AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಡಿ ಸಿಲುಕಿದರೂ ಪವಾಡದಂತೆ ಬದುಕುಳಿದ ಮಗು

ಪಂಜಾಬ್‌ನ ಮಂಡಿ ಗೋವಿಂದ್‌ಗಢದಲ್ಲಿ ಎಸ್‌ಯುವಿ ಡಿಕ್ಕಿ ಹೊಡೆದು ಮಗು ಆ ವಾಹನದ ಕೆಳಗೆ ಬಿದ್ದರೂ ಅದು ಪವಾಡಸದೃಶವಾಗಿ ಸಾವಿನಿಂದ ಪಾರಾಗಿದೆ. ಮಗು ಕಾರು ಡಿಕ್ಕಿ ಹೊಡೆದು ಆ ವಾಹನದ ಕೆಳಗೆ ಸಿಲುಕಿಕೊಂಡಾಗ ಜನರು ಆ ಮಗುವನ್ನು ರಕ್ಷಿಸಲು ಧಾವಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಈ ವಿಡಿಯೋ ವೈರಲ್ ಆಗಿದ್ದು, ಚಾಲಕನ ಅಜಾಗರೂಕತೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

Viral Video: ಕಾರಿನಡಿ ಸಿಲುಕಿದರೂ ಪವಾಡದಂತೆ ಬದುಕುಳಿದ ಮಗು
Car Accident
ಸುಷ್ಮಾ ಚಕ್ರೆ
|

Updated on: Jul 14, 2025 | 8:04 PM

Share

ನವದೆಹಲಿ, ಜುಲೈ 14: ಚಲಿಸುತ್ತಿದ್ದ ಎಸ್‌ಯುವಿಯ ಚಕ್ರಗಳ ಕೆಳಗೆ ಮಗುವೊಂದು ಸಿಲುಕಿರುವುದನ್ನು ತೋರಿಸುವ ಶಾಕಿಂಗ್ ವಿಡಿಯೋ (Shocking Video) ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಪಂಜಾಬ್‌ನ ಗೋವಿಂದ್‌ಗಢದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವಿಡಿಯೋದಲ್ಲಿ ಮಗುವೊಂದು ರಸ್ತೆಯಲ್ಲಿ ಓಡುತ್ತಿರುವುದನ್ನು ನೋಡಬಹುದು. ಆಗ ಆ ರಸ್ತೆಯಲ್ಲಿ ಆ ಹೆಣ್ಣು ಮಗುವಿನ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕಡೆಗೆ ವೇಗವಾಗಿ ಕಾರೊಂದು ಬಂದಿದೆ. ಹಿಂದಿನಿಂದ ಬರುತ್ತಿದ್ದ ಕಾರನ್ನು ಮಗು ನೋಡುವುದಿಲ್ಲ. ಸ್ಪೀಡಾಗಿ ಬಂದ ಮಹೀಂದ್ರಾ ಎಸ್‌ಯುವಿ ಆ ಮಗುವಿಗೆ ಡಿಕ್ಕಿ ಹೊಡೆಯುತ್ತದೆ.

ವರದಿಗಳ ಪ್ರಕಾರ, ಕಾರು ಡಿಕ್ಕಿ ಹೊಡೆದು, ಕಾರಿನಡಿ ಆ ಮಗುವನ್ನು ಎಳೆದುಕೊಂಡು ಹೋಗಿದ್ದರೂ ಆ ಮಗು ಬದುಕುಳಿದಿದೆ. ಗಗನ್‌ದೀಪ್ ಸಿಂಗ್ ಎಂಬ ಎಕ್ಸ್ ಬಳಕೆದಾರರು ಈ ಘಟನೆಯ ಸಿಸಿಟಿವಿ ದೃಶ್ಯಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಹಂಚಿಕೊಂಡ ಅವರು, “ಮಂಡಿ ಗೋವಿಂದಗಢದಲ್ಲಿ ನಿರ್ಲಕ್ಷ್ಯದ ಉತ್ತುಂಗದಲ್ಲಿದೆ! ಕಾರು 2 ವರ್ಷದ ಮಗುವಿಗೆ ಡಿಕ್ಕಿ ಹೊಡೆದಿದೆ, ಆದರೆ ಅದೃಷ್ಟವಶಾತ್ ಮಗು ಬದುಕುಳಿದಿದೆ. ಚಾಲಕ ಮತ್ತು ಪೋಷಕರಲ್ಲಿ ತಪ್ಪು ಯಾರದ್ದು ಎಂಬ ಪ್ರಶ್ನೆ ಉದ್ಭವಿಸುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: 45ಕ್ಕೂ ಅಧಿಕ ಮಹಿಳೆಯರ ಅಶ್ಲೀಲ ವಿಡಿಯೋ; ಬೆಂಗಳೂರು ಪೊಲೀಸ್ ವಿಚಾರಣೆ ವೇಳೆ ಶಾಕಿಂಗ್ ವಿಷಯ ಬಯಲು

ಕಾರು ಮಗುವನ್ನು ಡಿಕ್ಕಿ ಹೊಡೆದು ವಾಹನದ ಕೆಳಗೆ ಸಿಲುಕಿಸಿದ ನಂತರ ಜನರು ಮಗುವನ್ನು ರಕ್ಷಿಸಲು ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಜನರು ಜೋರಾಗಿ ಕಿರುಚಾಡಿದ ನಂತರ ಕಾರು ಚಾಲಕ ಕಾರನ್ನು ಹಿಂದಕ್ಕೆ ಸರಿಸುತ್ತಾನೆ. ನಂತರ ಮಗುವನ್ನು ವಾಹನದ ಕೆಳಗಿನಿಂದ ಹೊರಗೆ ಎಳೆಯಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು