AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಲತಾ ಮಂಗೇಶ್ಕರ್ ‘ಕ್ರಾಂತಿ’ ಹಾಡಿಗೆ ವೃದ್ಧದಂಪತಿ ಲಿಪ್​ ಸಿಂಕ್; 2 ಮಿಲಿಯನ್​ ವೀಕ್ಷಣೆ​

Kranthi : ಇರುವುದೊಂದೇ ಜೀವನ. ಕ್ಷಣಕ್ಷಣಕ್ಕೂ ಜೀವಂತಿಕೆಯಿಂದ ನಿಮ್ಮ ಮನಸ್ಸಿಗೆ ಒಪ್ಪುವಂತೆ ಬದುಕುವುದು ಮುಖ್ಯ. ಏಕೆಂದರೆ, ನೀವು ಹಾದು ಬಂದ ಹಾದಿ ನಿಮಗೇ ಗೊತ್ತು! ಈ ರೀಲ್ಸ್ ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ.

Viral Video : ಲತಾ ಮಂಗೇಶ್ಕರ್ 'ಕ್ರಾಂತಿ' ಹಾಡಿಗೆ ವೃದ್ಧದಂಪತಿ ಲಿಪ್​ ಸಿಂಕ್; 2 ಮಿಲಿಯನ್​ ವೀಕ್ಷಣೆ​
ನಂದಾ ಚೌಹಾಣ ದಂಪತಿ
TV9 Web
| Edited By: |

Updated on: May 22, 2023 | 1:21 PM

Share

Old Couple : ಮಕ್ಕಳೆಲ್ಲ ದೊಡ್ಡವರಾದಂತೆ ಅವರವರ ವೃತ್ತಿ, ಸಂಸಾರದೊಳಗೆ ಮುಳುಗಿಬಿಡುತ್ತಾರೆ. ಮಕ್ಕಳನ್ನು ಸಾಕಿಸಲುಹಿ ಅವರನ್ನು ಒಂದು ಹಂತಕ್ಕೆ ತಂದ ಮೇಲೆ ಪೋಷಕರು ಒಂಟಿತನ ಅನುಭವಿಸಲು ಶುರುಮಾಡುತ್ತಾರೆ. ವಯೋಸಹಜ ಮತ್ತು ಮನೋಸಹಜ ಏರಿಳಿತಗಳು ಅವರನ್ನು ಹಣ್ಣಾಗಿಸುತ್ತವೆ. ಸಮಾನಮನಸ್ಕರಿಗಾಗಿ ಪರಿತಪಿಸುತ್ತ ಎಷ್ಟೋ ಸಲ ತಮ್ಮ ತಮ್ಮ ಗೂಡುಗಳಲ್ಲಿಯೇ ಉಳಿದುಬಿಡುತ್ತಾರೆ. ಆದರೆ ಇಂಥವರಿಗೆ ಉಸಿರಾಡಲು ಇಂದು ನೆರವಾಗಿರುವುದು ಮೊಬೈಲ್​ ಮೂಲಕ ಸಾಮಾಜಿಕ ಜಾಲತಾಣಗಳೊಂದಿಗೆ ಸಂಪರ್ಕ ಸಾಧಿಸುವುದು. ಇದೀಗ ವೈರಲ್ ಆಗಿರುವ ಈ ಕೆಳಗಿನ ವಿಡಿಯೋ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕ್ರಾಂತಿ ಸಿನೆಮಾದಲ್ಲಿ ಲತಾ ಮಂಗೇಶ್ಕರ್ ಮತ್ತು ನಿತಿನ್​ ಮುಖೇಶ್​ ಹಾಡಿರುವ ಈ ಹಾಡಿಗೆ ಈ ವೃದ್ಧದಂಪತಿ ಲಿಪ್​ ಸಿಂಕ್​ ಮಾಡಿದ್ದಾರೆ. ಇವರಿಬ್ಬರ ಲವಲವಿಕೆಯ ಈ ವಿಡಿಯೋ ಅನ್ನು ಈಗಾಗಲೇ 2 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. ನಂದಾ ಚೌಹಾಣ್​ ಎಂಬುವವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಖಾತೆಯಲ್ಲಿ ಈ ದಂಪತಿಯ ಸಾಕಷ್ಟು ವಿಡಿಯೋಗಳನ್ನು ನೋಡಬಹುದಾಗಿದೆ.

ನೆಟ್ಟಿಗರು ಈ ಸೋಮವಾರ ಇಂಥಾ ಒಳ್ಳೆಯ ರೀಲ್ಸ್​ ನೋಡಿ ಮೂಡ್ ಫ್ರೆಷ್ ಆಯಿತು ಎಂದು ಉತ್ಸಾಹಗೊಂಡಿದ್ದಾರೆ. ನಿಮ್ಮಿಬ್ಬರನ್ನೂ ಆ ದೇವರು ಮತ್ತಷ್ಟು ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ. ನೀವು ಹೀಗೇ ಖುಷಿಯಿಂದ ಇರಿ ಎಂದು ಅನೇಕರು ಹಾರೈಸಿದ್ಧಾರೆ. ಇದು ನಿಜವಾದ ಪ್ರೀತಿ. ಅವರ ಪತ್ನಿಯ ಉತ್ಸಾಹ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ ಇನ್ನೂ ಕೆಲವರು.

ಈ ಹಾಡು ಕೂಡ ಮನಸ್ಸು ತಟ್ಟುವಂತಿದೆ. ಹಾಗೆಯೇ ಈ ಹಿರಿಯರ ಅಭಿನಯವೂ. ವಾಹ್​ ಆಂಟೀ, ನಿಮ್ಮಂತೆ ನನ್ನ ತಾಯಿಯೂ ರೀಲ್ಸ್ ಮಾಡಲು ಇಚ್ಛಿಸುತ್ತಾರೆ. ಆದರೆ ನನ್ನ ತಂದೆ ಇದಕ್ಕೆ ಸಹಕರಿಸುವುದಿಲ್ಲ. ನಿಮ್ಮನ್ನು ನೋಡಿ ಬಹಳ ಖುಷಿ ಆಗುತ್ತಿದೆ ಎಂದು ಒಬ್ಬರು ಹೇಳಿದ್ದಾರೆ.

ಇರುವುದೊಂದೇ ಜೀವನ. ಕ್ಷಣಕ್ಷಣಕ್ಕೂ ಜೀವಂತಿಕೆಯಿಂದ ನಿಮ್ಮ ಮನಸ್ಸಿಗೆ ಒಪ್ಪುವಂತೆ ಬದುಕುವುದು ಮುಖ್ಯ. ಏಕೆಂದರೆ, ನೀವು ಹಾದು ಬಂದ ಹಾದಿ ನಿಮಗೇ ಗೊತ್ತು! ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್