AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ.

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​
20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೇ ಮೇಲೆತ್ತಿ ನೋಡುತ್ತಿದೆ ಚಿರತೆ!
TV9 Web
| Updated By: shruti hegde|

Updated on:Jul 02, 2021 | 11:25 AM

Share

20 ಅಡಿ ಆಳದ ಬಾವಿಯಲ್ಲಿ ಚಿರತೆಯು ಸಿಕ್ಕಿಬಿದ್ದ ಘಟನೆ ಆಸ್ಸಾಂನಲ್ಲಿ ನಡೆದಿದೆ. ಈ ಮಧ್ಯೆ ನೀರಿನಲ್ಲಿ ಇಡೀ ದೇಹವನ್ನು ಮುಳುಗಿಸಿಕೊಂಡು ಮುಖವನ್ನಷ್ಟೇ ಮೇಲಕ್ಕೆತ್ತಿ ಭಯಂಕರ ಕಣ್ಣುಗಳನ್ನು ಬಿಟ್ಟು ನಿಂತಿರುವ ಅದ್ಭುತ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಾವಿಯಲ್ಲಿ ಅಚಾನಕ್​ಆಗಿ ಚಿರತೆ ಬಿದ್ದುಬಿಟ್ಟಿದೆ. ಅರಣ್ಯ ಇಲಾಖೆ ಮತ್ತು ವನ್ಯ ಜೀವಿ ಸಂರಕ್ಷಣೆ ಅಧಿಕಾರಿಗಳು ಸೇರಿ ಚಿರತೆಯನ್ನು ರಕ್ಷಿಸಿದ್ದಾರೆ. ಮರಳಿ ಅದರ ವಾಸಸ್ಥಾನಕ್ಕೆ ಹಿಂತಿರುಗಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅದು ತೆರೆದ ಬಾವಿಯಾಗಿತ್ತು. ಅಲೆದಾಡುತ್ತಿದ್ದ ಚಿರತೆ ಹೇಗೋ ಬಾವಿಯಲ್ಲಿ ಬಿದ್ದುಬಿಟ್ಟಿದೆ. ಚಿರತೆಯು ಘರ್ಜಿಸುತ್ತಿರುವುದು ಕೇಳಿ ಬರುತ್ತಿತ್ತು. ಧ್ವನಿಯು ಕರ್ಕಶವಾಗಿದ್ದರಿಂದ ಒಮ್ಮೆಲೆ ಭಯವಾಯಿತು. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿದ್ದೇವೆ ಎಂದು ಗ್ರಾಮಸ್ಥರೋರ್ವರು ಹೇಳಿದ್ದಾರೆ. ಬಲೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಕರು ರಕ್ಷಿಸಿದ್ದಾರೆ. ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ. ಬಾವಿಯಲ್ಲಿ ಕುತ್ತಿಗೆಯನ್ನಷ್ಟೇ ಮೇಲಕ್ಕೆತ್ತಿ ಚಿರತೆ ನೋಡತ್ತಿರುವ ಚಿತ್ರ ಅದ್ಭುತವಾಗಿದೆ.. ಅಪರೂಪದ ದೃಶ್ಯ ಎಂದು ಅಭಿಪ್ರಾಯ ಕೇಳಿಬಂದಿದೆ.

ಇದನ್ನೂ ಓದಿ:

ಮಗನ ಬರ್ತ್​ಡೇಗೆ ಕೇಕ್ ತರಲು ಹೋಗಿದ್ದ ಅವರನ್ನು ಚಿರತೆ ಬೆನ್ನಟ್ಟಿತು, ಜೀವ ಉಳಿಸಲು ಕೇಕ್ ನೆರವಾಯಿತು!

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

Published On - 11:12 am, Fri, 2 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ