AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತುಪೋಷಕರೊಂದಿಗೆ ಹೊರಡುವ ಮುನ್ನ ಈ ಮಗು ಕೋರ್ಟ್​ನಲ್ಲಿ ಆಡಿದ ಮಾತುಗಳು ನಿಮ್ಮನ್ನು ಆರ್ದ್ರಗೊಳಿಸುತ್ತವೆ

Adoption : ಈ ಹೊಸ ತಾಯಿಯನ್ನು ತುಂಬಾ ಪ್ರೀತಿಸುತ್ತೇನೆ, ಬಹಳ ಒಳ್ಳೆಯ ತಾಯಿ ಆಕೆ ಎಂದು ತನ್ನ ದತ್ತುತಾಯಿಯ ಬಗ್ಗೆ ನ್ಯಾಯಾಧೀಶರಿಗೆ ಹೇಳುತ್ತಿದೆ ಈ ಮಗು. ಈ ವಾರಾಂತ್ಯದ ಮೂಡಿನಲ್ಲಿರುವ ನೀವೊಮ್ಮೆ ಈ ವಿಡಿಯೋ ನೋಡಬಹುದೆ?

ದತ್ತುಪೋಷಕರೊಂದಿಗೆ ಹೊರಡುವ ಮುನ್ನ ಈ ಮಗು ಕೋರ್ಟ್​ನಲ್ಲಿ ಆಡಿದ ಮಾತುಗಳು ನಿಮ್ಮನ್ನು ಆರ್ದ್ರಗೊಳಿಸುತ್ತವೆ
Little boys moving words during adoption hearing
TV9 Web
| Edited By: |

Updated on:Nov 12, 2022 | 3:48 PM

Share

Viral Video : ನ್ಯಾಯಾಲಯದಲ್ಲಿ ದತ್ತು ಪ್ರಕ್ರಿಯೆಯ ಸಂದರ್ಭದಲ್ಲಿ ತನ್ನ ಹೊಸ ತಾಯಿಯನ್ನು ತಾನೆಷ್ಟು ಪ್ರೀತಿಸುತ್ತೇನೆ ಎಂದು ಈ ಮಗು ತನ್ನ ಮಾತಿನಲ್ಲಿ ವಿವರಿಸುವುದನ್ನು ಕೇಳುವಾಗ ಯಾರಿಗೂ ಕಣ್ಣುಗಳು ತೇವವಾಗದೇ ಇರಲಾರವು. ಅತ್ಯಂತ ಭಾವನಾತ್ಮಕವಾಗಿ ಹಿಡಿದಿಡುವ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ತನ್ನ ಹೊಸ ತಾಯಿಯ ಪಕ್ಕದಲ್ಲಿ ಮತ್ತು ನ್ಯಾಯಾಧೀಶರ ಎದುರಿನಲ್ಲಿ ಕುಳಿತು ಈ ಮಗು ಮನಸಿನ ಮಾತು ಹೇಳುತ್ತಿದೆ.

View this post on Instagram

A post shared by ????????? ???? (@majicallynews)

ತಾನು ಈ ಹೊಸ ತಾಯಿಯನ್ನು ತುಂಬಾ ಪ್ರೀತಿಸುತ್ತೇನೆ ಎಂದು ನ್ಯಾಯಾಧೀಶರಿಗೆ ಹೇಳುತ್ತಿದೆ. ಅವಳು ಬಹಳ ಒಳ್ಳೆಯ ತಾಯಿ ಅವಳನ್ನು ತುಂಬಾನೇ ಪ್ರೀತಿಸುತ್ತೇನೆ ಎನ್ನುತ್ತಿದೆ. ಈ ಮಾತು ಕೇಳುತ್ತಿದ್ದಂತೆ, ದತ್ತು ಪಡೆಯುತ್ತಿರುವ ತಾಯಿಯ ಭಾವದ ಕಟ್ಟೆಯೊಡೆಯುತ್ತದೆ. ಮಗುವಿನ ಕಡೆ ವಾಲುತ್ತ ಅದನ್ನು ಅಪ್ಪುತ್ತಾಳೆ. ಪ್ರತಿಯಾಗಿ ಮಗುವೂ ಅವಳನ್ನು ಅಪ್ಪುತ್ತದೆ.

ಆಗ ನ್ಯಾಯಾಧೀಶರು, ‘ಓ ಮೈ ಗಾಡ್​! ನಿನಗಿದೆಲ್ಲ ಗೊತ್ತಾ? ನಿಜ, ನಮ್ಮ ಬಗ್ಗೆ ಯಾರಾದರೂ ಕಾಳಜಿ ತೋರಿಸಿದಾಗ ಅವರಿಗೆ ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳುವುದು ಬಹಳ ಮುಖ್ಯ. ನೀನು ಈ ವಿಷಯದಲ್ಲಿ ಬಹಳ ಅದೃಷ್ಟವಂತ ಮತ್ತು ನಿನ್ನ ಹೊಸ ಪೋಷಕರೂ ಕೂಡ ಅದೃಷ್ಟವಂತರು ನಿನ್ನನ್ನು ಪಡೆಯಲು. ಇದೆಲ್ಲವನ್ನು ನೋಡಲು ನನಗೆ ಬಹಳ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಈಗಾಗಲೇ ಈ ವಿಡಿಯೋ ಅನ್ನು 65,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 4,600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ಎಂಥ ಭಾವುಕ ಕ್ಷಣಗಳಿವು, ಇದಕ್ಕಿಂತ ಹೆಚ್ಚಿಗೆ ಇನ್ನೇನು ಬೇಕು ತಾಯಿಯಾದವಳಿಗೆ ಎಂದಿದ್ದಾರೆ ಒಬ್ಬರು. ಕೊನೆಗೂ ಈ ಮಗುವಿಗೆ ಒಳ್ಳೆಯ ಅಪ್ಪ ಅಮ್ಮ ಮತ್ತು ಮನೆ ದೊರಕಿತ್ತಲ್ಲ, ನನಗಂತೂ ತುಂಬಾ ಖುಷಿಯಾಯಿತು ಎಂದಿದ್ದಾರೆ ಇನ್ನೊಬ್ಬರು.

ಇದೆಲ್ಲವನ್ನೂ ಓದಿದಿ ನೋಡಿದ ನಿಮಗೆ ಈ ಕ್ಷಣದಲ್ಲಿ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:48 pm, Sat, 12 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್