Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ನೆಟ್ಟಿಗರ ಒತ್ತಾಯ

Teacher : ಸನಾತನ ಧರ್ಮದಲ್ಲಿ ಗುರುವಿನ ಸ್ಥಾನಕ್ಕೆ ಅಪಾರ ಗೌರವವಿದೆ. ಇಂದಿನ ಶಿಕ್ಷಕರು ಇದನ್ನು ಕಾಪಾಡಿಕೊಳ್ಳಬೇಕು ಮಕ್ಕಳಿಗೂ ಕಲಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು. ಅಷ್ಟೇ ಅಲ್ಲ ಈ ನೃತ್ಯ ಅಸಭ್ಯವಾಗಿದೆ ಎಂದೂ ಹೇಳುತ್ತಿದ್ದಾರೆ.

ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ನೆಟ್ಟಿಗರ ಒತ್ತಾಯ
ತರಗತಿಯಲ್ಲಿ ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 03, 2022 | 10:10 AM

Viral Video : ಶಿಕ್ಷಕರು ಮಕ್ಕಳಲ್ಲಿ ಉತ್ಸಾಹ ತುಂಬಲು ಹೀಗೆ ಹಾಡು, ನೃತ್ಯ ಮತ್ತಿತರೇ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ತೊಡಗಿಕೊಳ್ಳುವ ಸಾಕಷ್ಟು ವಿಡಿಯೋಗಳನ್ನು ನೀವು ನೋಡಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ್ದಾರೆ. ನೆಟ್ಟಿಗರು ಈ ವಿಡಿಯೋ ನೋಡಿ ಕೋಪಗೊಂಡಿದ್ದಾರೆ. ಶಿಕ್ಷಕಿಯ ಈ ನಡೆ ಉಚಿತವಾಗಿಲ್ಲ ಎಂದು ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶಿಕ್ಷಕಿಯೂ ಮತ್ತು ಮಕ್ಕಳು ಖುಷಿಯಿಂದಲೇ ಈ ನೃತ್ಯದಲ್ಲಿ ಪಾಲ್ಗೊಂಡಿದ್ದಾರೆ. ಪಾಟ್ಲಿ ಕಮಾರಿಯಾ ಮೋರಿ ಎಂಬ ಹಾಡಿಗೆ ನೃತ್ಯವನ್ನು ಮಾಡುತ್ತಿದ್ದಾರೆ ಈ ಶಿಕ್ಷಕಿ. ಇವರು ರೀಲ್ಸ್​ಗಾಗಿಯೇ ಈ ವಿಡಿಯೋ ಮಾಡಿದಂತಿದೆ ಹಾಗಾಗಿ ಇವರನ್ನು ಅಮಾನತುಗೊಳಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

26,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ಶಿಕ್ಷಕಿ ಅಸಭ್ಯ ರೀತಿಯಲ್ಲಿ ನರ್ತಿಸಿದ್ಧಾರೆ ಎಂದು ನೆಟ್ಟಿಗರು ದೂರುತ್ತಿದ್ದಾರೆ. ತಕ್ಷಣವೇ ಈಕೆಯನ್ನು ಅಮಾನತುಗೊಳಿಸಬೇಕು. ಮಕ್ಕಳೆದುರು ಇಂಥ ನೃತ್ಯಗಳು ಸಲ್ಲದು, ಇದು ಶಿಕ್ಷಕ ವೃತ್ತಿಗೇ ಅವಮಾನ ಎಂದಿದ್ದಾರೆ ಒಬ್ಬರು.

ಐಟಂ ಡ್ಯಾನ್ಸ್ ಮಾಡಬೇಕಿಲ್ಲ ತರಗತಿಯಲ್ಲಿ. ಸನಾತನ ಧರ್ಮದಲ್ಲಿ ಶಿಕ್ಷಕ ಅಥವಾ ಗುರುವಿನ ಬಗ್ಗೆ ಅಪಾರ ಗೌರವ ಇದೆ. ಇದನ್ನು ಇಂದಿನ ಶಿಕ್ಷಕರು ಕಾಪಾಡಿಕೊಳ್ಳಬೇಕು ಮತ್ತು ಮಕ್ಕಳಿಗೂ ಕಲಿಸಬೇಕು ಎನ್ನುತ್ತಿದ್ಧಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:09 am, Sat, 3 December 22

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?