Trending: ನಾಯಿ ಮೇಲೆ ಚಿರತೆ ದಾಳಿ, ಭಯಾನಕ ವಿಡಿಯೋ ವೈರಲ್

ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಾಯಿ ಮೇಲೆ ಚಿರತೆ ನಡೆಸಿದ ಭಯಾನಕ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅರಣ್ಯ ಸಂರಕ್ಷಣಾಧಿಕಾರಿಯವರು ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

Trending: ನಾಯಿ ಮೇಲೆ ಚಿರತೆ ದಾಳಿ, ಭಯಾನಕ ವಿಡಿಯೋ ವೈರಲ್
ನಾಯಿ ಮೇಲೆ ಚಿರತೆ ದಾಳಿImage Credit source: ANI
Follow us
| Updated By: Rakesh Nayak Manchi

Updated on:Jun 07, 2022 | 10:13 AM

ಹುಲಿ, ಚಿರತೆಗಳು ಕಾಡು ಬಿಟ್ಟು ಗ್ರಾಮಗಳಿಗೆ ನುಗ್ಗಿ ದಾಳಿ ಮಾಡುತ್ತಿವೆ. ಅದೇ ರೀತಿ ಗ್ರಾಮವೊಂದಕ್ಕೆ ಎಂಟ್ರಿಕೊಟ್ಟ ಚಿರತೆ (Leopard) ನಾಯಿ ಮೇಲೆ ದಾಳಿ (Attack) ನಡೆಸಿದೆ. ಮಹಾರಾಷ್ಟ್ರದ ನಾಸಿಕ್‌ನ ಭಯಾನಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದ್ದು, ಅರಣ್ಯ ಸಂರಕ್ಷಣಾಧಿಕಾರಿಯವರು ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Trending: ”ಯಾ.. ನಾನು ಹಾರ್ನ್​ ಹಾಕಿಸಿದೆ” ವಿಡಿಯೋ ವೈರಲ್

ವಿಡಿಯೋದಲ್ಲಿರುವಂತೆ, ಕೆಂಪು ಕಾಲರ್ ಪಟ್ಟಿ ಧರಿಸಿರುವ ಕಪ್ಪು ನಾಯಿಯು ತಗ್ಗು ಗೋಡೆಯ ಮೇಲೆ ಕುಳಿತುಕೊಂಡಿರುತ್ತದೆ. ಕೆಲವು ಸೆಕೆಂಡುಗಳ ನಂತರ ನಾಯಿಗೆ ಚಿರತೆ ಕಾಣಿಸಿಕೊಳ್ಳುತ್ತದೆ. ಆರಂಭದಲ್ಲಿ ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದೆ. ನಂತರ ಮತ್ತೆ ನಾಯಿ ಗೋಡೆ ಮೇಲೆ ಹಾರಿದಾಗ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ. ಕೂಡಲೇ ಚಿರತೆ ನಾಯಿಯನ್ನು ಹಿಡಿದು ಕೊಂಡೊಯ್ದಿದೆ.

ನಾಯಿ ಮೇಲಿನ ಚಿರತೆಯ ದಾಳಿಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ಸುದ್ದಿ ಸಂಸ್ಥೆ ಎಎನ್​ಐ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, 85k ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದನ್ನೂ ಓದಿ: Trending: ಮಹಿಳೆಯ ತಲೆಕೂದಲಿಗೆ ಸಿಲುಕಿಕೊಂಡ ಮರಕುಟಿಗ! ಮುಂದೇನಾಯ್ತು ಗೊತ್ತಾ?

ವಿಡಿಯೋ ವೀಕ್ಷಿಸಿ:

ಈ ಬಗ್ಗೆ ANI ಜೊತೆ ಮಾತನಾಡಿದ ನಾಸಿಕ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಂಕಜ್ ಗಾರ್ಗ್, “ಚಿರತೆ ಚಟುವಟಿಕೆಯು ಮುಂಗ್ಸಾರೆ ಪ್ರದೇಶದಲ್ಲಿ ಹೆಚ್ಚಿರುವುದರಿಂದ ರಾತ್ರಿಯಲ್ಲಿ ಮನೆಯೊಳಗೆ ಇರುವಂತೆ ನಾವು ಗ್ರಾಮದ ಜನರಿಗೆ ಮನವಿ ಮಾಡುತ್ತೇವೆ. ಜನರು ಎಚ್ಚರದಿಂದಿರಬೇಕು” ಎಂದಿದ್ದಾರೆ.

ವಿಡಿಯೋ ವೀಕ್ಷಿಸಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಓರ್ವ ನೆಟ್ಟಿಗ, ಚಿರತೆ ದಾಳಿ ಮಾಡಬಹುದೆಂದು ತಿಳಿದಾಗ ಅವರು ತಮ್ಮ ಸಾಕು ನಾಯಿಗಳನ್ನು ಹೊರಗೆ ಏಕೆ ಇಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ನೆಟ್ಟಿಗ, ಅದು ಚಿರತೆಗೆ ಆಹಾರವಾಗಿದೆ ಎಂದಿದ್ದಾರೆ. ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ನಾಸಿಕ್‌ನಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತಿರುವುದು ಸಾಮಾನ್ಯವಾಗಿದೆ. ಜನವರಿಯಲ್ಲಿ ನಾಸಿಕ್ ನಗರದ ವಸತಿ ಪ್ರದೇಶದಿಂದ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಗಿತ್ತು. ಘಟನೆಯಲ್ಲಿ ಓರ್ವನ ಮೇಲೆ ಹಲ್ಲೆ ನಡೆದಿತ್ತು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 am, Tue, 7 June 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ