Viral: ಮುಂಬೈ: ಮರಾಠಿ ಧಾರಾವಾಹಿ ಸೆಟ್​ನಲ್ಲಿ ಕಾಣಿಸಿಕೊಂಡ ಮರಿಚಿರತೆ

Leopard : ಇದು ಮೊದಲ ಸಲವೇನಲ್ಲ, ಕಳೆದ 10 ದಿನಗಳಲ್ಲಿ ಗೋರೆಗಾಂವ್​ನ ಫಿಲ್ಮ್​ ಸಿಟಿಯಲ್ಲಿ ಇದು ನಾಲ್ಕನೇ ಪ್ರಕರಣವಾಗಿದೆ. ಸೀರಿಯಲ್ ತಂಡಕ್ಕೆ ಚಿರತೆಗಳು ದುಃಸ್ವಪ್ನದಂತೆ ಕಾಡುತ್ತಿವೆ.

Viral: ಮುಂಬೈ: ಮರಾಠಿ ಧಾರಾವಾಹಿ ಸೆಟ್​ನಲ್ಲಿ ಕಾಣಿಸಿಕೊಂಡ ಮರಿಚಿರತೆ
ಚಿರತೆಮರಿಯೊಂದು ಗೋರೆಗಾಂವ್​ ಫಿಲ್ಮ್​ ಸಿಟಿಯ ಸೀರಿಯಲ್ ಸೆಟ್​ನೊಳಗೆ ಚಲಿಸುತ್ತಿರುವುದು
Follow us
|

Updated on:Jul 27, 2023 | 1:41 PM

Mumbai : ಮುಂಬೈನ ಗೋರೆಗಾಂವ್​ ಫಿಲ್ಮ್​ ಸಿಟಿಯ (Film City) ಮರಾಠಿ ಸೀರಿಯಲ್​ ಸೆಟ್​ನಲ್ಲಿ ಮತ್ತೆ ಚಿರತೆಮರಿಯೊಂದು ಕಾಣಿಸಿಕೊಂಡಿದೆ. ಪರಿಣಾಮವಾಗಿ ಅಲ್ಲಿ ಕೆಲಸದಲ್ಲಿ ತೊಡಗಿದ್ದ ಸೀರಿಯಲ್​ನ ತಂಡದವರು ಭಯದಿಂದ ಓಡಿದ್ದಾರೆ. ಈ ದೃಶ್ಯವನ್ನು ANI ಸುದ್ದಿಸಂಸ್ಥೆಯು ಟ್ವೀಟ್​ ಮಾಡಿದೆ. ಆಲ್ ಇಂಡಿಯನ್ ಸಿನಿ ವರ್ಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷ ಸುರೇಶ್ ಶ್ಯಾಮಲಾಲ್ ಗುಪ್ತಾ, ‘ಸೆಟ್‌ನಲ್ಲಿ 200 ಕ್ಕೂ ಹೆಚ್ಚು ಜನರಿದ್ದರು. ಯಾರಾದರೂ ಪ್ರಾಣಾಪಾಯಕ್ಕೆ ಈಡಾಗುವ ಸಾಧ್ಯತೆ ಇತ್ತು. ಕಳೆದ 10 ದಿನಗಳಲ್ಲಿ ಈ ಪ್ರಕರಣ ನಾಲ್ಕನೇ ಸಲ ಮರುಕಳಿಸಿದೆ. ಈ ನಿಟ್ಟಿನಲ್ಲಿ ಈತನಕವೂ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ’ ಎಂದು ಕಿಡಿಕಾರಿದ್ದಾರೆ.

‘ಅಜೂನಿ’ ಧಾರಾವಾಹಿಯ ಸೆಟ್​ನೊಳಗೆ ಕಾಡುಪ್ರಾಣಿಗಳು ಕಾಣಿಸಿಕೊಳ್ಳುತ್ತಿವೆ. ಜು. 18ರಂದು ಫಿಲ್ಮ್ ಸಿಟಿಯಲ್ಲಿರುವ ನಾಯಿಯೊಂದರ ಮೇಲೆ ಚಿರತೆಯು ದಾಳಿ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಘಟನೆಯ ನಂತರ ರೆಸ್ಕಿಂಕ್ ಅಸೋಸಿಯೇಶನ್ ಫಾರ್ ವೈಲ್ಡ್ ಲೈಫ್ ವೆಲ್ಫೇರ್ (RAWW) ಸಂಸ್ಥಾಪಕ ಮತ್ತು ಅಧ್ಯಕ್ಷ ಪವನ್ ಶರ್ಮಾ, ‘ಮಳೆಗಾಲದ ಈ ಅವಧಿಯಲ್ಲಿ ಈ ಪ್ರದೇಶದಲ್ಲಿ ಎದೆಮಟ್ಟದತನಕ ಹುಲ್ಲು ಬೆಳೆದುನಿಂತಿರುತ್ತದೆ. ಅರಣ್ಯ ಇಲಾಖೆಯು ಚಿರತೆಪೀಡಿತ ಪ್ರದೇಶಗಳಲ್ಲಿ ಹುಲ್ಲಿನ ಕಟಾವು ನಡೆಸುತ್ತಿದೆ. ಇದರೊಂದಿಗೆ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನೂ ಪ್ರಾರಂಭಿಸಿದೆ. ಈ ಎಲ್ಲದರೊಂದಿಗೆ ಸ್ಥಳೀಯರು ಮತ್ತು ಫಿಲ್ಮ್​ ಸಿಟಿ ಸಿಬ್ಬಂದಿ ಈ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : Viral Video: ಕೈಲಾಸ ಪರ್ವತದಲ್ಲಿ ಶಿವ; ‘ಈಕೆ ಪಾರ್ವತಿಯ ಅವತಾರ, ಗಾಢನಿದ್ರೆಯಿಂದ ನಮ್ಮೆಲ್ಲರನ್ನು ಎಚ್ಚರಿಸುತ್ತಿದ್ದಾರೆ

ಸಂಜಯ್ ಗಾಂಧೀ ರಾಷ್ಟ್ರೀಯ ಉದ್ಯಾನದ ಗಡಿಭಾಗವು ಚಿರತೆಗಳ ವಾಸಸ್ಥಾನವಾಗಿದೆ. ಇದಕ್ಕೆ ಹೊಂದಿಕೊಂಡೇ ಈ ಫಿಲ್ಮ್​ ಸಿಟಿ ಇದೆ. ಹಾಗಾಗಿ ಚಿರತೆಗಳು ಆಗಾಗ ಶೂಟಿಂಗ್​ ಸೆಟ್​ಗೆ ಬಂದು ಸೀರಿಯಲ್​ ತಂಡವನ್ನು ಕೆಟ್ಟಕನಸಿನಂತೆ ಕಾಡುತ್ತಿವೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:40 pm, Thu, 27 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ