AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್

Elevator : ರೋಗಿಯನ್ನು ಸ್ಟ್ರೆಚರ್ ಮೇಲೆ ಮಲಗಿಸಿಕೊಂಡು ಲಿಫ್ಟಿನೊಳಗೆ ಕರೆದೊಯ್ಯುವಾಗ ಈ ಘಟನೆ ಸಂಭವಿಸಿದೆ. ಅಕ್ಟೋಬರ್​ನಲ್ಲಿ ಈ ಘಟನೆ ನಡೆದಿದ್ದು ಇದೀಗ ವೈರಲ್ ಆಗಿದೆ. ನೆಟ್ಟಿಗರು ಕಂಗಾಲಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್
ಲಿಫ್ಟ್​ನೊಳಗೆ ರೋಗಿಯನ್ನು ಕರೆದೊಯ್ಯುತ್ತಿರುವ ದೃಶ್ಯ
TV9 Web
| Edited By: |

Updated on:Dec 27, 2022 | 5:44 PM

Share

ಈ ವಿಡಿಯೋ ನೋಡಿ ಅನೇಕ ನೆಟ್ಟಿಗರು ದಂಗಾಗಿದ್ದಾರೆ. ಇಂಥ ಗತಿ ಸ್ವತಃ ತಮಗೇ ಬಂದರೆ ಏನು ಮಾಡೋದು ಎಂದು ಕಂಗಾಲಾಗಿದ್ದಾರೆ. ಆಸ್ಪತ್ರೆ ಚೆನ್ನಾಗಿದೆ, ವೈದ್ಯರು ಸಹಾಯಕರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ನಿಟ್ಟುಸಿರು ಬಿಡಲೂ ಆಗದಂಥ ಕಾಲದಲ್ಲಿದ್ದೇವೆಯೇ? ಎಂಬ ಆತಂಕ ಉಂಟಾಗುತ್ತದೆ ಈ ವಿಡಿಯೋ ನೋಡಿದಾಕ್ಷಣ. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಮೂಲಕ ರೋಗಿಯನ್ನು ಲಿಫ್ಟ್​ ಬಳಿ ಕರೆತರಲಾಗುತ್ತದೆ. ಆದರೆ ಸ್ಟ್ರೆಚರ್ ಲಿಫ್ಟ್​ನೊಳಗೆ ಅರ್ಧ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದುಬಿಡುತ್ತದೆ. ರೋಗಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಕೆಳಮುಖವಾಗಿ ಬಿದ್ದುಬಿಡುತ್ತಾರೆ.

ನಿನ್ನೆ ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 10.5 ಮಿಲಿಯನ್ ಜನರು ನೋಡಿದ್ದಾರೆ. ಆದರೆ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಕ್ಟೋಬರ್ 8ರಂದು. ಈ ಆಘಾತಕಾರಿ ವಿಡಿಯೋದ ಬಗ್ಗೆ ಅನೇಕರು ರೀಟ್ವೀಟ್ ಮಾಡಿದ್ದಾರೆ. ಲಿಫ್ಟ್​ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆ ಅನೇಕರು ತಕರಾರು ಎತ್ತಿದ್ದಾರೆ. ಅನೇಕರು ಈ ದೃಶ್ಯ ತಮಗೆ ದುಃಸ್ವಪ್ನದಂತೆ ಕಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನಂತರ ಆ ರೋಗಿ ಮತ್ತು ಒಳಗಿದ್ದ ಸಹಾಯಕರಿಗೆ ಏನಾಯಿತೆಂದು ತಿಳಿಯಿತೇ? ಎಂದು ಪ್ರಶ್ನಿಸಿದ್ದಾರೆ ಅನೇಕರು. ಇಂಥ ಸಂದರ್ಭದಲ್ಲಿ ಯಾರನ್ನು ದೂರುವುದು ಎಂದು ಪ್ರಶ್ನಿಸಿದ್ದಾರೆ ಹಲವರು. ಆಸ್ಪತ್ರೆಯ ಆಡಳಿತ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:26 pm, Tue, 27 December 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?