸಿದಾಗ ಹೆಚ್ಚಿನ ಹಾನಿಯನ್ನು ತಪ್ಪಿಸಲು ಹೆಲ್ಮೆಟ್‌ (helmet) ಸಹಾಯಕವಾಗುವುದಿಂದ ಸುರಕ್ಷತೆಯ ದೃಷ್ಟಿಯಿಂದ ದ್ವಿಚಕ್ರ ವಾಹನ (two wheeker) ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲೇಬೇಕು ಎಂಬ ನಿಯಮವನ್ನು (rules) ಜಾರಿಗೆ ತರಲಾಗಿದೆ. ಮುಂಬದಿ ಸವಾರರು ಮಾತ್ರವಲ್ಲ ದ್ವಿಚಕ್ರ ವಾಹನಗಳಲ್ಲಿ ಹಿಂಬದಿಯಲ್ಲಿ ಕೂರುವಂತಹ ಸವಾರರು ಕೂಡಾ ಕಡ್ಡಾಯವಾಗಿ ಹೆಲ್ಮೆಟ್‌ (helmet) ಧರಿಸಬೇಕು. ಆದ್ರೆ ಕೆಲವೊಬ್ಬರು ಫೈನ್‌ ಬಿದ್ರು ಇದಕ್ಕೆಲ್ಲಾ ಕ್ಯಾರೇ ಅನ್ನದೆ ಹೆಲ್ಮೆಟ್‌ ಇಲ್ಲದೆ ಪ್ರಯಾಣಿಸುತ್ತಾರೆ. ಇಂತಹವರಿಗೆ ತಿಳಿ ಹೇಳಬೇಕಾದ ಪೊಲೀಸ್ರೇ ಹೆಲ್ಮೆಟ್‌ ಇಲ್ಲದೆ ಪ್ರಯಾಣಿಸಿದ್ದಾರೆ. ಹೌದು ಲೇಡಿ ಕಾನ್ಸ್‌ಸ್ಟೇಬಲ್‌ (lady constable) ಒಬ್ರು ಹೆಲ್ಮೆಟ್‌ ಇಲ್ಲದೆ ಸಂಚರಿಸಿದ್ದು, ಈ ದೃಶ್ಯವನ್ನು ಕಂಡಂತಹ ಯುವಕನೊಬ್ಬ ಜನ ಸಾಮಾನ್ಯರಿಗೊಂದು ನ್ಯಾಯ, ನಿಮಗೊಂದು ನ್ಯಾಯಾನಾ ಎಂದು ಪ್ರಶ್ನಿಸಿದ್ದು, ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಂತಹ ಮಹಿಳಾ ಕಾನ್ಸ್‌ಸ್ಟೇಬಲ್‌ ಒಬ್ರು ಹೆಲ್ಮೆಟ್‌ ಧರಿಸದೆ ರಾಜಾರೋಷವಾಗಿ ಪ್ರಯಾಣಿಸಿದ್ದಾರೆ. ಈ ದೃಶ್ಯವನ್ನು ಕಂಡಂತಹ ಯುವಕನೊಬ್ಬ ನಮ್ಮಂತಹ ಜನ ಸಾಮಾನ್ಯರಾಗಿದ್ರೆ ಬಿಡ್ತಿದ್ರಾ, ನೀವು ಆರಕ್ಷಕರು ತಾನೇ ನೀವ್ಯಾಕೆ ಹೆಲ್ಮೆಟ್‌ ಧರಿಸದೆ ಪ್ರಯಾಣಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ
Image
ವಯಸ್ಸು 108 ಆದ್ರೂ ಕುಂದದ ಜೀವನೋತ್ಸಾಹ
Image
ಸೂಪ್‌ಗೆ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದ ಯುವಕರು
Image
ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಪತ್ರದೊಂದಿಗೆ ಗಿಫ್ಟ್‌
Image
ಪ್ಲಾಸ್ಟಿಕ್‌ ಬಾಟಲಿಯಿಂದ ತಯಾರಾದ ಸನ್‌ಲೈಟ್‌ ಪವರ್ಡ್‌ ಬಲ್ಬ್‌ ಇದು

ಈ ವಿಡಿಯೋವನ್ನು mr_alluarya ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ನಮ್ಮ ಆರಕ್ಷಕರೇ ಹೆಲ್ಮೆಟ್‌ ಧರಿಸದೆ ಪ್ರಯಾಣಿಸುತ್ತಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್‌ ಆಗುತ್ತಿರುವ ವೀಡಿಯೋದಲ್ಲಿ ಸ್ಕೂಟಿ ಹಿಂಬದಿ ಕುಳಿತ ಲೇಡಿ ಕಾನ್ಸ್‌ಸ್ಟೇಬಲ್‌ ಹೆಲ್ಮೆಟ್‌ ಧರಿಸದೆ ಪ್ರಯಾಣಿಸುತ್ತಿರುವ ದೃಶ್ಯವನ್ನು ಕಾಣಬಹುದು. ಆರಕ್ಷಕರೇ ಹೀಗೆ ಮಾಡುವುದು ಎಷ್ಟು ಸರಿಯಿಂದು ಕಾರಿನಲ್ಲಿದ್ದಂತ ಯುವಕನೊಬ್ಬ ಇದನ್ನು ಪ್ರಶ್ನಿಸಿದ್ದಾನೆ.

ಇದನ್ನೂ ಓದಿ: ಮಿಕ್ಸಿ ಬೇಕಿಲ್ಲ, ಒಣ ಕೆಂಪು ಮೆಣಸಿನಕಾಯಿ ಹೀಗೂ ಪುಡಿ ಮಾಡಬಹುದು, ವಿಡಿಯೋ ವೈರಲ್

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನೀವು ಡ್ರೈವಿಂಗ್‌ ಮಾಡುವಾಗ ಮೊಬೈಲ್‌ ಯೂಸ್‌ ಮಾಡಿದ್ದು ಕೂಡಾ ತಪ್ಪು ತಾನೇʼ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಪೊಲೀಸ್ರಲ್ವೇ ಅವರಿಗೆಲ್ಲಾ ಇದು ನಡೆಯುತ್ತೇʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್