Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್

Elevator : ರೋಗಿಯನ್ನು ಸ್ಟ್ರೆಚರ್ ಮೇಲೆ ಮಲಗಿಸಿಕೊಂಡು ಲಿಫ್ಟಿನೊಳಗೆ ಕರೆದೊಯ್ಯುವಾಗ ಈ ಘಟನೆ ಸಂಭವಿಸಿದೆ. ಅಕ್ಟೋಬರ್​ನಲ್ಲಿ ಈ ಘಟನೆ ನಡೆದಿದ್ದು ಇದೀಗ ವೈರಲ್ ಆಗಿದೆ. ನೆಟ್ಟಿಗರು ಕಂಗಾಲಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್
ಲಿಫ್ಟ್​ನೊಳಗೆ ರೋಗಿಯನ್ನು ಕರೆದೊಯ್ಯುತ್ತಿರುವ ದೃಶ್ಯ
Follow us
| Updated By: Digi Tech Desk

Updated on:Dec 27, 2022 | 5:44 PM

ಈ ವಿಡಿಯೋ ನೋಡಿ ಅನೇಕ ನೆಟ್ಟಿಗರು ದಂಗಾಗಿದ್ದಾರೆ. ಇಂಥ ಗತಿ ಸ್ವತಃ ತಮಗೇ ಬಂದರೆ ಏನು ಮಾಡೋದು ಎಂದು ಕಂಗಾಲಾಗಿದ್ದಾರೆ. ಆಸ್ಪತ್ರೆ ಚೆನ್ನಾಗಿದೆ, ವೈದ್ಯರು ಸಹಾಯಕರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ನಿಟ್ಟುಸಿರು ಬಿಡಲೂ ಆಗದಂಥ ಕಾಲದಲ್ಲಿದ್ದೇವೆಯೇ? ಎಂಬ ಆತಂಕ ಉಂಟಾಗುತ್ತದೆ ಈ ವಿಡಿಯೋ ನೋಡಿದಾಕ್ಷಣ. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಮೂಲಕ ರೋಗಿಯನ್ನು ಲಿಫ್ಟ್​ ಬಳಿ ಕರೆತರಲಾಗುತ್ತದೆ. ಆದರೆ ಸ್ಟ್ರೆಚರ್ ಲಿಫ್ಟ್​ನೊಳಗೆ ಅರ್ಧ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದುಬಿಡುತ್ತದೆ. ರೋಗಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಕೆಳಮುಖವಾಗಿ ಬಿದ್ದುಬಿಡುತ್ತಾರೆ.

ನಿನ್ನೆ ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 10.5 ಮಿಲಿಯನ್ ಜನರು ನೋಡಿದ್ದಾರೆ. ಆದರೆ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಕ್ಟೋಬರ್ 8ರಂದು. ಈ ಆಘಾತಕಾರಿ ವಿಡಿಯೋದ ಬಗ್ಗೆ ಅನೇಕರು ರೀಟ್ವೀಟ್ ಮಾಡಿದ್ದಾರೆ. ಲಿಫ್ಟ್​ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆ ಅನೇಕರು ತಕರಾರು ಎತ್ತಿದ್ದಾರೆ. ಅನೇಕರು ಈ ದೃಶ್ಯ ತಮಗೆ ದುಃಸ್ವಪ್ನದಂತೆ ಕಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನಂತರ ಆ ರೋಗಿ ಮತ್ತು ಒಳಗಿದ್ದ ಸಹಾಯಕರಿಗೆ ಏನಾಯಿತೆಂದು ತಿಳಿಯಿತೇ? ಎಂದು ಪ್ರಶ್ನಿಸಿದ್ದಾರೆ ಅನೇಕರು. ಇಂಥ ಸಂದರ್ಭದಲ್ಲಿ ಯಾರನ್ನು ದೂರುವುದು ಎಂದು ಪ್ರಶ್ನಿಸಿದ್ದಾರೆ ಹಲವರು. ಆಸ್ಪತ್ರೆಯ ಆಡಳಿತ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:26 pm, Tue, 27 December 22

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ