AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದೇ ಕ್ಷಣ ತಡವಾಗಿದ್ದರೂ ಆತ ಹುಡುಗಿಯನ್ನು ಇರಿದೇ ಬಿಡುತ್ತಿದ್ದ!

Crime : ಲೆಷ್ಪಾಲ್ ನಿಜವಾದ ದೇಶಭಕ್ತ. ಬೇರೊಬ್ಬರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಧರ್ಮದ ಕಾರಣಕ್ಕಾಗಿ ಕೊಲೆಗೈದು ಓಡಿಹೋಗುವ ಮತಾಂಧ ಭಕ್ತರಂತೆ ಇವರು ಹೇಡಿಯಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

Viral: ಒಂದೇ ಕ್ಷಣ ತಡವಾಗಿದ್ದರೂ ಆತ ಹುಡುಗಿಯನ್ನು ಇರಿದೇ ಬಿಡುತ್ತಿದ್ದ!
ಹುಡುಗಿಯನ್ನು ರಕ್ಷಿಸಿದ ಲೆಷ್ಪಾಲ್​ ಖಿಬಾಗೆ
ಶ್ರೀದೇವಿ ಕಳಸದ
|

Updated on:Jun 28, 2023 | 2:12 PM

Share

Pune: ಪುಣೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ಈ ಹುಡುಗಿಯ ಹಿಂದೆ ಚಾಕುವಿನಿಂದ ಇರಿಯಲು ಓಡುತ್ತಿದ್ದಾನೆ. ಆಗ ಅಲ್ಲಿಯೇ ಇದ್ದ ಲೆಶ್ಪಾಲ್ ​ಖಿಬಾಗೆ (Leshpal Khibage) ಎಂಬ ವ್ಯಕ್ತಿ ಮಧ್ಯಪ್ರವೇಶಿಸಿ, ಆರೋಪಿಯನ್ನು ಬೆನ್ನಟ್ಟಿ ಹುಡುಗಿಯ ಜೀವ ಉಳಿಸಿದ್ದಾರೆ. ಅಷ್ಟೇ ಅಲ್ಲ ಆರೋಪಿ ಶಂತನು ಜಾಧವ್ ತಪ್ಪಿಸಿಕೊಳ್ಳದಂತೆ ಹಿಡಿದಿದ್ದಾರೆ. ಇದೆಲ್ಲವನ್ನೂ ಗಮನಿಸುತ್ತಿದ್ದ ದಾರಿಹೋಕರು ಲೆಶ್ಪಾಲ್​ರೊಂದಿಗೆ ಕೈಜೋಡಿಸಿದ್ಧಾರೆ. ಪೊಲೀಸರು ಆರೋಪಿ ಶಂತನುವನ್ನು ಕೂಡಲೇ ಬಂಧಿಸಿದ್ದಾರೆ- ಈ ಟ್ವೀಟ್​ ಇದೀಗ ವೈರಲ್ ಆಗುತ್ತಿದೆ. ನೆಟ್ಟಿಗರು ಲೆಶ್ಪಾಲ್​ನ ಸಾಹಸ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸುತ್ತಿದ್ದಾರೆ.

ಮೇಲಿನ ಮತ್ತು ಕೆಳಗಿನ ಟ್ವೀಟ್​ ಒಂದೇ ಪ್ರಕರಣಕ್ಕೆ ಸಂಬಂಧಿಸಿದವು. ಆರೋಪಿಯ ಹೆಸರನ್ನು ಯಾಕೆ ಬಹಿರಂಗಗೊಳಿಸಿಲ್ಲ ಎಂದು ಈ ಕೆಳಗಿನ ಟ್ವೀಟ್​ನಲ್ಲಿ ಕೇಳುತ್ತಿದ್ದಾರೆ ನೆಟ್ಟಿಗರು. ಈ ಟ್ವೀಟ್​ನ ಸಾರಾಂಶ ಹೀಗಿದೆ. ”ಮಹಾರಾಷ್ಟ್ರದ ಸದಾಶಿವ ಪೇಟೆಯ ಪೆರುಗೇಟ್​ನಲ್ಲಿ 19 ವರ್ಷದ ಯುವತಿಯ ಮೇಲೆ 21 ವರ್ಷದ ಯುವಕ  ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾನೆ. ಆರೋಪಿ ಮತ್ತು ಯುವತಿ ಮಾಜಿ ಸಹಪಾಠಿಗಳು. ಈ ಯುವತಿ  ತನ್ನ ಸ್ನೇಹಿತನೊಂದಿಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ, ಆರೋಪಿಯೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ. ಆಗ ಈ ದುರ್ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ.- ಸಂದೀಪ್ ಗಿಲ್, ಪೊಲೀಸ್ ಅಧಿಕಾರಿ ಪುಣೆ.”

ನೆಟ್ಟಿಗರು ಈ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಟ್ವೀಟ್ ಮಾಡುತ್ತಿದ್ದಾರೆ. ”ಭಾರತಜೋಡೋಯಾತ್ರಾದಲ್ಲಿ (BharathJodoYatra) ನಮ್ಮೊಂದಿಗೆ ಪಾಲ್ಗೊಂಡ ಲೇಶ್ಪಾಲ್​ ಇವರೇ ಎಂದು ಗುರುತಿಸುತ್ತಿದ್ದಾರೆ. ಇವರೊಂದಿಗೆ ತೆಗೆಸಿಕೊಂಡ ಛಾಯಾಚಿತ್ರಗಳನ್ನು ಟ್ವೀಟ್ ಮಾಡುತ್ತಿದ್ದಾರೆ. ಇವರು ನಿಜವಾದ ದೇಶಭಕ್ತ. ಸಾಮಾಜಿಕ ಮಾಧ್ಯಮದಲ್ಲಿ ಶಾಂತಿ, ಪ್ರೀತಿ ಮತ್ತು ಜಾತ್ಯತೀತತೆ ಕುರಿತು ಪ್ರಚಾರ ಮಾಡುತ್ತಿರುತ್ತಾರೆ. ಇದೀಗ ಬೇರೊಬ್ಬರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಧರ್ಮದ ಕಾರಣಕ್ಕಾಗಿ ಯಾರನ್ನೋ ಕೊಲೆಗೈದು ಓಡಿಹೋಗುವ ಮತಾಂಧ ಭಕ್ತರಂತೆ ಇವರು ಹೇಡಿಯಲ್ಲ” ಎಂದಿದ್ದಾರೆ ಕೆಲವರು.

ದೆಹಲಿ ಮಂದಿಯಂತೆ ನಮ್ಮೂರಿನ ಜನ ಕೈಕಟ್ಟಿ ಕುಳಿತುಕೊಂಡಿಲ್ಲ. ನಡೆಯುವ ಘೋರ ಅಪರಾಧವನ್ನು ತಪ್ಪಿಸಿದ್ದಾರೆ ಎಂದು ಪುಣೆ ಮಂದಿ ಟ್ವೀಟ್ ಮಾಡುತ್ತಿದೆ. ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಕುತೂಹಲ ಉಂಟಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:41 pm, Wed, 28 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು