Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ.

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​
20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೇ ಮೇಲೆತ್ತಿ ನೋಡುತ್ತಿದೆ ಚಿರತೆ!
Follow us
| Updated By: shruti hegde

Updated on:Jul 02, 2021 | 11:25 AM

20 ಅಡಿ ಆಳದ ಬಾವಿಯಲ್ಲಿ ಚಿರತೆಯು ಸಿಕ್ಕಿಬಿದ್ದ ಘಟನೆ ಆಸ್ಸಾಂನಲ್ಲಿ ನಡೆದಿದೆ. ಈ ಮಧ್ಯೆ ನೀರಿನಲ್ಲಿ ಇಡೀ ದೇಹವನ್ನು ಮುಳುಗಿಸಿಕೊಂಡು ಮುಖವನ್ನಷ್ಟೇ ಮೇಲಕ್ಕೆತ್ತಿ ಭಯಂಕರ ಕಣ್ಣುಗಳನ್ನು ಬಿಟ್ಟು ನಿಂತಿರುವ ಅದ್ಭುತ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಾವಿಯಲ್ಲಿ ಅಚಾನಕ್​ಆಗಿ ಚಿರತೆ ಬಿದ್ದುಬಿಟ್ಟಿದೆ. ಅರಣ್ಯ ಇಲಾಖೆ ಮತ್ತು ವನ್ಯ ಜೀವಿ ಸಂರಕ್ಷಣೆ ಅಧಿಕಾರಿಗಳು ಸೇರಿ ಚಿರತೆಯನ್ನು ರಕ್ಷಿಸಿದ್ದಾರೆ. ಮರಳಿ ಅದರ ವಾಸಸ್ಥಾನಕ್ಕೆ ಹಿಂತಿರುಗಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅದು ತೆರೆದ ಬಾವಿಯಾಗಿತ್ತು. ಅಲೆದಾಡುತ್ತಿದ್ದ ಚಿರತೆ ಹೇಗೋ ಬಾವಿಯಲ್ಲಿ ಬಿದ್ದುಬಿಟ್ಟಿದೆ. ಚಿರತೆಯು ಘರ್ಜಿಸುತ್ತಿರುವುದು ಕೇಳಿ ಬರುತ್ತಿತ್ತು. ಧ್ವನಿಯು ಕರ್ಕಶವಾಗಿದ್ದರಿಂದ ಒಮ್ಮೆಲೆ ಭಯವಾಯಿತು. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿದ್ದೇವೆ ಎಂದು ಗ್ರಾಮಸ್ಥರೋರ್ವರು ಹೇಳಿದ್ದಾರೆ. ಬಲೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಕರು ರಕ್ಷಿಸಿದ್ದಾರೆ. ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ. ಬಾವಿಯಲ್ಲಿ ಕುತ್ತಿಗೆಯನ್ನಷ್ಟೇ ಮೇಲಕ್ಕೆತ್ತಿ ಚಿರತೆ ನೋಡತ್ತಿರುವ ಚಿತ್ರ ಅದ್ಭುತವಾಗಿದೆ.. ಅಪರೂಪದ ದೃಶ್ಯ ಎಂದು ಅಭಿಪ್ರಾಯ ಕೇಳಿಬಂದಿದೆ.

ಇದನ್ನೂ ಓದಿ:

ಮಗನ ಬರ್ತ್​ಡೇಗೆ ಕೇಕ್ ತರಲು ಹೋಗಿದ್ದ ಅವರನ್ನು ಚಿರತೆ ಬೆನ್ನಟ್ಟಿತು, ಜೀವ ಉಳಿಸಲು ಕೇಕ್ ನೆರವಾಯಿತು!

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

Published On - 11:12 am, Fri, 2 July 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು