AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮರದ ಮೇಲೆ ಸಿಂಹ ಹಾಗೂ ಚಿರತೆಯ ಕಾದಾಟ, ರೋಚಕ ಕಾಳಗದ ದೃಶ್ಯ ಇಲ್ಲಿದೆ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಹಲವಾರು ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಮರದ ಮೇಲೆ ಸಿಂಹ ಮತ್ತು ಚಿರತೆಯೂ ಕಾದಾಟ ನಡೆಸಿದೆ. ಆದರೆ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಕ್ರೂರ ಪ್ರಾಣಿಗಳ ಕಾಳಗದ ವಿಡಿಯೋವು ಮೈ ಜುಮ್ಮ್ ಎನ್ನುವಂತಿದ್ದು, ಈ ವಿಡಿಯೋಗೆ ನೆಟ್ಟಿಗರಿಂದ ಕಾಮೆಂಟ್ ಗಳು ಹರಿದು ಬಂದಿದೆ.

Viral: ಮರದ ಮೇಲೆ ಸಿಂಹ ಹಾಗೂ ಚಿರತೆಯ ಕಾದಾಟ, ರೋಚಕ ಕಾಳಗದ ದೃಶ್ಯ ಇಲ್ಲಿದೆ
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: Jan 13, 2025 | 12:04 PM

Share

ಪ್ರಾಣಿಗಳ ಲೋಕದಲ್ಲಿ ಬೇಟೆಗಾಗಿ ಪ್ರಾಣಿಗಳ ನಡುವೆ ಪರಸ್ಪರ ಕಾದಾಟಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಈ ಪ್ರಾಣಿ ಪ್ರಪಂಚದಲ್ಲಿನ ಕಾದಾಟದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಕ್ರೂರ ಪ್ರಾಣಿಗಳಾದ ಹುಲಿ, ಚಿರತೆ, ಸಿಂಹವು ಹೊಂಚು ಹಾಕಿ ಬೇಟೆಯಾಡುವುದರಲ್ಲಿ ಒಂದು ಕೈ ಮುಂದೆ ಎನ್ನಬಹುದು. ಈ ಬಲಿಷ್ಠ ಜೀವಿಗಳು ಒಮ್ಮೆ ಗುರಿ ಇಟ್ಟು ಬೇಟೆಗಿಳಿದರೆ ಮುಗಿದೇ ಹೋಯಿತು ವಿಫಲವಾಗುವುದು ಬಹಳ ಕಡಿಮೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮರದ ಮೇಲೆ ಸಿಂಹ ಹಾಗೂ ಚಿರತೆಯ ನಡುವಿನ ಕಾಳಗವು ಮೈ ಜುಮ್ಮ್ ಎನಿಸುವಂತಿದೆ.

AMAZlNGNATURE ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಸಿಂಹ ಮತ್ತು ಚಿರತೆಯ ನಡುವಿನ ಸಂಘರ್ಷದ ವಿಡಿಯೋ ಇದಾಗಿದ್ದು, ಈ ಈ ಕಾಳಗ ಯಾವುದೇ ಕಾಡಿನಲ್ಲಿ ನಡೆಯದೇ ಮರದಲ್ಲಿ ನಡೆದಿದೆ. ಹೌದು, ಸಿಂಹ ಹಾಗೂ ಚಿರತೆ ನಡುವಿನ ಸಂಘರ್ಷ ನಡೆದಿದ್ದು, ಈ ಕ್ರೂರ ಪ್ರಾಣಿಗಳು ಮರದ ಮೇಲೆಯೇ ಉಗ್ರ ಹೋರಾಟಕ್ಕೆ ಇಳಿದಿದ್ದು, ಇತ್ತ ಈ ಸಿಂಹಿಣಿ ಕೂಡ ತನ್ನ ಶಕ್ತಿಯಿಂದ ಚಿರತೆಯನ್ನು ಮಣಿಸಲು ಮುಂದಾಗಿದೆ.

ಚಿರತೆಯು ನಾನೇನು ಕಮ್ಮಿ ಎಂದು ತನಗಿರುವ ಬಲದಿಂದ, ಸಿಂಹದ ಮೇಲೆ ಎರಗಿದೆ. ಆದರೆ ಕೊನೆಗೆ ಮರದ ಕೊಂಬೆಯೇ ಮುರಿದು ಬಿದಿದೆ. ಇತ್ತ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಮೈ ಜುಮ್ಮ್ ಎನಿಸುವ ಕಾದಾಟದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹತ್ತು ಮಿಲಿಯನ್ಸ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.

ಇದನ್ನೂ ಓದಿ: ಬೇರೆ ಕೆಲಸದ ಆಫರ್‌ ಇಲ್ಲದೇನೇ ಇನ್ಫೋಸಿಸ್‌ ಉದ್ಯೋಗಕ್ಕೆ ರಾಜೀನಾಮೆ ನೀಡಿದ ಟೆಕ್ಕಿ, ಪೋಸ್ಟ್ ವೈರಲ್

ವೀಡಿಯೋ ನೋಡಿ ನೆಟ್ಟಿಗರು, ಕ್ರೂರ ಪ್ರಾಣಿಗಳ ಕಾದಾಟದ ಬಗ್ಗೆ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರನು “ಪ್ರಕೃತಿಯನ್ನು ಪ್ರಕೃತಿಗಾಗಿ ನಿರ್ಮಿಸಲಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಈ ಕ್ರೂರ ಪ್ರಾಣಿಗಳು ಮರದಲ್ಲಿ ಏನು ಮಾಡುತ್ತಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರ ಬಳಕೆದಾರರು, ‘ಈ ಪ್ರಾಣಿಗಳ ಕಾದಾಟ ನೋಡುವುದಕ್ಕೆ ಭಯಂಕರವಾಗಿದೆ’ ಎಂದಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ