AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬಳಿಕ ಈ ವಿಡಿಯೋ ಮತ್ತಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಹಲವಾರು ಮಂದಿ ಇದನ್ನು ನೋಡಿ ಅಚ್ಚರಿಪಟ್ಟಿದ್ದಾರೆ. ಹಂಚಿಕೊಂಡಿದ್ದಾರೆ. ಅಪ್​​ಲೋಡ್ ಮಾಡಿದ ಕೆಲವೇ ದಿನಗಳಲ್ಲಿ ವಿಡಿಯೋ ವೈರಲ್ ಆಗಿದೆ.

Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ
ಮಿಂಚು (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 12, 2021 | 8:05 PM

Share

ಬಹುಶಃ ಬಹುತೇಕ ಮಂದಿ ಭಯಪಡುವ ಒಂದು ಅಂಶ ಎಂದರೆ ಅದು ಸಿಡಿಲು ಎಂದು ಹೇಳಬಹುದು. ಜೋರಾದ ಮಳೆ, ಗಾಳಿ ಅಬ್ಬರಿಸುವ ಸಿಡಿಲು, ಮಿಂಚು, ಗುಡುಗಿಗೆ ಒಂದೊಮ್ಮೆಗೆ ನಾವು ಭಯಪಡುತ್ತೇವೆ. ಮಳೆಗಾಲದ ಸಿಡಿಲು, ಮಿಂಚು ಸಹಿಸಿಕೊಂಡು ಯಾರೂ ಸುಮ್ಮನೆ ಹೊರಹೋಗಲು ಮನಸ್ಸು ಮಾಡುವುದಿಲ್ಲ. ಮನೆಯೊಳಗೆ ಇದ್ದರೂ ಸಿಡಿಲು ಮಿಂಚಿನ ಬಣ್ಣ, ಅದರ ಶಬ್ದಕ್ಕೆ ಗಾಬರಿ ಬೀಳುವುದು ಸಹಜ. ಹಿರಿಯರಂತೂ ಮಕ್ಕಳನ್ನು ಅತೀ ಜೋಪಾನ ಮಾಡಿಬಿಡುತ್ತಾರೆ.

ಇಲ್ಲೀಗ ಅಂತಹ ದೃಶ್ಯವೊಂದು ಸೆರೆಯಾಗಿದೆ. ಸಿಡಿಲು ಬಂದು ಬಡಿಯುತ್ತಿರುವ ಕ್ಷಣವೊಂದು ವಿಡಿಯೋದಲ್ಲಿ ದಾಖಲಾಗಿದೆ. ಇಂತಹ ಕ್ಷಣಗಳನ್ನು ಸೆರೆ ಹಿಡಿಯುವುದು ಬಹಳ ಕಷ್ಟದ ಕೆಲಸ. ಸಿಡಿಲು ಮಿಂಚಿನ ಫೋಟೊ ಸೆರೆ ಹಿಡಿಯಲು ಛಾಯಾಗ್ರಾಹಕನಿಗೆ ಉತ್ತಮ ಕೌಶಲ್ಯ ಬೇಕಿರುತ್ತದೆ. ವಿಡಿಯೋ ತೆಗೆಯಲೂ ಅಷ್ಟೇ. ಸಮಯ, ಸಂದರ್ಭಕ್ಕೆ ಸರಿಯಾಗಿ ಕಾದು ಕುಳಿತು ಈ ಕೆಲಸ ಮಾಡಬೇಕಾಗುತ್ತದೆ.

ಹಿಮಾಚಲ ಪ್ರದೇಶದ ಮಹಾದೇವ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಕುಲು ಜಿಲ್ಲೆಯ ಮಹಾದೇವ ದೇವಾಲಯದಲ್ಲಿ ಗುರುವಾರ ಈ ವಿಡಿಯೋವನ್ನು ಸೆರೆ ಹಿಡಿಯಲಾಗಿದೆ. ಉತ್ಸಾಹಿ ಛಾಯಾಗ್ರಾಹಕರೊಬ್ಬರು ಈ ದೃಶ್ಯಾವಳಿಯನ್ನು ತಮ್ಮ ಕ್ಯಾಮಾರಾದಲ್ಲಿ ಬಂಧಿಸಿದ್ದಾರೆ. ಬಳಿಕ, ಸಾಮಾಜಿಕ ಜಾಲತಾಣದಲ್ಲಿ ಕೂಡ ಇದನ್ನು ಅಪ್​ಲೋಡ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬಳಿಕ ಈ ವಿಡಿಯೋ ಮತ್ತಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಹಲವಾರು ಮಂದಿ ಇದನ್ನು ನೋಡಿ ಅಚ್ಚರಿಪಟ್ಟಿದ್ದಾರೆ. ಹಂಚಿಕೊಂಡಿದ್ದಾರೆ. ಅಪ್​​ಲೋಡ್ ಮಾಡಿದ ಕೆಲವೇ ದಿನಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಕಳೆದ ದಶಕದಿಂದ ಈಚೆಗೆ ಈ ಕಣಿವೆ ಪ್ರದೇಶದಲ್ಲಿ ಸಿಡಿಲು, ಮಿಂಚು ಪ್ರಮಾಣ ಅಧಿಕವಾಗಿದೆ ಎಂದು ಹೇಳಲಾಗುತ್ತಿದೆ. ಈ ಬಾರಿ ಮಹಾದೇವ ದೇವಾಲಯಕ್ಕೆ ಸಿಡಿಲು ಬಂದು ಬಡಿದಿದೆ. ಇದು ಕುಲು ಕಣಿವೆ ಪ್ರದೇಶದಲ್ಲಿ ಇರುವ ಅತಿ ಪುರಾತನ ದೇವಾಲಯವಾಗಿದೆ. ಕೆಲವರು ಈ ಘಟನೆಯನ್ನು ಶಿವನ ಆಶೀರ್ವಾದ ಈ ಪರ್ವತದ ಮೇಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋಲ್​ಗಪ್ಪಾದಲ್ಲಿ ರಿಂಗ್ ಇಟ್ಟು ಪ್ರಪೋಸ್ ಮಾಡಿದ ಹುಡುಗ; ಹೀಗೆ ಮಾಡಿದ್ರೆ ಯಾರೇ ಆದ್ರೂ ಬೀಳ್ದೇ ಇರ್ತಾರಾ?!

World Record: ಈಕೆಯ ರೆಪ್ಪೆ ನೋಡಿದರೆ ನೀವು ಹುಬ್ಬೇರಿಸೋದು ಖಚಿತ! ಏನಿದು ವಿಶೇಷ?

Published On - 7:25 pm, Sat, 12 June 21

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ