AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತುಪೋಷಕರೊಂದಿಗೆ ಹೊರಡುವ ಮುನ್ನ ಈ ಮಗು ಕೋರ್ಟ್​ನಲ್ಲಿ ಆಡಿದ ಮಾತುಗಳು ನಿಮ್ಮನ್ನು ಆರ್ದ್ರಗೊಳಿಸುತ್ತವೆ

Adoption : ಈ ಹೊಸ ತಾಯಿಯನ್ನು ತುಂಬಾ ಪ್ರೀತಿಸುತ್ತೇನೆ, ಬಹಳ ಒಳ್ಳೆಯ ತಾಯಿ ಆಕೆ ಎಂದು ತನ್ನ ದತ್ತುತಾಯಿಯ ಬಗ್ಗೆ ನ್ಯಾಯಾಧೀಶರಿಗೆ ಹೇಳುತ್ತಿದೆ ಈ ಮಗು. ಈ ವಾರಾಂತ್ಯದ ಮೂಡಿನಲ್ಲಿರುವ ನೀವೊಮ್ಮೆ ಈ ವಿಡಿಯೋ ನೋಡಬಹುದೆ?

ದತ್ತುಪೋಷಕರೊಂದಿಗೆ ಹೊರಡುವ ಮುನ್ನ ಈ ಮಗು ಕೋರ್ಟ್​ನಲ್ಲಿ ಆಡಿದ ಮಾತುಗಳು ನಿಮ್ಮನ್ನು ಆರ್ದ್ರಗೊಳಿಸುತ್ತವೆ
Little boys moving words during adoption hearing
TV9 Web
| Edited By: ಶ್ರೀದೇವಿ ಕಳಸದ|

Updated on:Nov 12, 2022 | 3:48 PM

Share

Viral Video : ನ್ಯಾಯಾಲಯದಲ್ಲಿ ದತ್ತು ಪ್ರಕ್ರಿಯೆಯ ಸಂದರ್ಭದಲ್ಲಿ ತನ್ನ ಹೊಸ ತಾಯಿಯನ್ನು ತಾನೆಷ್ಟು ಪ್ರೀತಿಸುತ್ತೇನೆ ಎಂದು ಈ ಮಗು ತನ್ನ ಮಾತಿನಲ್ಲಿ ವಿವರಿಸುವುದನ್ನು ಕೇಳುವಾಗ ಯಾರಿಗೂ ಕಣ್ಣುಗಳು ತೇವವಾಗದೇ ಇರಲಾರವು. ಅತ್ಯಂತ ಭಾವನಾತ್ಮಕವಾಗಿ ಹಿಡಿದಿಡುವ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ತನ್ನ ಹೊಸ ತಾಯಿಯ ಪಕ್ಕದಲ್ಲಿ ಮತ್ತು ನ್ಯಾಯಾಧೀಶರ ಎದುರಿನಲ್ಲಿ ಕುಳಿತು ಈ ಮಗು ಮನಸಿನ ಮಾತು ಹೇಳುತ್ತಿದೆ.

ತಾನು ಈ ಹೊಸ ತಾಯಿಯನ್ನು ತುಂಬಾ ಪ್ರೀತಿಸುತ್ತೇನೆ ಎಂದು ನ್ಯಾಯಾಧೀಶರಿಗೆ ಹೇಳುತ್ತಿದೆ. ಅವಳು ಬಹಳ ಒಳ್ಳೆಯ ತಾಯಿ ಅವಳನ್ನು ತುಂಬಾನೇ ಪ್ರೀತಿಸುತ್ತೇನೆ ಎನ್ನುತ್ತಿದೆ. ಈ ಮಾತು ಕೇಳುತ್ತಿದ್ದಂತೆ, ದತ್ತು ಪಡೆಯುತ್ತಿರುವ ತಾಯಿಯ ಭಾವದ ಕಟ್ಟೆಯೊಡೆಯುತ್ತದೆ. ಮಗುವಿನ ಕಡೆ ವಾಲುತ್ತ ಅದನ್ನು ಅಪ್ಪುತ್ತಾಳೆ. ಪ್ರತಿಯಾಗಿ ಮಗುವೂ ಅವಳನ್ನು ಅಪ್ಪುತ್ತದೆ.

ಆಗ ನ್ಯಾಯಾಧೀಶರು, ‘ಓ ಮೈ ಗಾಡ್​! ನಿನಗಿದೆಲ್ಲ ಗೊತ್ತಾ? ನಿಜ, ನಮ್ಮ ಬಗ್ಗೆ ಯಾರಾದರೂ ಕಾಳಜಿ ತೋರಿಸಿದಾಗ ಅವರಿಗೆ ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳುವುದು ಬಹಳ ಮುಖ್ಯ. ನೀನು ಈ ವಿಷಯದಲ್ಲಿ ಬಹಳ ಅದೃಷ್ಟವಂತ ಮತ್ತು ನಿನ್ನ ಹೊಸ ಪೋಷಕರೂ ಕೂಡ ಅದೃಷ್ಟವಂತರು ನಿನ್ನನ್ನು ಪಡೆಯಲು. ಇದೆಲ್ಲವನ್ನು ನೋಡಲು ನನಗೆ ಬಹಳ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಈಗಾಗಲೇ ಈ ವಿಡಿಯೋ ಅನ್ನು 65,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 4,600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ಎಂಥ ಭಾವುಕ ಕ್ಷಣಗಳಿವು, ಇದಕ್ಕಿಂತ ಹೆಚ್ಚಿಗೆ ಇನ್ನೇನು ಬೇಕು ತಾಯಿಯಾದವಳಿಗೆ ಎಂದಿದ್ದಾರೆ ಒಬ್ಬರು. ಕೊನೆಗೂ ಈ ಮಗುವಿಗೆ ಒಳ್ಳೆಯ ಅಪ್ಪ ಅಮ್ಮ ಮತ್ತು ಮನೆ ದೊರಕಿತ್ತಲ್ಲ, ನನಗಂತೂ ತುಂಬಾ ಖುಷಿಯಾಯಿತು ಎಂದಿದ್ದಾರೆ ಇನ್ನೊಬ್ಬರು.

ಇದೆಲ್ಲವನ್ನೂ ಓದಿದಿ ನೋಡಿದ ನಿಮಗೆ ಈ ಕ್ಷಣದಲ್ಲಿ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:48 pm, Sat, 12 November 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು