Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕುಟುಂಬ ಸಮೇತರಾಗಿ ಮರದ ಮೇಲೆ ಮಲಗಿದ ಸಿಂಹಗಳು; ವಿಡಿಯೋ ವೈರಲ್

ಸಿಂಹಗಳು ಬೇಟೆಯಾಡುವ ಅದೆಷ್ಟೋ ಸುದ್ದಿಗಳನ್ನು ಓದಿದ್ದೇವೆ ಹಾಗೂ ವಿಡಿಯೋಗಳನ್ನು ನೋಡಿದ್ದೇವೆ. ಆದರೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸಿಂಹಗಳು ಸಾಲಾಗಿ ತನ್ನ ಕುಟುಂಬಸ್ಥರೊಂದಿಗೆ ಮಲಗಿವೆ. ಇದನ್ನೂ ಕಂಡ ನೆಟ್ಟಿಗರು ಕೂಡ ಅಚ್ಚರಿಯಿಂದ ಪ್ರತಿಕ್ರಿಯೆ ನೀಡಿದ್ದಾರೆ.

Video Viral: ಕುಟುಂಬ ಸಮೇತರಾಗಿ ಮರದ ಮೇಲೆ ಮಲಗಿದ ಸಿಂಹಗಳು; ವಿಡಿಯೋ ವೈರಲ್
ಸಿಂಹಗಳು
Follow us
TV9 Web
| Updated By: preethi shettigar

Updated on: Feb 21, 2022 | 12:47 PM

ಅರಣ್ಯ ಲೋಕದಲ್ಲಿ ಎಲ್ಲವೂ ನಿಜಕ್ಕೂ ವಿಚಿತ್ರ. ಇಲ್ಲಿ, ಯಾರು ಯಾರನ್ನು ಬೇಟೆಯಾಡುತ್ತಾರೆ ಎಂಬುದರ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ. ಆದರೆ ಅನೇಕ ಬಾರಿ ಕೂತುಹಲ ಹುಟ್ಟಿಸುವ ಅನೇಕ ಘಟನೆಗಳು ನಡೆಯುತ್ತವೆ. ಅಂತಹ ವೀಡಿಯೊವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ(Social media) ವೈರಲ್​ ಆಗಿದೆ. ಸಾಮಾನ್ಯವಾಗಿ ಒಂದು ಮನೆಯಲ್ಲಿ ಕುಟುಂಬಸ್ಥರೆಲ್ಲಾ(Family) ಸೇರಿ ಗುಂಪು ಗುಂಪಾಗಿ ಮಲಗುವುದು ರೂಢಿ ಇದೆ. ಆದರೆ ಇದೇ ಪದ್ಧತಿ ಕಾಡಿನಲ್ಲಿಯೂ ಮುಂದುವರಿದಿದೆ. ಸಿಂಹಗಳು ಮರದ ಮೇಲೆ ಒಟ್ಟಾಗಿ ಮಲಗಿರುವ ವಿಡಿಯೋ ಸದ್ಯ ವೈರಲ್(Viral)​ ಆಗಿದೆ.

ಸಿಂಹಗಳು ಬೇಟೆಯಾಡುವ ಅದೆಷ್ಟೋ ಸುದ್ದಿಗಳನ್ನು ಓದಿದ್ದೇವೆ ಹಾಗೂ ವಿಡಿಯೋಗಳನ್ನು ನೋಡಿದ್ದೇವೆ. ಆದರೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸಿಂಹಗಳು ಸಾಲಾಗಿ ತನ್ನ ಕುಟುಂಬಸ್ಥರೊಂದಿಗೆ ಮಲಗಿವೆ. ಇದನ್ನೂ ಕಂಡ ನೆಟ್ಟಿಗರು ಕೂಡ ಅಚ್ಚರಿಯಿಂದ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೊವನ್ನು ನೋಡಿದರೆ, ಸಿಂಹವು ಸಹ ಕುಟುಂಬಸ್ಥ ಜೀವಿ. ಅದು ಕೂಡ ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತದೆ ಎಂದು ನಿಮಗೆ ಅರ್ಥವಾಗುತ್ತದೆ. ವೈರಲ್ ಆಗುತ್ತಿರುವ ಈ ವೀಡಿಯೋದಲ್ಲಿ ಸಿಂಹಗಳ ಕುಟುಂಬವೊಂದು ಸಂತಸದಿಂದ ಮರದ ಮೇಲೆ ಮಲಗಿರುವುದನ್ನು ನೋಡಬಹುದು. ಈ ವೀಡಿಯೋ ನೋಡಿದರೆ ಸಿಂಹವೂ ಮಧ್ಯಾಹ್ನದ ನಿದ್ದೆಯನ್ನು ಬಹಳ ಮೋಜಿನಿಂದಲೇ ಮಾಡುತ್ತಿವೆ ಎನಿಸುತ್ತದೆ. ಈ ವಿಡಿಯೋ ಕ್ಲಿಪ್ ಅನ್ನು ರಾಷ್ಟ್ರೀಯ ಉದ್ಯಾನವನದಲ್ಲಿ ಸೆರೆಹಿಡಿಯಲಾಗಿದೆ. ವೈರಲ್​ ಆದ ವಿಡಿಯೋದಲ್ಲಿ ಆನೆಯು ಕೂಡ ಹಾದು ಹೋಗುತ್ತದೆ.

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಹಂಚಿಕೊಂಡಿದ್ದಾರೆ. ಸದ್ಯ 16 ಸಾವಿರಕ್ಕೂ ಹೆಚ್ಚು ವ್ಯೂವ್ಸ್​  ಪಡೆದುಕೊಂಡಿರುವ ಈ ವಿಡಿಯೋ ನೆಟ್ಟಿಗರನ್ನು ತನ್ನತ್ತ ಆಕರ್ಷಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ಈ ವಿಡಿಯೋವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಅನೇಕ ಬಳಕೆದಾರರು ವೀಡಿಯೊದಲ್ಲಿ ತಮ್ಮ ಪ್ರತಿಕ್ರಿಯೆಯನ್ನು ಕಮೆಂಟ್​ ಮೂಲಕ ವ್ಯಕ್ತಪಡಿಸಿದ್ದಾರೆ. ಊಟದ ನಂತರ ಒಳ್ಳೆಯ ನಿದ್ದೆ ಬೇಕು ಎಂದು ಒಬ್ಬರು ಕಮೆಂಟ್​ ಮಾಡಿದರೆ, ಮತ್ತೊಬ್ಬರು ಕೌಟುಂಬಿಕ ಸಮಯ, ಅದ್ಭುತ! ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Viral Video: ಮದುವೆಯಲ್ಲಿ ವರನನ್ನು ಪದೇಪದೆ ತಬ್ಬಿಕೊಂಡ ಬುರ್ಖಾಧಾರಿ ಮಹಿಳೆ; ಅಸಲಿ ವಿಚಾರ ತಿಳಿದು ಶಾಕ್ ಆದ ವಧು!

ವ್ಯಕ್ತಿ ನುಡಿಸಿದ ಬಾಂಜೋ ನಾದಕ್ಕೆ ಕಿವಿಯಾಡಿಸಿದ ನರಿ; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು