AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​; ಇದೀಗ ಗಂಡು ಮಗುವಿನ ತಂದೆ

ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗ ಬದಲಾಯಿಸಿಕೊಂಡಿದ್ದ ಮಹಿಳಾ ಪೊಲೀಸ್​​ ಪೇದೆ ಇದೀಗ ಗಂಡು ಮಗುವಿನ ತಂದೆಯಾಗಿರುವ ಖುಷಿಯನ್ನು ಹಂಚಿಕೊಂಡಿದ್ದಾರೆ. ಜೂನ್ 1988 ರಲ್ಲಿ ಹುಟ್ಟಿದ ಲಲಿತಾ ಸಾಳ್ವೆ 2020ರಲ್ಲಿ ಲಲಿತ್​​ ಕುಮಾರ್​​​​ ಆಗಿ ಬದಲಾಗಿದ್ದರು.

Maharashtra: ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​; ಇದೀಗ ಗಂಡು ಮಗುವಿನ ತಂದೆ
Lalit Kumar Salve
Follow us
ಅಕ್ಷತಾ ವರ್ಕಾಡಿ
|

Updated on:Jan 21, 2024 | 12:05 PM

ಮಹಾರಾಷ್ಟ್ರ:  ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗ ಬದಲಾಯಿಸಿಕೊಂಡಿದ್ದ ಮಹಿಳಾ ಪೊಲೀಸ್​​ ಪೇದೆ ಇದೀಗ ಗಂಡು ಮಗುವಿನ ತಂದೆಯಾಗಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.  ಬೀಡ್ ಜಿಲ್ಲೆಯ ಪೊಲೀಸ್ ಪೇದೆ ಲಲಿತ್ ಕುಮಾರ್ ಸಾಳ್ವೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಂತರ 2020ರಲ್ಲಿ ಸೀಮಾ ಎಂಬ ಯುವತಿಯನ್ನು ಮದುವೆಯಾಗಿದ್ದರು. 2018 ರಲ್ಲಿ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ನಂತರ, ಲಿಂಗ-ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪ್ರಕ್ರಿಯೆಯು 2018 ಮತ್ತು 2020 ರ ನಡುವೆ ಮೂರು ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿತ್ತು.ಗಂಡಾಗಿ ಬದಲಾಗಿದ್ದ ಮಹಿಳಾ ಪೊಲೀಸ್​​​​​​ ಪೇದೆ ಜನವರಿ 15ರಂದು ಗಂಡು ಮಗುವಿನ ತಂದೆಯಾಗಿದ್ದಾರೆ.

ಜೂನ್ 1988 ರಲ್ಲಿ ಹುಟ್ಟಿದ ಲಲಿತಾ ಸಾಳ್ವೆ 2020ರಲ್ಲಿ ಲಲಿತ್​​ ಕುಮಾರ್​​​​ ಆಗಿ ಬದಲಾಗಿದ್ದರು. 2013 ರಲ್ಲಿ ತನ್ನ ದೈಹಿಕ ಬದಲಾವಣೆಗಳನ್ನು ಗಮನಿಸಿ, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿದಾಗ ಲಲಿತ್​​​​​ ಅಲ್ಲಿ Y ಕ್ರೋಮೋಸೋಮ್ ಇರುವಿಕೆಯನ್ನು ವೈದ್ಯರು ಬಹಿರಂಗಪಡಿಸಿದ್ದರು. ಸಾಮಾನ್ಯವಾಗಿ ಹೆಣ್ಣಿನಲ್ಲಿ ಎರಡು X ಕ್ರೋಮೋಸೋಮ್​​ಗಳು ಇರುತ್ತವೆ. ಅದರಂತೆ ವೈದ್ಯರ ಸಲಹೆ ಮೇರೆಗೆ ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

“ಮಹಿಳೆಯಾಗಿ ಪ್ರಾರಂಭದಲ್ಲಿ ನನ್ನ ಪ್ರಯಾಣವು ಹೋರಾಟಗಳಿಂದ ತುಂಬಿತ್ತು. ಈ ಸಮಯದಲ್ಲಿ, ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವುದು ಸೂಕ್ತ ಎಂದೆನಿಸಿತ್ತು. ಈಗ ನಾನು ಸಂತೋಷವಾಗಿದ್ದೇನೆ. ನನ್ನ ಹೆಂಡತಿ ಸೀಮಾ ಮಗುವನ್ನು ಹೊಂದಲು ಬಯಸಿದ್ದಳು. ಈಗ ಕಂಡು ಮಗುವಿನ ಜನನವಾಗಿದೆ” ಎಂದು ಲಲಿತ್​​ ಕುಮಾರ್ ಸುದ್ದಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:55 am, Sun, 21 January 24

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ