AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೋರುತಿಹುದು ರೈಲುಮಾಳಿಗೀ; ‘ವಂದೇಭಾರತ್’ನ ಪ್ರಯಾಣಿಕರಿಗೆ ಉಚಿತ ಶವರ್

Vande Bharat Express: ಲಿರಿಲ್​ ಸಾಬೂನಿನ ಮುಂದಿನ ಜಾಹೀರಾತನ್ನು ಚಿತ್ರೀಕರಿಸಲು ಇದು ಸುಂದರವಾದ ಸ್ಥಳ. ಈ ರೈಲಿನಲ್ಲಿ ಪ್ರಯಾಣಿಸಲು ಆಧಾರ್, ಪ್ಯಾನ್​ ಲಿಂಕ್ ಮಾಡಿದರೆ ಸಾಕೇ? ಅಂತೆಲ್ಲ ಪಟ್ಟಾಂಗ ಹೊಡೆಯುತ್ತಿದ್ದಾರೆ ನೆಟ್ಟಿಗರು.

Viral Video: ಸೋರುತಿಹುದು ರೈಲುಮಾಳಿಗೀ; 'ವಂದೇಭಾರತ್'ನ ಪ್ರಯಾಣಿಕರಿಗೆ ಉಚಿತ ಶವರ್
ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ ಅಸ್ತವ್ಯಸ್ಥಗೊಂಡ ಏರ್​ಕೂಲರ್​ನಿಂದಾಗಿ ನೀರೋನೀರು​
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 15, 2023 | 5:33 PM

Share

Indian Railways : ”ಕೇಳಿರಿ ಕೇಳಿರಿ! ಭಾರತೀಯ ರೈಲುಪ್ರಯಾಣಿಕರಿಗೆ ಶುಭ ಸುದ್ದಿ, ಬೆಳಗ್ಗೆ 6ಕ್ಕೆ ಶುರುವಾಗುವ ವಂದೇಭಾರತ್ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುವವರಿಗೆ ಉಚಿತವಾಗಿ ಮತ್ತು ಕಡ್ಡಾಯವಾಗಿ ಶವರ್ ಸೌಲಭ್ಯ. ಮೋದಿಯವರ ನಾಯಕತ್ವದಲ್ಲಿ ಆರಂಭಗೊಂಡ ಈ ದೂರದೃಷ್ಟಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂಥವರಾಗಿ”; ವಿಡಿಯೋ ಟ್ವೀಟ್​ ಇದೀಗ ವೈರಲ್ ಆಗುತ್ತಿದೆ. ಇದಕ್ಕೆ ಪ್ರತ್ಯೇಕ ಭತ್ಯೆ ಭರಿಸಬೇಕೇ ಅಥವಾ ಪ್ಯಾನ್​, ಆಧಾರ್​ ಕಾರ್ಡ್​ ಲಿಂಕ್ ಮಾಡಿದರೆ ಸಾಕೇ? ಎಂದು ನೆಟ್ಟಿಗರು ಒಕ್ಕೊರಲಿನಿಂದ ಕೇಳುತ್ತಿದ್ದಾರೆ.

ಅಯ್ಯೋ ಮೋದಿಯವರಿಗೆ ಇಂಥಾ ಐಡಿಯಾಗಳನ್ನು ಕೊಡಬೇಡಿ. ಮೊದಲೇ ಅವರು ಅತ್ಯುತ್ತಮ ದಾರ್ಶನಿಕರು, ಈ ಯೋಜನೆಯನ್ನು ಜಾರಿ ತಂದಲ್ಲಿ ಕೃತಜ್ಞತೆ ಸಲ್ಲಿಸಬೇಕಾಗುತ್ತದೆ ಎಂದು ಕೆಲವರು ವ್ಯಂಗ್ಯವಾಡಿದ್ದಾರೆ. ಫಸ್ಟ್​ ಕ್ಲಾಸ್​ ಬೋಗಿಗಳನ್ನು ಬುಕ್​ ಮಾಡಿನೋಡಿ, ಅಲ್ಲಿ ಟಬ್​ಗಳನ್ನೇ ಅಳವಡಿಸಲಾಗಿದೆ ಎಂದು ಒಬ್ಬರು ಹೇಳಿದ್ದಾರೆ. ಹೌದು ಕಳೆದ ತಿಂಗಳು ನಾವು ವಂದೇಭಾರತ್​ ರೈಲಿನಲ್ಲಿ ಪ್ರಯಾಣಿಸಿದಾಗ ಎಸಿಯಿಂದ ನೀರು ಸೋರುತ್ತಿದೆ ಎಂದು ಎಕ್ಸಿಕ್ಯೂಟಿವ್​ ಕ್ಲಾಸ್​ನಿಂದ ಯಾರೋ ಸ್ಪೀಕರ್​ನಲ್ಲಿ ಕೂಗುತ್ತಿರುವುದು ಕೇಳಿಸಿತ್ತು ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Rahul Gandhi: ಅಮೆರಿಕನ್​ ಟ್ರಕ್ ಯಾತ್ರಾ; ವಾಷಿಂಗ್ಟನ್​ ಡಿಸಿಯಿಂದ ನ್ಯೂಯಾರ್ಕ್​ಗೆ ರಾಹುಲ್ ಪ್ರಯಾಣ

ವೈಫಲ್ಯಗಳು ಸಂಭವಿಸುತ್ತವೆ ನಿಜ. ಹಾಗಂತ ದೇಶ ಪಕ್ಷ ರಾಷ್ಟ್ರವನ್ನು ಲೆಕ್ಕಿಸದೇ ಇಂತಹ ವಿಷಯಗಳಿಗಾಗಿ ಪ್ರಧಾನಿಯನ್ನು ಅಪಹಾಸ್ಯ ಮಾಡುವ ಅಗತ್ಯವಿಲ್ಲ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಿ ಎಂದು ಟೀಕಾಕಾರರಿಗೆ ಮೋದಿ ಅಭಿಮಾನಿಗಳು ಬುದ್ಧಿವಾದ ಹೇಳಿದ್ದಾರೆ. ಆದರೂ ನೆಟ್ಟಿಗರು ಸುಮ್ಮನಿರದೆ; ಲಿರಿಲ್​ ಸಾಬೂನಿನ ಮುಂದಿನ ಜಾಹೀರಾತನ್ನು ಚಿತ್ರೀಕರಿಸಲು ಇದು ಸುಂದರವಾದ ಸ್ಥಳ ಎಂದು ಹಾಸ್ಯವಾಡಿದ್ದಾರೆ. ಪ್ರಯಾಣಿಕರು ಭಾರೀ ಹಣ ತೆತ್ತು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಆಹಾರದಿಂದ ಹಿಡಿದು ಇನ್ನಿತರೇ ಸೌಲಭ್ಯಗಳ ಬಗ್ಗೆ ಮೋದಿ ಸರ್ಕಾರ ಗಮನಹರಿಸಬೇಕು ಎಂದಿದ್ದಾರೆ.

ಶವರ್​ ಯೋಜನೆ ಮುಕ್ತಾಯಗೊಳ್ಳುವ ಮೊದಲೇ ವಂದೇಭಾರತ್ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುವ ಆಸೆಯುಂಟಾಗುತ್ತಿದೆಯೇ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:12 pm, Thu, 15 June 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ