AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​; ಇದೀಗ ಗಂಡು ಮಗುವಿನ ತಂದೆ

ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗ ಬದಲಾಯಿಸಿಕೊಂಡಿದ್ದ ಮಹಿಳಾ ಪೊಲೀಸ್​​ ಪೇದೆ ಇದೀಗ ಗಂಡು ಮಗುವಿನ ತಂದೆಯಾಗಿರುವ ಖುಷಿಯನ್ನು ಹಂಚಿಕೊಂಡಿದ್ದಾರೆ. ಜೂನ್ 1988 ರಲ್ಲಿ ಹುಟ್ಟಿದ ಲಲಿತಾ ಸಾಳ್ವೆ 2020ರಲ್ಲಿ ಲಲಿತ್​​ ಕುಮಾರ್​​​​ ಆಗಿ ಬದಲಾಗಿದ್ದರು.

Maharashtra: ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​; ಇದೀಗ ಗಂಡು ಮಗುವಿನ ತಂದೆ
Lalit Kumar Salve
ಅಕ್ಷತಾ ವರ್ಕಾಡಿ
|

Updated on:Jan 21, 2024 | 12:05 PM

Share

ಮಹಾರಾಷ್ಟ್ರ:  ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗ ಬದಲಾಯಿಸಿಕೊಂಡಿದ್ದ ಮಹಿಳಾ ಪೊಲೀಸ್​​ ಪೇದೆ ಇದೀಗ ಗಂಡು ಮಗುವಿನ ತಂದೆಯಾಗಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.  ಬೀಡ್ ಜಿಲ್ಲೆಯ ಪೊಲೀಸ್ ಪೇದೆ ಲಲಿತ್ ಕುಮಾರ್ ಸಾಳ್ವೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಂತರ 2020ರಲ್ಲಿ ಸೀಮಾ ಎಂಬ ಯುವತಿಯನ್ನು ಮದುವೆಯಾಗಿದ್ದರು. 2018 ರಲ್ಲಿ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ನಂತರ, ಲಿಂಗ-ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪ್ರಕ್ರಿಯೆಯು 2018 ಮತ್ತು 2020 ರ ನಡುವೆ ಮೂರು ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿತ್ತು.ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​ ಪೇದೆ ಜನವರಿ 15ರಂದು ಗಂಡು ಮಗುವಿನ ತಂದೆಯಾಗಿದ್ದಾರೆ.

ಜೂನ್ 1988 ರಲ್ಲಿ ಹುಟ್ಟಿದ ಲಲಿತಾ ಸಾಳ್ವೆ 2020ರಲ್ಲಿ ಲಲಿತ್​​ ಕುಮಾರ್​​​​ ಆಗಿ ಬದಲಾಗಿದ್ದರು. 2013 ರಲ್ಲಿ ತನ್ನ ದೈಹಿಕ ಬದಲಾವಣೆಗಳನ್ನು ಗಮನಿಸಿ, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿದಾಗ ಲಲಿತ್​​​​​ ಅಲ್ಲಿ Y ಕ್ರೋಮೋಸೋಮ್ ಇರುವಿಕೆಯನ್ನು ವೈದ್ಯರು ಬಹಿರಂಗಪಡಿಸಿದ್ದರು. ಸಾಮಾನ್ಯವಾಗಿ ಹೆಣ್ಣಿನಲ್ಲಿ ಎರಡು X ಕ್ರೋಮೋಸೋಮ್​​ಗಳು ಇರುತ್ತವೆ. ಅದರಂತೆ ವೈದ್ಯರ ಸಲಹೆ ಮೇರೆಗೆ ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

“ಮಹಿಳೆಯಾಗಿ ಪ್ರಾರಂಭದಲ್ಲಿ ನನ್ನ ಪ್ರಯಾಣವು ಹೋರಾಟಗಳಿಂದ ತುಂಬಿತ್ತು. ಈ ಸಮಯದಲ್ಲಿ, ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವುದು ಸೂಕ್ತ ಎಂದೆನಿಸಿತ್ತು. ಈಗ ನಾನು ಸಂತೋಷವಾಗಿದ್ದೇನೆ. ನನ್ನ ಹೆಂಡತಿ ಸೀಮಾ ಮಗುವನ್ನು ಹೊಂದಲು ಬಯಸಿದ್ದಳು. ಈಗ ಕಂಡು ಮಗುವಿನ ಜನನವಾಗಿದೆ” ಎಂದು ಲಲಿತ್​​ ಕುಮಾರ್ ಸುದ್ದಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:55 am, Sun, 21 January 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?