AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮ್‌ ಮರಿಗಳ ತಂಟೆಗೆ ಬಂದ್ರೆ ಜೋಕೆ; ಕಾಡಿನ ರಾಜನನ್ನೇ ಅಟ್ಟಾಡಿಸಿಕೊಂಡು ಹೋದ ಸಿಂಹಿಣಿಯರು

ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಕಾಣ ಸಿಗುತ್ತಿರುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ಹಾಸ್ಯಮಯವಾಗಿದ್ದರೆ, ಇನ್ನೂ ಕೆಲವು ದೃಶ್ಯಗಳು ಬೆಚ್ಚಿ ಬೀಳಿಸುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ನಮ್‌ ಮರಿಗಳ ತಂಟೆಗೆ ಬಂದ್ರೆ ಜಾಗ್ರತೆ ಎಂದು ಸಿಂಹಿಣಿಯರ ಗುಂಪೊಂದು ಒಂಟಿ ಸಿಂಹದ ಮೇಲೆ ದಾಳಿ ನಡೆಸಿವೆ. ಈ ಶಾಕಿಂಗ್‌ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 01, 2025 | 5:05 PM

Share

ಕಾಡಿನ ರಾಜ ಸಿಂಹ ತುಂಬಾನೇ ಬಲಿಷ್ಟ ಪ್ರಾಣಿ. ಈ ಸಿಂಹಗಳೇ ಕಾಡಿನ ಇತರ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುತ್ತವೆ. ಇವುಗಳ ಘರ್ಜನೆಯನ್ನು ಕೇಳಿದ್ರೆ ಸಾಕು ಇತರ ಪ್ರಾಣಿಗಳು ಓಡಿ ಹೋಗುತ್ತವೆ. ಹೀಗೆ ಕಾಡಿನ ರಾಜ ಇತರ ಪ್ರಾಣಿಗಳ ಮೇಲೆ ಅಟ್ಯಾಕ್‌ ಮಾಡುವಂತಹ ಶಾಕಿಂಗ್‌ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ನೀವು ಎಂದಾದರೂ ಸಿಂಹದ ಮೇಲೆ ಸಿಂಹಿಣಿ ದಾಳಿ ನಡೆಸುವುದನ್ನು ನೋಡಿದ್ದೀರಾ? ಇದೀಗ ಇಲ್ಲೊಂದು ಇಂತಹ ವಿಡಿಯೋ ವೈರಲ್‌ ಆಗಿದ್ದು, ಸಿಂಹಿಣಿಯರ ಗುಂಪೊಂದು ಒಂಟಿ ಸಿಂಹದ ಮೇಲೆ ಅಟ್ಯಾಕ್‌ ಮಾಡಿವೆ. ಹೌದು ನಮ್‌ ಮಕ್ಕಳ ತಂಟೆಗೆ ಬಂದ್ರೆ ಹುಷಾರ್‌ ಎನ್ನುತ್ತಾ ಮರಿಗಳನ್ನು ಜೋಪಾನ ಮಾಡುವ ಸಲುವಾಗಿ ಸಿಂಹವನ್ನು ಸಿಂಹಿಣಿಯರ ತಂಡ ಅಟ್ಟಾಡಿಸಿಕೊಂಡು ಹೋಗಿವೆ.

ಸಿಂಹಿಣಿಯರ ಗುಂಪೊಂದು ತಮ್ಮ ಮರಿಗಳ ಜೊತೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಒಂಟಿ ಸಿಂಹವೊಂದು ಅಲ್ಲಿಗೆ ಎಂಟ್ರಿ ಕೊಟ್ಟಿದ್ದು, ಇದು ಮರಿಗಳ ಮೇಲೆ ದಾಳಿ ಮಾಡಿದ್ರೆ ಏನಪ್ಪಾ ಮಾಡೋದು ಎಂದು ಸಿಂಹಿಣಿಯರು ಮರಿಗಳನ್ನು ರಕ್ಷಿಸುವ ಸಲುವಾಗಿ ಆ ಸಿಂಹವನ್ನು ಅಟ್ಟಾಡಿಸಿಕೊಂಡು ಹೋಗಿವೆ. ಇವುಗಳ ದಾಳಿಗೆ ಎದರಿ ಕಾಡಿನ ರಾಜ ಭಯದಿಂದ ಕಾಲ್ಕಿತ್ತಿದೆ.

ಈ ಕುರಿತ ವಿಡಿಯೋವನ್ನು AMAZINGNATURE ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸಿಂಹಿಣಿಯರ ಗುಂಪು ಒಂಟಿ ಸಿಂಹವನ್ನು ಅಟ್ಟಾಡಿಸಿಕೊಂಡು ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿವಾಹಿತ ಮಹಿಳೆಯೊಂದಿಗೆ ಯುವಕನ ರೊಮ್ಯಾನ್ಸ್; ಗಂಡನ ಕೈಯಿಂದ ಹೆಂಡ್ತಿ ಲವರ್‌ಗೆ ಬಿತ್ತು ಗೂಸಾ

ಜನವರಿ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 8.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯವಂತೂ ತುಂಬಾನೇ ಅದ್ಭುತವಾಗಿದೆʼ ಎಂದು ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಾಯಂದಿರೇ ಹಾಗೇ ತಮ್ಮ ಮಕ್ಕಳಿಗೆ ಯಾರು ತೊಂದ್ರೆ ಕೊಟ್ಟರೂ ಸುಮ್ನೆ ಇರೋಲ್ಲʼ ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​