AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರು; ‘ನಾಯಿಮಾಂಸ ಕಾನೂನುಬದ್ಧಗೊಳಿಸಿ’ ಭಿತ್ತಿಫಲಕ ಹಿಡಿದ ಯುವಕನ ವಿರುದ್ಧ ನೆಟ್ಟಿಗರ ಆಕ್ರೋಶ

Bengaluru : ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ಈತನನ್ನು ನೋಡಿದೆ, ಮಾತನಾಡಿಸಿದೆ, ಈತ ಬಹಳ ಸ್ಮಾರ್ಟ್​ ಆಗಿದ್ದಾನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಈತ ಯಾರು? ಏನು ಎನ್ನುವ ಬಗ್ಗೆ ಸುಳಿವಿಲ್ಲ. ಈ ಪೋಸ್ಟ್​ನ ಸತ್ಯಾಸತ್ಯತೆಯ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿದ ನೀವು ಏನು ಅಭಿಪ್ರಾಯ ನೀಡುತ್ತೀರಿ ಎಂಬ ಕುತೂಹಲ ನಮಗಿದೆ.

Viral: ಬೆಂಗಳೂರು; 'ನಾಯಿಮಾಂಸ ಕಾನೂನುಬದ್ಧಗೊಳಿಸಿ' ಭಿತ್ತಿಫಲಕ ಹಿಡಿದ ಯುವಕನ ವಿರುದ್ಧ ನೆಟ್ಟಿಗರ ಆಕ್ರೋಶ
ನಾಯಿಮಾಂಸವನ್ನು ಕಾನೂನುಬದ್ಧಗೊಳಿಸಿ ಎಂದು ಭಿತ್ತಿಫಲಕ ಹಿಡಿದು ಸಹಿ ಕೇಳುತ್ತಿರುವ ಬೆಂಗಳೂರಿನ ಯುವಕ
ಶ್ರೀದೇವಿ ಕಳಸದ
|

Updated on:Aug 23, 2023 | 5:56 PM

Share

Dog Meat : ‘ನಾಯಿ ಮಾಂಸವನ್ನು ಕಾನೂನುಬದ್ಧಗೊಳಿಸಿ ಮತ್ತು ನನ್ನ ಈ ಮನವಿಗೆ ಸಹಿ ಹಾಕಿ’ ಎಂಬ ಭಿತ್ತಿಫಲಕವನ್ನು ಹಿಡಿದ ಯುವಕನ ಫೋಟೋ X (Twitter)ನಲ್ಲಿ ಭಾರೀ ವೈರಲ್ ಆಗುತ್ತಿದೆ. ನೆಟ್ಟಿಗರು ಪರ ವಿರೋಧ ಚರ್ಚೆಗಳಲ್ಲಿ ಮುಳುಗಿದ್ದಾರೆ. ಇದು ಬೆಂಗಳೂರಿನ ಚರ್ಚ್​ ಸ್ಟ್ರೀಟ್ ಎಂದು ಒಬ್ಬರು ಹೇಳಿದ್ದಾರೆ. ಈ ವ್ಯಕ್ತಿ ಈಗಲೂ ಅಲ್ಲೇ ಇದ್ಧಾನೆಯೇ? ಹಾಂ ಇವನ ಸುತ್ತಲೂ ಜನ ಮುತ್ತಿಕೊಂಡಿದ್ದಾರೆ. ನಾನು ನಿನ್ನೆ ಇವನನ್ನು ಇದೇ ಜಾಗದಲ್ಲಿ ನೋಡಿದೆ, ಅವನ ಮುಖದ ಮೇಲೆ ಹೊಡೆಯುವಷ್ಟು ಹತ್ತಿರವಿದ್ದೆ. ಯಾಕ್ ಗುರು ಡಾಗ್ ಬಿಸ್ಕೆಟ್​ ತಿಂದು ಬೇಜಾರಾಯ್ತಾ? ಇವನನ್ನು ಯೋಗಿಜೀ ಬಳಿ ಕಳಿಸಿ ಉತ್ತಪ್ರದೇಶಕ್ಕೆ… ಅಂತೆಲ್ಲ ಪ್ರತಿಕ್ರಿಯೆಗಳು ಈ ಪೋಸ್ಟ್​ನಡಿ ಇವೆ. ಆ. 20ರಂದು ಋಗ್ವೇದ್​​ ಎನ್ನುವವರು ಈ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ : Viral Video: ‘ಕಾನ್ಫಿಡೆನ್ಸ್​ ಈಸ್ ಸೆಕ್ಸಿ’; ಮಾಡೆಲಿಂಗ್ ಕ್ಷೇತ್ರಕ್ಕೆ ಈಕೆ ಕಾಲಿಟ್ಟಾಗ ವಯಸ್ಸು 50!  

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಬೆಂಗಳೂರಿನ ಯುವಕನೊಬ್ಬ ಇಂಥ ವಿಚಿತ್ರ ಮನವಿಯುಳ್ಳ ಭಿತ್ತಿಫಲಕವನ್ನು ಹಿಡಿದು ಬೆಂಗಳೂರಿನಲ್ಲಿ ಬೀದಿಗಿಳಿದ ಚಿತ್ರ ಇದಾಗಿದೆ. ಈತನಕ ಸುಮಾರು 4.5 ಲಕ್ಷ ಜನರು ಇದನ್ನು ನೋಡಿದ್ದಾರೆ. 1,300 ಜನರು ಲೈಕ್ ಮಾಡಿದ್ದಾರೆ. 110 ಜನರು ರೀಪೋಸ್ಟ್ ಮಾಡಿದ್ದಾರೆ. ಈ ಯುವಕ ತಮಾಷೆ ಮಾಡುತ್ತಿದ್ದಾನೆ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಇದು ಆತಂಕ ಹುಟ್ಟಿಸುತ್ತಿದೆ ಎಂದು ಹೇಳಿದ್ದಾರೆ.

X ನಲ್ಲಿ ಹರಿದಾಡುತ್ತಿರುವ ಈ ಫೋಟೋ

ನಾನು ಈ ವ್ಯಕ್ತಿಯೊಂದಿಗೆ ಮಾತನಾಡಿ ಅವನ ವಿಚಿತ್ರ ಮನವಿಯ ಹಿಂದಿನ ಕಾರಣವನ್ನು ತಿಳಿದುಕೊಂಡಿದ್ದೇನೆ. ಎಂದು ಹೇಳಿಕೊಂಡಿದ್ದಾರೆ. ಅವನು ಮೂಲತಃ ಸಸ್ಯಾಹಾರಿ. ನೀವು ಕೋಳಿಗಳನ್ನು ತಿನ್ನುತ್ತೀರಾದರೆ ನಾಯಿಗಳನ್ನು ಏಕೆ ತಿನ್ನಬಾರದು? ಎಂದು ಸುಮಾರು ಅರ್ಧಗಂಟೆಯ ತನಕ ವಾದಿಸಿದ. ಆನಂತರ, ನೀವು ಸಸ್ಯಾಹಾರಿಯಾಗಿದ್ದರೆ ಈ ಫಲಕವನ್ನು ಏಕೆ ಹಿಡಿದುಕೊಂಡಿದ್ದೀರಿ? ಎಂದೆ. ನಿಜಕ್ಕೂ ಅವ ತುಂಬಾ ಸ್ಮಾರ್ಟ್​ ಆಗಿದ್ದಾನೆ ಎಂದಿದ್ದಾರೆ ಒಬ್ಬರು. ಒಟ್ಟಾರೆಯಾಗಿ ಇದು ತುಂಬಾ ತಮಾಷೆಯಿಂದ ಕೂಡಿದೆ ಎನ್ನುತ್ತಿದ್ದಾರೆ ಅನೇಕರು. ಸುಮ್ಮನೆ ಪ್ರಚಾರ ಗಿಟ್ಟಿಸಿಕೊಳ್ಳಲು ಇಂಥವರು ಇಂಥ ಕೆಲಸಗಳನ್ನು ಮಾಡುತ್ತಾರೆ ಎಂದಿದ್ದಾರೆ ಕೆಲವರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 5:55 pm, Wed, 23 August 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು