AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ನೆಟ್ಟಿಗರ ಒತ್ತಾಯ

Teacher : ಸನಾತನ ಧರ್ಮದಲ್ಲಿ ಗುರುವಿನ ಸ್ಥಾನಕ್ಕೆ ಅಪಾರ ಗೌರವವಿದೆ. ಇಂದಿನ ಶಿಕ್ಷಕರು ಇದನ್ನು ಕಾಪಾಡಿಕೊಳ್ಳಬೇಕು ಮಕ್ಕಳಿಗೂ ಕಲಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು. ಅಷ್ಟೇ ಅಲ್ಲ ಈ ನೃತ್ಯ ಅಸಭ್ಯವಾಗಿದೆ ಎಂದೂ ಹೇಳುತ್ತಿದ್ದಾರೆ.

ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ನೆಟ್ಟಿಗರ ಒತ್ತಾಯ
ತರಗತಿಯಲ್ಲಿ ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ ಶಿಕ್ಷಕಿ
TV9 Web
| Updated By: ಶ್ರೀದೇವಿ ಕಳಸದ

Updated on:Dec 03, 2022 | 10:10 AM

Share

Viral Video : ಶಿಕ್ಷಕರು ಮಕ್ಕಳಲ್ಲಿ ಉತ್ಸಾಹ ತುಂಬಲು ಹೀಗೆ ಹಾಡು, ನೃತ್ಯ ಮತ್ತಿತರೇ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ತೊಡಗಿಕೊಳ್ಳುವ ಸಾಕಷ್ಟು ವಿಡಿಯೋಗಳನ್ನು ನೀವು ನೋಡಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಮಕ್ಕಳೆದುರು ಭೋಜಪುರಿ ಹಾಡಿಗೆ ನರ್ತಿಸಿದ್ದಾರೆ. ನೆಟ್ಟಿಗರು ಈ ವಿಡಿಯೋ ನೋಡಿ ಕೋಪಗೊಂಡಿದ್ದಾರೆ. ಶಿಕ್ಷಕಿಯ ಈ ನಡೆ ಉಚಿತವಾಗಿಲ್ಲ ಎಂದು ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶಿಕ್ಷಕಿಯೂ ಮತ್ತು ಮಕ್ಕಳು ಖುಷಿಯಿಂದಲೇ ಈ ನೃತ್ಯದಲ್ಲಿ ಪಾಲ್ಗೊಂಡಿದ್ದಾರೆ. ಪಾಟ್ಲಿ ಕಮಾರಿಯಾ ಮೋರಿ ಎಂಬ ಹಾಡಿಗೆ ನೃತ್ಯವನ್ನು ಮಾಡುತ್ತಿದ್ದಾರೆ ಈ ಶಿಕ್ಷಕಿ. ಇವರು ರೀಲ್ಸ್​ಗಾಗಿಯೇ ಈ ವಿಡಿಯೋ ಮಾಡಿದಂತಿದೆ ಹಾಗಾಗಿ ಇವರನ್ನು ಅಮಾನತುಗೊಳಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

26,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ಶಿಕ್ಷಕಿ ಅಸಭ್ಯ ರೀತಿಯಲ್ಲಿ ನರ್ತಿಸಿದ್ಧಾರೆ ಎಂದು ನೆಟ್ಟಿಗರು ದೂರುತ್ತಿದ್ದಾರೆ. ತಕ್ಷಣವೇ ಈಕೆಯನ್ನು ಅಮಾನತುಗೊಳಿಸಬೇಕು. ಮಕ್ಕಳೆದುರು ಇಂಥ ನೃತ್ಯಗಳು ಸಲ್ಲದು, ಇದು ಶಿಕ್ಷಕ ವೃತ್ತಿಗೇ ಅವಮಾನ ಎಂದಿದ್ದಾರೆ ಒಬ್ಬರು.

ಐಟಂ ಡ್ಯಾನ್ಸ್ ಮಾಡಬೇಕಿಲ್ಲ ತರಗತಿಯಲ್ಲಿ. ಸನಾತನ ಧರ್ಮದಲ್ಲಿ ಶಿಕ್ಷಕ ಅಥವಾ ಗುರುವಿನ ಬಗ್ಗೆ ಅಪಾರ ಗೌರವ ಇದೆ. ಇದನ್ನು ಇಂದಿನ ಶಿಕ್ಷಕರು ಕಾಪಾಡಿಕೊಳ್ಳಬೇಕು ಮತ್ತು ಮಕ್ಕಳಿಗೂ ಕಲಿಸಬೇಕು ಎನ್ನುತ್ತಿದ್ಧಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:09 am, Sat, 3 December 22

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್