AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ

ಚಿರತೆ ಮರಿಯೊಂದು ಆಕಸ್ಮಿಕವಾಗಿ ನೀರಿನ ಕ್ಯಾನ್​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ
ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ಸಿಲುಕಿದ ಚಿರತೆ ಮರಿಯ ರಕ್ಷಣೆ
TV9 Web
| Edited By: |

Updated on: Feb 17, 2022 | 9:38 AM

Share

ಚಿರತೆ ಮರಿಯೊಂದು (Leopard Cube) ಆಕಸ್ಮಿಕವಾಗಿ ನೀರಿನ ಕ್ಯಾನ್( Water Can)​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ (Thane) ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಚಿರತೆಯ ಮರಿಯನ್ನು ಗ್ರಾಮಸ್ಥರು ಮತ್ತು ಅರಣ್ಯ ಅಧಿಕಾರಿಗಳ ಸಹಾಯದಿಂದ ರಕ್ಷಿಸಲಾಗಿದೆ. ಸದ್ಯ  ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬದ್ಲಾಪುರ ಗ್ರಾಮದ ದಾರಿ ಮಧ್ಯೆ ಚಿರತೆಯ ಮರಿ ನೀರಿನ ಕ್ಯಾನ್​ನೊಳಗೆ ತಲೆ ಸಿಲುಕಿ ಒದ್ದಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಅದಾಗಲೆ ಉಸಿರಾಡಲು ಕಷ್ಟಪಡುತ್ತಿದ್ದ ಎರಡು ದಿನಗಳಿಂದ ಆಹಾರ ಸೇವಿಸದೆ ನೀರಿನ ಕ್ಯಾನ್ನನೊಳಗೆ ತಲೆಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಕಂಡು ಮೊದಲು ಸೆರೆಹಿಡಿದಿದ್ದಾರೆ. ನಂತರ ಅದನ್ನು ಕಟ್ಟಿ ಹಾಕಿ ತಲೆಗೆ ಸಿಲುಕಿದ್ದ ಪ್ಲಾಸ್ಟಿಕ್​​ ಕ್ಯಾನ್​ಅನ್ನು ಹೊರತೆಗೆದಿದ್ದಾರೆ.

ಚಿರತೆಯನ್ನು ಸೆರೆಹಿಡಿಯಲು ಡಾರ್ಟ್​ ಅನ್ನು ಬಳಸಲಾಗಿದೆ.  ನಂತರ ಅದರ ತಲೆಗೆ ಸಿಲುಕಿದ್ದ ಕ್ಯಾನ್ನಅನ್ನು ತೆಗೆಯಲಾಗಿದೆ.  ಅದು ಗಂಡು ಚಿರತೆಯಾಗಿದೆ.  ಆಹಾರವಿಲ್ಲದೆ ದಣಿದ ಚಿರತೆಗೆ ಚಿಕಿತ್ಸೆ ನೀಡಿ ಕಾಡಿಗೆ  ಬಿಡಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಚಿರತೆ ಪ್ಲಾಸ್ಟಿಕ್​​ ಕ್ಯಾನ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ಹಾಗೂ ಅರಣ್ಯ ಅಧಿಕಾರಿಗಳನ್ನು ಅದನ್ನು ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರ ವೀಡಿಯೋವನ್ನು ರಂಜೀತ್​ ಜಾದವ್​ ಎನ್ನುವವರು ಹಂಚಿಕೊಂಡಿದ್ದು, ಚಿರತೆ ಮರಿಯನ್ನು ರಕ್ಷಿಸಿದ್ದಕ್ಕೆ ನೆ್ಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral News: 42 ಲಕ್ಷ ರೂ. ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ಕಟ್ಟಿಸಿ ಸಾಮರಸ್ಯ ಮೆರೆದ ಮುಸ್ಲಿಂ ಉದ್ಯಮಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?