AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

ಸಿಂಹವನ್ನು ಕಾಡಿಸುತ್ತಾ ಆಮೆ ಸಂತೋಷಗೊಳ್ಳುತ್ತಿದೆ. ಸಿಂಹಕ್ಕೆ ನೀರು ಕುಡಿಯಲು ಬಿಡದೆ ಮತ್ತೆ ಮತ್ತೆ ಕಾಡಿಸತೊಡಗಿದೆ. ಇದರಿಂದ ಅಸಾಮಾಧಾನಗೊಂಡ ಸಿಂಹ ಏನೂ ಮಾಡಲು ತೋಚದೆ ಸುಮ್ಮನಾಗಿದೆ.

Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?
Follow us
TV9 Web
| Updated By: shruti hegde

Updated on: Jun 09, 2021 | 3:43 PM

ಪ್ರತಿನಿತ್ಯ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಕೆಲವು ತಮಾಷೆ ವಿಡಿಯೋಗಳಾಗಿದ್ದರೆ ಇನ್ನು ಕೆಲವು ರೋಮಾಂಚನಕಾರಿಯಾಗಿರುತ್ತದೆ. ಅದರಲ್ಲಿಯೂ ವಿಶೇಷವಾಗಿ ಪ್ರಾಣಿಗಳ ತುಂಟಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಪ್ರಾಣಿಗಳ ತುಂಟಾಟದ ವಿಡಿಯೋಗಳನ್ನು ನೋಡುವುದೇ ಒಂದು ರೀತಿಯ ಖುಷಿ. ಇಲ್ಲೊಂದು ಆಮೆಯು ದೈತ್ಯಾಕಾರದ ಸಿಂಹವನ್ನೇ ನಡುಗಿಸುತ್ತದೆ. ಇದೀಗ ವೈರಲ್​ ಆಗುತ್ತಿರುವ ಸಿಂಹ ಮತ್ತು ಪುಟ್ಟ ಆಮೆಯ ವಿಡಿಯೋ ನೋಡಿದ ನೆಟ್ಟಿಗರು ಆಮೆಯ ಕೀಟಲೆಯನ್ನು ಮೆಚ್ಚಿಕೊಂಡಿದ್ದಾರೆ. 

ಸಿಂಹ ಕಾಡಿನ ರಾಜ. ಅದು ಹೇಳಿದಂತೆಯೇ ಇತರ ಪ್ರಾಣಿಗಳು ಕೇಳಬೇಕೆಂಬ ಹಠ. ಸಿಂಹ ಎದುರು ಬಂದರೆ ಸಾಕು! ಉಳಿದ ಪ್ರಾಣಿಗಳೆಲ್ಲಾ ಬಾಲ ಮುದುಡಿಕೊಂಡು ತಲೆಮರಿಸಿಕೊಳ್ಳುತ್ತವೆ. ಆದರೆ ಪುಟ್ಟ ಆಮೆ ಮರಿಯೊಂದು ದೈತ್ಯಾಕಾರದ ಸಿಂಹಕ್ಕೆ ಕಾಟ ಕೊಡುತ್ತಿದೆ. ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಸಿಂಹ ಸೋಲುತ್ತಿದೆ. ಈ ವೀಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ಮೆಚ್ಚಿಕೊಂಡಿದ್ದು, ಉಳಿದೆಲ್ಲಾ ಪ್ರಾಣಿಗಳನ್ನು ಹತೋಟಿಯಲ್ಲಿಟ್ಟುಕೊಂಡ ಸಿಂಹಕ್ಕೆ ಆಮೆಗೆ ಮಾತುಕೇಳಿಸಲು ಆಗುತ್ತಿಲ್ಲ ಎಂದು ತಮಾಷೆ ಮಾಡಿದ್ದಾರೆ.

ಬಾಯಾರಿದ ಸಿಂಹ ನೀರು ಕುಡಿಯಲೆಂದು ಕೆರೆ ಬಳಿ ಬಂದಿದೆ. ನೆಮ್ಮದಿಯಿಂದ ನೀರು ಕುಡಿಯುತ್ತಿದೆ. ಸದ್ದಿಲ್ಲದೇ ನೀರಿನೊಳಗಿಂದ ಬಂದ ಆಮೆಯು ಸಿಂಹದ ಮೀಸೆಯನ್ನು ಎಳೆಯುತ್ತಿದೆ. ಸಿಂಹವು ತಪ್ಪಿಸಿಕೊಂಡಂತೆ ಮತ್ತೆ ಕಾಡಿಸುತ್ತಿದೆ. ಇದರಿಂದ ಸಿಂಹ ಅಸಾಮಾಧಾನಗೊಂಡು ಎದ್ದು ಹೊರಟಿದೆ.

ಸಿಂಹವನ್ನು ಕಾಡಿಸುತ್ತಾ ಆಮೆ ಸಂತೋಷಗೊಳ್ಳುತ್ತಿದೆ. ಸಿಂಹಕ್ಕೆ ನೀರು ಕುಡಿಯಲು ಬಿಡದೆ ಮತ್ತೆ ಮತ್ತೆ ಕಾಡಿಸತೊಡಗಿದೆ. ಇದರಿಂದ ಅಸಾಮಾಧಾನಗೊಂಡ ಸಿಂಹ ಏನೂ ಮಾಡಲು ತೋಚದೆ ಸುಮ್ಮನಾಗಿದೆ.

ಇದನ್ನೂ ಓದಿ:

Viral Video: ವರ ಪಕ್ಕದಲ್ಲಿರುವಾಗಲೇ ಸ್ನೇಹಿತ ಕೊಟ್ಟ ಗಿಫ್ಟ್​ ನೋಡು ವಧು ಕಂಗಾಲು! ಏನದು ಕುತೂಹಲ ಕೆರಳಿಸಿದ ಉಡುಗೊರೆ?

Viral Video: ನಾಯಿಯಿಂದಾದ ಅಚಾತುರ್ಯಕ್ಕೆ ವ್ಯಕ್ತಿಗೆ ಶಿಕ್ಷೆ! ನಿಜವಾಗಿಯೂ ಏನಾಯ್ತು ಅಲ್ಲಿ?

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್