AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Dec 25, 2021 | 10:06 AM

Share

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ