AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊನೆಗೂ ಸ್ವಾತಂತ್ರ್ಯ ಸಿಕ್ತು; ನದಿ ದಾಟಿ ಓಡುತ್ತಾ ಕಾಡು ಸೇರಿದ ಚಿರತೆ

ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯ ಭಯಾನಕವಾಗಿದ್ದರೆ, ಇನ್ನೂ ಕೆಲವು ವಿಡಿಯೋ ತುಂಬಾನೇ ಸುಂದರವಾಗಿರುತ್ತದೆ. ಅಂತಹದ್ದೊಂದು ದೃಶ್ಯ ಇದೀಗ ವೈರಲ್‌ ಆಗಿದೆ ರಕ್ಷಿಸಲ್ಪಟ್ಟ ಚಿರತೆಯೊಂದು ಕೊನೆಗೂ ಸ್ವಾತಂತ್ರ್ಯ ಸಿಕ್ಕಿತೆಂದು ಈಜುತ್ತಾ ನದಿ ದಾಟಿ ಖುಷಿಖುಷಿಯಾಗಿ ಓಡುತ್ತಾ ಕಾಡು ಸೇರಿದ್ದು, ಈ ಅದ್ಭುತ ದೃಶ್ಯ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Video: ಕೊನೆಗೂ ಸ್ವಾತಂತ್ರ್ಯ ಸಿಕ್ತು; ನದಿ ದಾಟಿ ಓಡುತ್ತಾ ಕಾಡು ಸೇರಿದ ಚಿರತೆ
ನದಿಯಲ್ಲಿ ಈಜುತ್ತಾ ದಡ ಸೇರಿದ ಚಿರತೆ
ಮಾಲಾಶ್ರೀ ಅಂಚನ್​
|

Updated on: Jul 17, 2025 | 12:17 PM

Share

ಪ್ರಾಣಿಗಳ, ಅದರಲ್ಲೂ ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ದೃಶ್ಯಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಚಿರತೆ (Leopard), ಆನೆ, ಹುಲಿ, ಸಿಂಹ ಹೀಗೆ ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಅದ್ಭುತ ದೃಶ್ಯವೊಂದು ವೈರಲ್‌ ಆಗಿದ್ದು, ರಕ್ಷಿಸಲ್ಪಟ್ಟ ಚಿರತೆಯೊಂದು ಕೊನೆಗೂ ಸ್ವಾತಂತ್ರ್ಯ ಸಿಕ್ಕಿತೆಂದು ನದಿಯನ್ನು ಈಜುತ್ತಾ, ದಡ ಸೇರಿ ಖುಷಿಯಲ್ಲಿ ಕಾಡು ಸೇರಿದೆ. ಈ ಅದ್ಭುತ ದೃಶ್ಯವನ್ನು ಭಾರತೀಯ ಅರಣ್ಯಾಧಿಕಾರಿ ಪರ್ವೀನ್‌ ಕಸ್ವಾನ್‌ (Parveen Kaswan, IFS)  ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈಜುತ್ತಾ ದಡ ಸೇರಿ ಕಾಡಿನ ಕಡೆಗೆ ಓಡಿ ಹೋದ ಚಿರತೆ:

ರಕ್ಷಿಸಲ್ಪಟ್ಟಿದ್ದ ಚಿರತೆಯೊಂದನ್ನು ಬಿಡುಗಡೆಗೊಳಿಸಿದ ಬಳಿಕ ಅದು ತನಗೆ ಸ್ವಾತಂತ್ರ್ಯ ಸಿಕ್ಕ ಖುಷಿಯಲ್ಲಿ ಈಜುತ್ತಾ ನದಿ ದಾಟಿ, ದಡವನ್ನು ಸೇರಿ ಓಡುತ್ತಾ  ಕಾಡು ಸೇರಿದ್ದು, ಈ ಅದ್ಭುತ ದೃಶ್ಯ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ
Image
ಬೆಕ್ಕು ಎಂದುಕೊಂಡು ಚಿರತೆ ಮೇಲೆ ನಾಯಿಗಳ ದಾಳಿ!
Image
ಮರಳಿ ಅಮ್ಮನ ಮಡಿಲು ಸೇರಿದ ಮರಿಯಾನೆಯ ಖುಷಿ ನೋಡಿ
Image
ಸಾವಿನಿಂದ ತಪ್ಪಿಸಿಕೊಳ್ಳಲು ಹಾವಿನ ತಲೆಯ ಮೇಲೆ ಕುಳಿತ ಇಲಿ
Image
ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಚಿರತೆ ಕಾಡಿನ ಕಡೆಗೆ ಸರಿಯಾಗಿ ಹೋಗುತ್ತಿದೆಯೇ ಎಂದು ಮೇಲ್ವಿಚಾರಣೆ ಮಾಡಲು ಡ್ರೋನ್‌ ಕ್ಯಾಮೆರಾವನ್ನು ಬಳಸಲಾಗಿದ್ದು, ಈ ಕ್ಯಾಮೆರಾದಲ್ಲಿ ಚಿರತೆ ಖುಷಿ ಖುಷಿಯಾಗಿ ತನ್ನ ಗೂಡು ಸೇರುವ ಅದ್ಭುತ ದೃಶ್ಯವನ್ನು ಕಾಣಬಹುದು.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ಈ ದೃಶ್ಯವನ್ನು ಭಾರತೀಯ ಅರಣ್ಯಾಧಿಕಾರಿ ಪರ್ವೀನ್‌ ಕಸ್ವಾನ್‌ (Parveen Kaswan, IFS) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚಿರತೆಯೊಂದು ನದಿಯಲ್ಲಿ ಈಜುತ್ತಾ ದಡ ಸೇರುವ ದೃಶ್ಯವನ್ನು ಕಾಣಬಹುದು. ರಕ್ಷಿಸಲ್ಪಟ್ಟಿದ ಚಿರತೆಯನ್ನು ಬಿಡುಗಡೆಗೊಳಿಸಿದ ಬಳಿಕ ಅದು ನದಿ ದಾಟಿ ಖುಷಿಯಲ್ಲಿ ಓಡುತ್ತಾ ಕಾಡನ್ನು ಸೇರಿದೆ.

ಇದನ್ನೂ ಓದಿ: ಬೆಕ್ಕು ಎಂದುಕೊಂಡು ಚಿರತೆ ಮೇಲೆ ನಾಯಿಗಳ ದಾಳಿ!

ಜುಲೈ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಚಿರತೆ ಡ್ರೋನ್‌ನಿಂದ ಭಯಭೀತವಾಗಿರುವಂತೆ ಕಾಣುತ್ತಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹುಲಿ ಹಾಗೂ ಜಾಗ್ವಾರ್‌ಗಳಂತೆ ಚಿರತೆಗಳು ಅಷ್ಟಾಗಿ ಈಜುವುದಿಲ್ಲ. ಅನಿವಾರ್ಯವಿದ್ದರೆ ಮಾತ್ರ ಅವು ಈಜುತ್ತವೆ, ಈ ಅದ್ಭುತ ದೃಶ್ಯವನ್ನು ನೋಡಿ ಖುಷಿಯಾಯಿತುʼ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು