AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊನೆಗೂ ಸ್ವಾತಂತ್ರ್ಯ ಸಿಕ್ತು; ನದಿ ದಾಟಿ ಓಡುತ್ತಾ ಕಾಡು ಸೇರಿದ ಚಿರತೆ

ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯ ಭಯಾನಕವಾಗಿದ್ದರೆ, ಇನ್ನೂ ಕೆಲವು ವಿಡಿಯೋ ತುಂಬಾನೇ ಸುಂದರವಾಗಿರುತ್ತದೆ. ಅಂತಹದ್ದೊಂದು ದೃಶ್ಯ ಇದೀಗ ವೈರಲ್‌ ಆಗಿದೆ ರಕ್ಷಿಸಲ್ಪಟ್ಟ ಚಿರತೆಯೊಂದು ಕೊನೆಗೂ ಸ್ವಾತಂತ್ರ್ಯ ಸಿಕ್ಕಿತೆಂದು ಈಜುತ್ತಾ ನದಿ ದಾಟಿ ಖುಷಿಖುಷಿಯಾಗಿ ಓಡುತ್ತಾ ಕಾಡು ಸೇರಿದ್ದು, ಈ ಅದ್ಭುತ ದೃಶ್ಯ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Video: ಕೊನೆಗೂ ಸ್ವಾತಂತ್ರ್ಯ ಸಿಕ್ತು; ನದಿ ದಾಟಿ ಓಡುತ್ತಾ ಕಾಡು ಸೇರಿದ ಚಿರತೆ
ನದಿಯಲ್ಲಿ ಈಜುತ್ತಾ ದಡ ಸೇರಿದ ಚಿರತೆ
ಮಾಲಾಶ್ರೀ ಅಂಚನ್​
|

Updated on: Jul 17, 2025 | 12:17 PM

Share

ಪ್ರಾಣಿಗಳ, ಅದರಲ್ಲೂ ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ದೃಶ್ಯಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಚಿರತೆ (Leopard), ಆನೆ, ಹುಲಿ, ಸಿಂಹ ಹೀಗೆ ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಅದ್ಭುತ ದೃಶ್ಯವೊಂದು ವೈರಲ್‌ ಆಗಿದ್ದು, ರಕ್ಷಿಸಲ್ಪಟ್ಟ ಚಿರತೆಯೊಂದು ಕೊನೆಗೂ ಸ್ವಾತಂತ್ರ್ಯ ಸಿಕ್ಕಿತೆಂದು ನದಿಯನ್ನು ಈಜುತ್ತಾ, ದಡ ಸೇರಿ ಖುಷಿಯಲ್ಲಿ ಕಾಡು ಸೇರಿದೆ. ಈ ಅದ್ಭುತ ದೃಶ್ಯವನ್ನು ಭಾರತೀಯ ಅರಣ್ಯಾಧಿಕಾರಿ ಪರ್ವೀನ್‌ ಕಸ್ವಾನ್‌ (Parveen Kaswan, IFS)  ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈಜುತ್ತಾ ದಡ ಸೇರಿ ಕಾಡಿನ ಕಡೆಗೆ ಓಡಿ ಹೋದ ಚಿರತೆ:

ರಕ್ಷಿಸಲ್ಪಟ್ಟಿದ್ದ ಚಿರತೆಯೊಂದನ್ನು ಬಿಡುಗಡೆಗೊಳಿಸಿದ ಬಳಿಕ ಅದು ತನಗೆ ಸ್ವಾತಂತ್ರ್ಯ ಸಿಕ್ಕ ಖುಷಿಯಲ್ಲಿ ಈಜುತ್ತಾ ನದಿ ದಾಟಿ, ದಡವನ್ನು ಸೇರಿ ಓಡುತ್ತಾ  ಕಾಡು ಸೇರಿದ್ದು, ಈ ಅದ್ಭುತ ದೃಶ್ಯ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ
Image
ಬೆಕ್ಕು ಎಂದುಕೊಂಡು ಚಿರತೆ ಮೇಲೆ ನಾಯಿಗಳ ದಾಳಿ!
Image
ಮರಳಿ ಅಮ್ಮನ ಮಡಿಲು ಸೇರಿದ ಮರಿಯಾನೆಯ ಖುಷಿ ನೋಡಿ
Image
ಸಾವಿನಿಂದ ತಪ್ಪಿಸಿಕೊಳ್ಳಲು ಹಾವಿನ ತಲೆಯ ಮೇಲೆ ಕುಳಿತ ಇಲಿ
Image
ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಚಿರತೆ ಕಾಡಿನ ಕಡೆಗೆ ಸರಿಯಾಗಿ ಹೋಗುತ್ತಿದೆಯೇ ಎಂದು ಮೇಲ್ವಿಚಾರಣೆ ಮಾಡಲು ಡ್ರೋನ್‌ ಕ್ಯಾಮೆರಾವನ್ನು ಬಳಸಲಾಗಿದ್ದು, ಈ ಕ್ಯಾಮೆರಾದಲ್ಲಿ ಚಿರತೆ ಖುಷಿ ಖುಷಿಯಾಗಿ ತನ್ನ ಗೂಡು ಸೇರುವ ಅದ್ಭುತ ದೃಶ್ಯವನ್ನು ಕಾಣಬಹುದು.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ಈ ದೃಶ್ಯವನ್ನು ಭಾರತೀಯ ಅರಣ್ಯಾಧಿಕಾರಿ ಪರ್ವೀನ್‌ ಕಸ್ವಾನ್‌ (Parveen Kaswan, IFS) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚಿರತೆಯೊಂದು ನದಿಯಲ್ಲಿ ಈಜುತ್ತಾ ದಡ ಸೇರುವ ದೃಶ್ಯವನ್ನು ಕಾಣಬಹುದು. ರಕ್ಷಿಸಲ್ಪಟ್ಟಿದ ಚಿರತೆಯನ್ನು ಬಿಡುಗಡೆಗೊಳಿಸಿದ ಬಳಿಕ ಅದು ನದಿ ದಾಟಿ ಖುಷಿಯಲ್ಲಿ ಓಡುತ್ತಾ ಕಾಡನ್ನು ಸೇರಿದೆ.

ಇದನ್ನೂ ಓದಿ: ಬೆಕ್ಕು ಎಂದುಕೊಂಡು ಚಿರತೆ ಮೇಲೆ ನಾಯಿಗಳ ದಾಳಿ!

ಜುಲೈ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಚಿರತೆ ಡ್ರೋನ್‌ನಿಂದ ಭಯಭೀತವಾಗಿರುವಂತೆ ಕಾಣುತ್ತಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹುಲಿ ಹಾಗೂ ಜಾಗ್ವಾರ್‌ಗಳಂತೆ ಚಿರತೆಗಳು ಅಷ್ಟಾಗಿ ಈಜುವುದಿಲ್ಲ. ಅನಿವಾರ್ಯವಿದ್ದರೆ ಮಾತ್ರ ಅವು ಈಜುತ್ತವೆ, ಈ ಅದ್ಭುತ ದೃಶ್ಯವನ್ನು ನೋಡಿ ಖುಷಿಯಾಯಿತುʼ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು