Viral: ಒಂದೇ ಕ್ಷಣ ತಡವಾಗಿದ್ದರೂ ಆತ ಹುಡುಗಿಯನ್ನು ಇರಿದೇ ಬಿಡುತ್ತಿದ್ದ!

Crime : ಲೆಷ್ಪಾಲ್ ನಿಜವಾದ ದೇಶಭಕ್ತ. ಬೇರೊಬ್ಬರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಧರ್ಮದ ಕಾರಣಕ್ಕಾಗಿ ಕೊಲೆಗೈದು ಓಡಿಹೋಗುವ ಮತಾಂಧ ಭಕ್ತರಂತೆ ಇವರು ಹೇಡಿಯಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

Viral: ಒಂದೇ ಕ್ಷಣ ತಡವಾಗಿದ್ದರೂ ಆತ ಹುಡುಗಿಯನ್ನು ಇರಿದೇ ಬಿಡುತ್ತಿದ್ದ!
ಹುಡುಗಿಯನ್ನು ರಕ್ಷಿಸಿದ ಲೆಷ್ಪಾಲ್​ ಖಿಬಾಗೆ
Follow us
|

Updated on:Jun 28, 2023 | 2:12 PM

Pune: ಪುಣೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ಈ ಹುಡುಗಿಯ ಹಿಂದೆ ಚಾಕುವಿನಿಂದ ಇರಿಯಲು ಓಡುತ್ತಿದ್ದಾನೆ. ಆಗ ಅಲ್ಲಿಯೇ ಇದ್ದ ಲೆಶ್ಪಾಲ್ ​ಖಿಬಾಗೆ (Leshpal Khibage) ಎಂಬ ವ್ಯಕ್ತಿ ಮಧ್ಯಪ್ರವೇಶಿಸಿ, ಆರೋಪಿಯನ್ನು ಬೆನ್ನಟ್ಟಿ ಹುಡುಗಿಯ ಜೀವ ಉಳಿಸಿದ್ದಾರೆ. ಅಷ್ಟೇ ಅಲ್ಲ ಆರೋಪಿ ಶಂತನು ಜಾಧವ್ ತಪ್ಪಿಸಿಕೊಳ್ಳದಂತೆ ಹಿಡಿದಿದ್ದಾರೆ. ಇದೆಲ್ಲವನ್ನೂ ಗಮನಿಸುತ್ತಿದ್ದ ದಾರಿಹೋಕರು ಲೆಶ್ಪಾಲ್​ರೊಂದಿಗೆ ಕೈಜೋಡಿಸಿದ್ಧಾರೆ. ಪೊಲೀಸರು ಆರೋಪಿ ಶಂತನುವನ್ನು ಕೂಡಲೇ ಬಂಧಿಸಿದ್ದಾರೆ- ಈ ಟ್ವೀಟ್​ ಇದೀಗ ವೈರಲ್ ಆಗುತ್ತಿದೆ. ನೆಟ್ಟಿಗರು ಲೆಶ್ಪಾಲ್​ನ ಸಾಹಸ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸುತ್ತಿದ್ದಾರೆ.

ಮೇಲಿನ ಮತ್ತು ಕೆಳಗಿನ ಟ್ವೀಟ್​ ಒಂದೇ ಪ್ರಕರಣಕ್ಕೆ ಸಂಬಂಧಿಸಿದವು. ಆರೋಪಿಯ ಹೆಸರನ್ನು ಯಾಕೆ ಬಹಿರಂಗಗೊಳಿಸಿಲ್ಲ ಎಂದು ಈ ಕೆಳಗಿನ ಟ್ವೀಟ್​ನಲ್ಲಿ ಕೇಳುತ್ತಿದ್ದಾರೆ ನೆಟ್ಟಿಗರು. ಈ ಟ್ವೀಟ್​ನ ಸಾರಾಂಶ ಹೀಗಿದೆ. ”ಮಹಾರಾಷ್ಟ್ರದ ಸದಾಶಿವ ಪೇಟೆಯ ಪೆರುಗೇಟ್​ನಲ್ಲಿ 19 ವರ್ಷದ ಯುವತಿಯ ಮೇಲೆ 21 ವರ್ಷದ ಯುವಕ  ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾನೆ. ಆರೋಪಿ ಮತ್ತು ಯುವತಿ ಮಾಜಿ ಸಹಪಾಠಿಗಳು. ಈ ಯುವತಿ  ತನ್ನ ಸ್ನೇಹಿತನೊಂದಿಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ, ಆರೋಪಿಯೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ. ಆಗ ಈ ದುರ್ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ.- ಸಂದೀಪ್ ಗಿಲ್, ಪೊಲೀಸ್ ಅಧಿಕಾರಿ ಪುಣೆ.”

ನೆಟ್ಟಿಗರು ಈ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಟ್ವೀಟ್ ಮಾಡುತ್ತಿದ್ದಾರೆ. ”ಭಾರತಜೋಡೋಯಾತ್ರಾದಲ್ಲಿ (BharathJodoYatra) ನಮ್ಮೊಂದಿಗೆ ಪಾಲ್ಗೊಂಡ ಲೇಶ್ಪಾಲ್​ ಇವರೇ ಎಂದು ಗುರುತಿಸುತ್ತಿದ್ದಾರೆ. ಇವರೊಂದಿಗೆ ತೆಗೆಸಿಕೊಂಡ ಛಾಯಾಚಿತ್ರಗಳನ್ನು ಟ್ವೀಟ್ ಮಾಡುತ್ತಿದ್ದಾರೆ. ಇವರು ನಿಜವಾದ ದೇಶಭಕ್ತ. ಸಾಮಾಜಿಕ ಮಾಧ್ಯಮದಲ್ಲಿ ಶಾಂತಿ, ಪ್ರೀತಿ ಮತ್ತು ಜಾತ್ಯತೀತತೆ ಕುರಿತು ಪ್ರಚಾರ ಮಾಡುತ್ತಿರುತ್ತಾರೆ. ಇದೀಗ ಬೇರೊಬ್ಬರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಧರ್ಮದ ಕಾರಣಕ್ಕಾಗಿ ಯಾರನ್ನೋ ಕೊಲೆಗೈದು ಓಡಿಹೋಗುವ ಮತಾಂಧ ಭಕ್ತರಂತೆ ಇವರು ಹೇಡಿಯಲ್ಲ” ಎಂದಿದ್ದಾರೆ ಕೆಲವರು.

ದೆಹಲಿ ಮಂದಿಯಂತೆ ನಮ್ಮೂರಿನ ಜನ ಕೈಕಟ್ಟಿ ಕುಳಿತುಕೊಂಡಿಲ್ಲ. ನಡೆಯುವ ಘೋರ ಅಪರಾಧವನ್ನು ತಪ್ಪಿಸಿದ್ದಾರೆ ಎಂದು ಪುಣೆ ಮಂದಿ ಟ್ವೀಟ್ ಮಾಡುತ್ತಿದೆ. ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಕುತೂಹಲ ಉಂಟಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:41 pm, Wed, 28 June 23

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ