AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಂಬೈ: ಮರಾಠಿ ಧಾರಾವಾಹಿ ಸೆಟ್​ನಲ್ಲಿ ಕಾಣಿಸಿಕೊಂಡ ಮರಿಚಿರತೆ

Leopard : ಇದು ಮೊದಲ ಸಲವೇನಲ್ಲ, ಕಳೆದ 10 ದಿನಗಳಲ್ಲಿ ಗೋರೆಗಾಂವ್​ನ ಫಿಲ್ಮ್​ ಸಿಟಿಯಲ್ಲಿ ಇದು ನಾಲ್ಕನೇ ಪ್ರಕರಣವಾಗಿದೆ. ಸೀರಿಯಲ್ ತಂಡಕ್ಕೆ ಚಿರತೆಗಳು ದುಃಸ್ವಪ್ನದಂತೆ ಕಾಡುತ್ತಿವೆ.

Viral: ಮುಂಬೈ: ಮರಾಠಿ ಧಾರಾವಾಹಿ ಸೆಟ್​ನಲ್ಲಿ ಕಾಣಿಸಿಕೊಂಡ ಮರಿಚಿರತೆ
ಚಿರತೆಮರಿಯೊಂದು ಗೋರೆಗಾಂವ್​ ಫಿಲ್ಮ್​ ಸಿಟಿಯ ಸೀರಿಯಲ್ ಸೆಟ್​ನೊಳಗೆ ಚಲಿಸುತ್ತಿರುವುದು
ಶ್ರೀದೇವಿ ಕಳಸದ
|

Updated on:Jul 27, 2023 | 1:41 PM

Share

Mumbai : ಮುಂಬೈನ ಗೋರೆಗಾಂವ್​ ಫಿಲ್ಮ್​ ಸಿಟಿಯ (Film City) ಮರಾಠಿ ಸೀರಿಯಲ್​ ಸೆಟ್​ನಲ್ಲಿ ಮತ್ತೆ ಚಿರತೆಮರಿಯೊಂದು ಕಾಣಿಸಿಕೊಂಡಿದೆ. ಪರಿಣಾಮವಾಗಿ ಅಲ್ಲಿ ಕೆಲಸದಲ್ಲಿ ತೊಡಗಿದ್ದ ಸೀರಿಯಲ್​ನ ತಂಡದವರು ಭಯದಿಂದ ಓಡಿದ್ದಾರೆ. ಈ ದೃಶ್ಯವನ್ನು ANI ಸುದ್ದಿಸಂಸ್ಥೆಯು ಟ್ವೀಟ್​ ಮಾಡಿದೆ. ಆಲ್ ಇಂಡಿಯನ್ ಸಿನಿ ವರ್ಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷ ಸುರೇಶ್ ಶ್ಯಾಮಲಾಲ್ ಗುಪ್ತಾ, ‘ಸೆಟ್‌ನಲ್ಲಿ 200 ಕ್ಕೂ ಹೆಚ್ಚು ಜನರಿದ್ದರು. ಯಾರಾದರೂ ಪ್ರಾಣಾಪಾಯಕ್ಕೆ ಈಡಾಗುವ ಸಾಧ್ಯತೆ ಇತ್ತು. ಕಳೆದ 10 ದಿನಗಳಲ್ಲಿ ಈ ಪ್ರಕರಣ ನಾಲ್ಕನೇ ಸಲ ಮರುಕಳಿಸಿದೆ. ಈ ನಿಟ್ಟಿನಲ್ಲಿ ಈತನಕವೂ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ’ ಎಂದು ಕಿಡಿಕಾರಿದ್ದಾರೆ.

‘ಅಜೂನಿ’ ಧಾರಾವಾಹಿಯ ಸೆಟ್​ನೊಳಗೆ ಕಾಡುಪ್ರಾಣಿಗಳು ಕಾಣಿಸಿಕೊಳ್ಳುತ್ತಿವೆ. ಜು. 18ರಂದು ಫಿಲ್ಮ್ ಸಿಟಿಯಲ್ಲಿರುವ ನಾಯಿಯೊಂದರ ಮೇಲೆ ಚಿರತೆಯು ದಾಳಿ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಘಟನೆಯ ನಂತರ ರೆಸ್ಕಿಂಕ್ ಅಸೋಸಿಯೇಶನ್ ಫಾರ್ ವೈಲ್ಡ್ ಲೈಫ್ ವೆಲ್ಫೇರ್ (RAWW) ಸಂಸ್ಥಾಪಕ ಮತ್ತು ಅಧ್ಯಕ್ಷ ಪವನ್ ಶರ್ಮಾ, ‘ಮಳೆಗಾಲದ ಈ ಅವಧಿಯಲ್ಲಿ ಈ ಪ್ರದೇಶದಲ್ಲಿ ಎದೆಮಟ್ಟದತನಕ ಹುಲ್ಲು ಬೆಳೆದುನಿಂತಿರುತ್ತದೆ. ಅರಣ್ಯ ಇಲಾಖೆಯು ಚಿರತೆಪೀಡಿತ ಪ್ರದೇಶಗಳಲ್ಲಿ ಹುಲ್ಲಿನ ಕಟಾವು ನಡೆಸುತ್ತಿದೆ. ಇದರೊಂದಿಗೆ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನೂ ಪ್ರಾರಂಭಿಸಿದೆ. ಈ ಎಲ್ಲದರೊಂದಿಗೆ ಸ್ಥಳೀಯರು ಮತ್ತು ಫಿಲ್ಮ್​ ಸಿಟಿ ಸಿಬ್ಬಂದಿ ಈ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : Viral Video: ಕೈಲಾಸ ಪರ್ವತದಲ್ಲಿ ಶಿವ; ‘ಈಕೆ ಪಾರ್ವತಿಯ ಅವತಾರ, ಗಾಢನಿದ್ರೆಯಿಂದ ನಮ್ಮೆಲ್ಲರನ್ನು ಎಚ್ಚರಿಸುತ್ತಿದ್ದಾರೆ

ಸಂಜಯ್ ಗಾಂಧೀ ರಾಷ್ಟ್ರೀಯ ಉದ್ಯಾನದ ಗಡಿಭಾಗವು ಚಿರತೆಗಳ ವಾಸಸ್ಥಾನವಾಗಿದೆ. ಇದಕ್ಕೆ ಹೊಂದಿಕೊಂಡೇ ಈ ಫಿಲ್ಮ್​ ಸಿಟಿ ಇದೆ. ಹಾಗಾಗಿ ಚಿರತೆಗಳು ಆಗಾಗ ಶೂಟಿಂಗ್​ ಸೆಟ್​ಗೆ ಬಂದು ಸೀರಿಯಲ್​ ತಂಡವನ್ನು ಕೆಟ್ಟಕನಸಿನಂತೆ ಕಾಡುತ್ತಿವೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:40 pm, Thu, 27 July 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ