AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೋರುತಿಹುದು ರೈಲುಮಾಳಿಗೀ; ‘ವಂದೇಭಾರತ್’ನ ಪ್ರಯಾಣಿಕರಿಗೆ ಉಚಿತ ಶವರ್

Vande Bharat Express: ಲಿರಿಲ್​ ಸಾಬೂನಿನ ಮುಂದಿನ ಜಾಹೀರಾತನ್ನು ಚಿತ್ರೀಕರಿಸಲು ಇದು ಸುಂದರವಾದ ಸ್ಥಳ. ಈ ರೈಲಿನಲ್ಲಿ ಪ್ರಯಾಣಿಸಲು ಆಧಾರ್, ಪ್ಯಾನ್​ ಲಿಂಕ್ ಮಾಡಿದರೆ ಸಾಕೇ? ಅಂತೆಲ್ಲ ಪಟ್ಟಾಂಗ ಹೊಡೆಯುತ್ತಿದ್ದಾರೆ ನೆಟ್ಟಿಗರು.

Viral Video: ಸೋರುತಿಹುದು ರೈಲುಮಾಳಿಗೀ; 'ವಂದೇಭಾರತ್'ನ ಪ್ರಯಾಣಿಕರಿಗೆ ಉಚಿತ ಶವರ್
ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ ಅಸ್ತವ್ಯಸ್ಥಗೊಂಡ ಏರ್​ಕೂಲರ್​ನಿಂದಾಗಿ ನೀರೋನೀರು​
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 15, 2023 | 5:33 PM

Share

Indian Railways : ”ಕೇಳಿರಿ ಕೇಳಿರಿ! ಭಾರತೀಯ ರೈಲುಪ್ರಯಾಣಿಕರಿಗೆ ಶುಭ ಸುದ್ದಿ, ಬೆಳಗ್ಗೆ 6ಕ್ಕೆ ಶುರುವಾಗುವ ವಂದೇಭಾರತ್ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುವವರಿಗೆ ಉಚಿತವಾಗಿ ಮತ್ತು ಕಡ್ಡಾಯವಾಗಿ ಶವರ್ ಸೌಲಭ್ಯ. ಮೋದಿಯವರ ನಾಯಕತ್ವದಲ್ಲಿ ಆರಂಭಗೊಂಡ ಈ ದೂರದೃಷ್ಟಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂಥವರಾಗಿ”; ವಿಡಿಯೋ ಟ್ವೀಟ್​ ಇದೀಗ ವೈರಲ್ ಆಗುತ್ತಿದೆ. ಇದಕ್ಕೆ ಪ್ರತ್ಯೇಕ ಭತ್ಯೆ ಭರಿಸಬೇಕೇ ಅಥವಾ ಪ್ಯಾನ್​, ಆಧಾರ್​ ಕಾರ್ಡ್​ ಲಿಂಕ್ ಮಾಡಿದರೆ ಸಾಕೇ? ಎಂದು ನೆಟ್ಟಿಗರು ಒಕ್ಕೊರಲಿನಿಂದ ಕೇಳುತ್ತಿದ್ದಾರೆ.

ಅಯ್ಯೋ ಮೋದಿಯವರಿಗೆ ಇಂಥಾ ಐಡಿಯಾಗಳನ್ನು ಕೊಡಬೇಡಿ. ಮೊದಲೇ ಅವರು ಅತ್ಯುತ್ತಮ ದಾರ್ಶನಿಕರು, ಈ ಯೋಜನೆಯನ್ನು ಜಾರಿ ತಂದಲ್ಲಿ ಕೃತಜ್ಞತೆ ಸಲ್ಲಿಸಬೇಕಾಗುತ್ತದೆ ಎಂದು ಕೆಲವರು ವ್ಯಂಗ್ಯವಾಡಿದ್ದಾರೆ. ಫಸ್ಟ್​ ಕ್ಲಾಸ್​ ಬೋಗಿಗಳನ್ನು ಬುಕ್​ ಮಾಡಿನೋಡಿ, ಅಲ್ಲಿ ಟಬ್​ಗಳನ್ನೇ ಅಳವಡಿಸಲಾಗಿದೆ ಎಂದು ಒಬ್ಬರು ಹೇಳಿದ್ದಾರೆ. ಹೌದು ಕಳೆದ ತಿಂಗಳು ನಾವು ವಂದೇಭಾರತ್​ ರೈಲಿನಲ್ಲಿ ಪ್ರಯಾಣಿಸಿದಾಗ ಎಸಿಯಿಂದ ನೀರು ಸೋರುತ್ತಿದೆ ಎಂದು ಎಕ್ಸಿಕ್ಯೂಟಿವ್​ ಕ್ಲಾಸ್​ನಿಂದ ಯಾರೋ ಸ್ಪೀಕರ್​ನಲ್ಲಿ ಕೂಗುತ್ತಿರುವುದು ಕೇಳಿಸಿತ್ತು ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Rahul Gandhi: ಅಮೆರಿಕನ್​ ಟ್ರಕ್ ಯಾತ್ರಾ; ವಾಷಿಂಗ್ಟನ್​ ಡಿಸಿಯಿಂದ ನ್ಯೂಯಾರ್ಕ್​ಗೆ ರಾಹುಲ್ ಪ್ರಯಾಣ

ವೈಫಲ್ಯಗಳು ಸಂಭವಿಸುತ್ತವೆ ನಿಜ. ಹಾಗಂತ ದೇಶ ಪಕ್ಷ ರಾಷ್ಟ್ರವನ್ನು ಲೆಕ್ಕಿಸದೇ ಇಂತಹ ವಿಷಯಗಳಿಗಾಗಿ ಪ್ರಧಾನಿಯನ್ನು ಅಪಹಾಸ್ಯ ಮಾಡುವ ಅಗತ್ಯವಿಲ್ಲ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಿ ಎಂದು ಟೀಕಾಕಾರರಿಗೆ ಮೋದಿ ಅಭಿಮಾನಿಗಳು ಬುದ್ಧಿವಾದ ಹೇಳಿದ್ದಾರೆ. ಆದರೂ ನೆಟ್ಟಿಗರು ಸುಮ್ಮನಿರದೆ; ಲಿರಿಲ್​ ಸಾಬೂನಿನ ಮುಂದಿನ ಜಾಹೀರಾತನ್ನು ಚಿತ್ರೀಕರಿಸಲು ಇದು ಸುಂದರವಾದ ಸ್ಥಳ ಎಂದು ಹಾಸ್ಯವಾಡಿದ್ದಾರೆ. ಪ್ರಯಾಣಿಕರು ಭಾರೀ ಹಣ ತೆತ್ತು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಆಹಾರದಿಂದ ಹಿಡಿದು ಇನ್ನಿತರೇ ಸೌಲಭ್ಯಗಳ ಬಗ್ಗೆ ಮೋದಿ ಸರ್ಕಾರ ಗಮನಹರಿಸಬೇಕು ಎಂದಿದ್ದಾರೆ.

ಶವರ್​ ಯೋಜನೆ ಮುಕ್ತಾಯಗೊಳ್ಳುವ ಮೊದಲೇ ವಂದೇಭಾರತ್ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುವ ಆಸೆಯುಂಟಾಗುತ್ತಿದೆಯೇ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:12 pm, Thu, 15 June 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ