AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ; ಎಂಟು ತಿಂಗಳ ಮಗು ಪ್ರಾಣಾಪಾಯದಿಂದ ಪಾರು!

ಘಟನೆ ಜೂನ್​ 25ನೇ ತಾರೀಕಿನಂದು ನಡೆದಿದೆ. ಮಿಂಚಿನ ಬಡಿತಕ್ಕೆ ಒಳಗಾದ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿನಲ್ಲಿದ್ದ ಓರ್ವರು ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

Viral Video: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ; ಎಂಟು ತಿಂಗಳ ಮಗು ಪ್ರಾಣಾಪಾಯದಿಂದ ಪಾರು!
ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಮಿಂಚಿನ ಹೊಡೆತ
TV9 Web
| Edited By: |

Updated on: Jul 02, 2021 | 12:15 PM

Share

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಮಿಂಚಿನ ಹೊಡೆತ ಬಿದ್ದ ಭಯಾನಕ ಘಟನೆಯೊಂದು ನಡೆದಿದೆ. ಕಾರು ಕನ್ಸಾಸ್​ನ ​ಹೆದ್ದಾರಿಯಲ್ಲಿ ಸಾಗುತ್ತಿತ್ತು. ಗುಡುಗು ಮಿಂಚಿನ ಆರ್ಭಟ ಜೋರಾಗಿಯೇ ಇತ್ತು. ಕಾರಿನಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದು ತಿಳಿದು ಬಂದಿದೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಘಟನೆ ಜೂನ್​ 25ನೇ ತಾರೀಕಿನಂದು ನಡೆದಿದೆ. ಮಿಂಚಿನ ಬಡಿತಕ್ಕೆ ಒಳಗಾದ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿನಲ್ಲಿದ್ದ ಓರ್ವರು ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕಾರಿನಲ್ಲಿ 5 ಪ್ರಯಾಣಿಕರಿದ್ದರು. ಅವರಲ್ಲಿ ಎಂಟು ತಿಂಗಳ ಮಗು, ಮೂರು ವರ್ಷದ ಮಕ್ಕಳು ಹಾಗೂ ಒಂದುವರೆ ವರ್ಷದ ಮಗು ಕೂಡಾ ಇತ್ತು. ಕಾರಿನಲ್ಲಿದ್ದ ಪ್ರಯಾಣಿಕರೆಲ್ಲರೂ ಕೂಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ. 13 ಸೆಕೆಂಡುಗಳ ವೈರಲ್​ ಕ್ಲಿಪ್​ನಲ್ಲಿ ಗಮನಿಸುವಂತೆ ಜೋರಾಗಿ ಮಳೆ ಬರುತ್ತಿರುವುದು, ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದು ಹಾಗೂ ಅತಿಯಾದ ಮಳೆಯಿಂದಾಗಿ ವಾತಾವರಣ ಕಪ್ಪಾಗಿರುವುದು ಗೋಚರಿಸುತ್ತಿದೆ.

ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಘಟನೆ ಒಮ್ಮೆಲೆ ಬೆಜ್ಜಿಬೀಳಿಸುವಂತಿದೆ. ಘಟನೆ ನಡೆದ ತಕ್ಷಣವೇ ಮಕ್ಕಳು ಸುರಕ್ಷಿತರಾಗಿದ್ದಾರೆಯೇ ಎಂದು ವಿಚಾರಿಸಿದೆವು. ಎಲ್ಲಾ ಸುರಾಕ್ಷಿತರಾಗಿದ್ದರು ಆಗ ಕೊಂಚ ಸಮಾಧಾನವಾಯಿತು ಎಂದು ಹಿಂದಿನ ಜೀಪಿನಲ್ಲಿ ಕುಳಿತು ವಿಡಿಯೋ ಮಾಡುತ್ತಿದ್ದ ಪ್ರಯಾಣಿಕ ಹೋಬಿ ಸುದ್ದಿ ಮಾಧ್ಯಮದ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?

Viral Video: ಮದುವೆ ದಿನ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ಲಾಡು ತುರುಕಿದ ಪತಿ; ವಿಡಿಯೋ ನೋಡಿ ಕೋಪಗೊಂಡ ನೆಟ್ಟಿಗರು

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ