AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ; ಎಂಟು ತಿಂಗಳ ಮಗು ಪ್ರಾಣಾಪಾಯದಿಂದ ಪಾರು!

ಘಟನೆ ಜೂನ್​ 25ನೇ ತಾರೀಕಿನಂದು ನಡೆದಿದೆ. ಮಿಂಚಿನ ಬಡಿತಕ್ಕೆ ಒಳಗಾದ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿನಲ್ಲಿದ್ದ ಓರ್ವರು ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

Viral Video: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ; ಎಂಟು ತಿಂಗಳ ಮಗು ಪ್ರಾಣಾಪಾಯದಿಂದ ಪಾರು!
ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ
TV9 Web
| Edited By: |

Updated on: Jul 02, 2021 | 12:15 PM

Share

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಮಿಂಚಿನ ಹೊಡೆತ ಬಿದ್ದ ಭಯಾನಕ ಘಟನೆಯೊಂದು ನಡೆದಿದೆ. ಕಾರು ಕನ್ಸಾಸ್​ನ ​ಹೆದ್ದಾರಿಯಲ್ಲಿ ಸಾಗುತ್ತಿತ್ತು. ಗುಡುಗು ಮಿಂಚಿನ ಆರ್ಭಟ ಜೋರಾಗಿಯೇ ಇತ್ತು. ಕಾರಿನಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದು ತಿಳಿದು ಬಂದಿದೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಘಟನೆ ಜೂನ್​ 25ನೇ ತಾರೀಕಿನಂದು ನಡೆದಿದೆ. ಮಿಂಚಿನ ಬಡಿತಕ್ಕೆ ಒಳಗಾದ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿನಲ್ಲಿದ್ದ ಓರ್ವರು ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕಾರಿನಲ್ಲಿ 5 ಪ್ರಯಾಣಿಕರಿದ್ದರು. ಅವರಲ್ಲಿ ಎಂಟು ತಿಂಗಳ ಮಗು, ಮೂರು ವರ್ಷದ ಮಕ್ಕಳು ಹಾಗೂ ಒಂದುವರೆ ವರ್ಷದ ಮಗು ಕೂಡಾ ಇತ್ತು. ಕಾರಿನಲ್ಲಿದ್ದ ಪ್ರಯಾಣಿಕರೆಲ್ಲರೂ ಕೂಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ. 13 ಸೆಕೆಂಡುಗಳ ವೈರಲ್​ ಕ್ಲಿಪ್​ನಲ್ಲಿ ಗಮನಿಸುವಂತೆ ಜೋರಾಗಿ ಮಳೆ ಬರುತ್ತಿರುವುದು, ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದು ಹಾಗೂ ಅತಿಯಾದ ಮಳೆಯಿಂದಾಗಿ ವಾತಾವರಣ ಕಪ್ಪಾಗಿರುವುದು ಗೋಚರಿಸುತ್ತಿದೆ.

ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಘಟನೆ ಒಮ್ಮೆಲೆ ಬೆಜ್ಜಿಬೀಳಿಸುವಂತಿದೆ. ಘಟನೆ ನಡೆದ ತಕ್ಷಣವೇ ಮಕ್ಕಳು ಸುರಕ್ಷಿತರಾಗಿದ್ದಾರೆಯೇ ಎಂದು ವಿಚಾರಿಸಿದೆವು. ಎಲ್ಲಾ ಸುರಾಕ್ಷಿತರಾಗಿದ್ದರು ಆಗ ಕೊಂಚ ಸಮಾಧಾನವಾಯಿತು ಎಂದು ಹಿಂದಿನ ಜೀಪಿನಲ್ಲಿ ಕುಳಿತು ವಿಡಿಯೋ ಮಾಡುತ್ತಿದ್ದ ಪ್ರಯಾಣಿಕ ಹೋಬಿ ಸುದ್ದಿ ಮಾಧ್ಯಮದ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?

Viral Video: ಮದುವೆ ದಿನ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ಲಾಡು ತುರುಕಿದ ಪತಿ; ವಿಡಿಯೋ ನೋಡಿ ಕೋಪಗೊಂಡ ನೆಟ್ಟಿಗರು

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ