AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ

ಚಿರತೆ ಮರಿಯೊಂದು ಆಕಸ್ಮಿಕವಾಗಿ ನೀರಿನ ಕ್ಯಾನ್​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ
ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ಸಿಲುಕಿದ ಚಿರತೆ ಮರಿಯ ರಕ್ಷಣೆ
TV9 Web
| Updated By: Pavitra Bhat Jigalemane|

Updated on: Feb 17, 2022 | 9:38 AM

Share

ಚಿರತೆ ಮರಿಯೊಂದು (Leopard Cube) ಆಕಸ್ಮಿಕವಾಗಿ ನೀರಿನ ಕ್ಯಾನ್( Water Can)​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ (Thane) ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಚಿರತೆಯ ಮರಿಯನ್ನು ಗ್ರಾಮಸ್ಥರು ಮತ್ತು ಅರಣ್ಯ ಅಧಿಕಾರಿಗಳ ಸಹಾಯದಿಂದ ರಕ್ಷಿಸಲಾಗಿದೆ. ಸದ್ಯ  ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬದ್ಲಾಪುರ ಗ್ರಾಮದ ದಾರಿ ಮಧ್ಯೆ ಚಿರತೆಯ ಮರಿ ನೀರಿನ ಕ್ಯಾನ್​ನೊಳಗೆ ತಲೆ ಸಿಲುಕಿ ಒದ್ದಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಅದಾಗಲೆ ಉಸಿರಾಡಲು ಕಷ್ಟಪಡುತ್ತಿದ್ದ ಎರಡು ದಿನಗಳಿಂದ ಆಹಾರ ಸೇವಿಸದೆ ನೀರಿನ ಕ್ಯಾನ್ನನೊಳಗೆ ತಲೆಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಕಂಡು ಮೊದಲು ಸೆರೆಹಿಡಿದಿದ್ದಾರೆ. ನಂತರ ಅದನ್ನು ಕಟ್ಟಿ ಹಾಕಿ ತಲೆಗೆ ಸಿಲುಕಿದ್ದ ಪ್ಲಾಸ್ಟಿಕ್​​ ಕ್ಯಾನ್​ಅನ್ನು ಹೊರತೆಗೆದಿದ್ದಾರೆ.

ಚಿರತೆಯನ್ನು ಸೆರೆಹಿಡಿಯಲು ಡಾರ್ಟ್​ ಅನ್ನು ಬಳಸಲಾಗಿದೆ.  ನಂತರ ಅದರ ತಲೆಗೆ ಸಿಲುಕಿದ್ದ ಕ್ಯಾನ್ನಅನ್ನು ತೆಗೆಯಲಾಗಿದೆ.  ಅದು ಗಂಡು ಚಿರತೆಯಾಗಿದೆ.  ಆಹಾರವಿಲ್ಲದೆ ದಣಿದ ಚಿರತೆಗೆ ಚಿಕಿತ್ಸೆ ನೀಡಿ ಕಾಡಿಗೆ  ಬಿಡಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಚಿರತೆ ಪ್ಲಾಸ್ಟಿಕ್​​ ಕ್ಯಾನ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ಹಾಗೂ ಅರಣ್ಯ ಅಧಿಕಾರಿಗಳನ್ನು ಅದನ್ನು ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರ ವೀಡಿಯೋವನ್ನು ರಂಜೀತ್​ ಜಾದವ್​ ಎನ್ನುವವರು ಹಂಚಿಕೊಂಡಿದ್ದು, ಚಿರತೆ ಮರಿಯನ್ನು ರಕ್ಷಿಸಿದ್ದಕ್ಕೆ ನೆ್ಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral News: 42 ಲಕ್ಷ ರೂ. ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ಕಟ್ಟಿಸಿ ಸಾಮರಸ್ಯ ಮೆರೆದ ಮುಸ್ಲಿಂ ಉದ್ಯಮಿ

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!