AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಗೂಡಿನ ಗೇಟ್​ ತೆರೆದ ತಕ್ಷಣ ಮಾಲೀಕನ ಮೇಲೆ ಎರಗಿ ಮುದ್ದಿಸಿದ ಸಿಂಹ: ಬೆರಗಾದ ನಟ್ಟಿಗರು

ನಾಯಿಮರಿಯಂತೆ ಸಿಂಹವನ್ನು ಎತ್ತಿ ಆಡಿಸುವುದನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ. ಇನ್ನೂ ಕೆಲವರು ಈ ಭಯಾನಕ ವೀಡಿಯೋ ನೋಡಿ ಸಿಂಹ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ ಎಂದುಕೊಂಡಿದ್ದಾರೆ.

viral video: ಗೂಡಿನ ಗೇಟ್​ ತೆರೆದ ತಕ್ಷಣ ಮಾಲೀಕನ ಮೇಲೆ ಎರಗಿ ಮುದ್ದಿಸಿದ ಸಿಂಹ: ಬೆರಗಾದ ನಟ್ಟಿಗರು
ವೀಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: Dec 19, 2021 | 11:48 AM

Share

ಕಾಡು ಪ್ರಾಣಿಗಳನ್ನು ದೂರದಿಂದಲೆ ನೋಡಿದರೂ ಕಾಲು ನಡುಗುವಷ್ಟು ಭಯವಾಗುತ್ತದೆ. ಸಾಮಾನ್ಯವಾಗಿ ಸಿಂಹ, ಹುಲಿಯಂತಹ ಕಾಡ ಪ್ರಾಣಿಗಳನ್ನು ಮೃಗಾಲಯಗಳಲ್ಲಿ ನೋಡುತ್ತೇವೆ. ಗೂಡಿನಲ್ಲಿ ಬಂಧಿಯಾಗಿರುವ ಪ್ರಾಣಿ ಮತ್ತು ಅವುಗಳ ಆರ್ಭಟವನ್ನು ನೋಡಿಯೇ ಗಾಬರಿಯಾಗುತ್ತದೆ. ಹೀಗಿದ್ದಾಗ ಇಲ್ಲೊಬ್ಬ ವ್ಯಕ್ತಿ ಸಿಂಹವೊಂದನ್ನು ಸಾಕಿದ್ದಾರೆ. ಅಲ್ಲದೆ ಅದರರೊಟ್ಟಿಗೆ ಅನ್ಯೋನ್ಯವಾದ ಸ್ನೇಹ ಬೆಳೆಸಿದ್ದಾರೆ. ಅದೆಷ್ಟರಮಟ್ಟಿಗೆ ಎಂದರೆ ಗೂಡಿನ ಗೇಟನ್ನು ತೆರೆದ ತಕ್ಷಣ ಸಿಂಹ ವ್ಯಕ್ತಿಯ ಮೈಮೇಲೆ ಎರಗಿ ಅದರದೇ ರೀತಿಯಲ್ಲಿ ಮುದ್ದಿಸುತ್ತದೆ. ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ನಾಯಿಮರಿಯಂತೆ ಸಿಂಹವನ್ನು ಎತ್ತಿ ಆಡಿಸುವುದನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ. ಇನ್ನೂ ಕೆಲವರು ಈ ಭಯಾನಕ ವೀಡಿಯೋ ನೋಡಿ ಸಿಂಹ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ ಎಂದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದ ಕಲಹರಿ ಮರುಭೂಮಿಯಲ್ಲಿನ ಮೀಸಲು ಪ್ರದೇಶದಲ್ಲಿ ಈ ವೀಡಿಯೋವನ್ನು ಸೆರೆಹಿಡಿಯಲಾಗಿದೆ. ವಾಲ್​ ಎನ್ನುವ ವ್ಯಕ್ತಿ ಸಿಂಹವನ್ನು ಸಾಕಿದ್ದು ಅದಕ್ಕೆ ಸಿರ್ಗಾ ಎಂದು ನಾಮಕರಣ ಮಾಡಿದ್ದಾರೆ. ಸಿರ್ಗಾಗೆ 9 ವರ್ಷ ವಯಸ್ಸು. ತಾವು ಸಾಕಿದ ಪ್ರೀತಿಯ ಸಿರ್ಗಾದ ಇನ್ಸ್ಟಾಗ್ರಾಮ್​ ಖಾತೆಯನ್ನೂ ತೆರೆದಿದ್ದಾರೆ. ಸಿರ್ಗಾಥೆಲಿಯೊನೆಸ್​ ಎನ್ನುವ ಹೆಸರಿನ ಪೇಜ್​ಅನ್ನು ತೆರೆದಿದ್ದಾರೆ. ಆಗಾಗ ಅದರಲ್ಲಿ ಸಿರ್ಗಾದ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುತ್ತಾರೆ.

View this post on Instagram

A post shared by Sirga (@sirgathelioness)

ಸಿರ್ಗಾದ ಇನ್ಸ್ಟಾಗ್ರಾಮ್​ ಅಕೌಂಟ್​ಗೆ 78 ಸಾವಿರ ಫಾಲೋವರ್ಸ್​ ಇದ್ದಾರೆ. ಸದ್ಯ ಕಲಹರಿ ಮರುಭೂಮಿಯಲ್ಲಿ ಸಿರ್ಗಾನ ಓಡಾಟ, ಅದರ ದಿನನಿತ್ಯದ ಜೀವನದ ಕುರಿತು ಕೆಲವು ವೀಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಗೇಟನ್ನು ತೆರೆದ ತಕ್ಷಣ ಪ್ರೀತಿಯಿಂದ ತನ್ನ ಮಾಲೀಕನ ಮೇಲೆ ಹಾರುವ ವೀಡಿಯೋ ಸಖತ್​ ವೈರಲ್​ ಆಗಿದೆ. ಸದ್ಯ ವೀಡಿಯೋ 2,700ಕ್ಕೆ ಹೆಚ್ಚು ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

Viral Video: ಭರ್ಜರಿ ನೃತ್ಯದ ಮೂಲಕ ನೆಟ್ಟಿಗರ ಮನಗೆದ್ದ 63 ವರ್ಷದ ಮಹಿಳೆ; ವಿಡಿಯೋ ನೋಡಿ

ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ