AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನನ್ನಮ್ಮನಿಗೆ ಫೋನ್ ಮಾಡಿ, ನನ್ನ ಅಮ್ಮನ ಹೆಸರು ಮಮ್ಮಾ; ಶಾಲೆಯಲ್ಲಿ ಕಣ್ಣೀರಿಟ್ಟ ಪುಟಾಣಿ

ಸಣ್ಣ ಮಕ್ಕಳೇ ಹಾಗೆ, ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದನ್ನು ನೋಡಿರುತ್ತೀರಿ. ಆದರೆ ಈಗಿನ ಶಿಕ್ಷಣವು ಮಕ್ಕಳ ಬಾಲ್ಯವನ್ನು ಕಸಿದುಕೊಂಡಿದೆ. ಎರಡರಿಂದ ಮೂರು ವರ್ಷದ ಪುಟ್ಟ ಮಕ್ಕಳ ಕಿಟಕಿಯಲ್ಲಿ ಇಣುಕುತ್ತಾ ಅಮ್ಮನಿಗಾಗಿ ಗೊಗರೆಯುತ್ತಿದ್ದಾರೆ. ಕರುಳು ಚುರ್ ಎನ್ನುವ ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ನನ್ನಮ್ಮನಿಗೆ ಫೋನ್ ಮಾಡಿ, ನನ್ನ ಅಮ್ಮನ ಹೆಸರು ಮಮ್ಮಾ; ಶಾಲೆಯಲ್ಲಿ ಕಣ್ಣೀರಿಟ್ಟ ಪುಟಾಣಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on:Dec 04, 2025 | 12:37 PM

Share

ನಮ್ಮ ಬಾಲ್ಯವೇ (childhood) ಚೆನ್ನಾಗಿತ್ತು. ಶಾಲೆ ಮೆಟ್ಟಿಲೇರಿದರೂ ಬಾಲ್ಯವನ್ನು ಖುಷಿಯಿಂದಲೇ ಕಳೆಯುತ್ತಿದ್ದೆವು. ಆದರೆ ಈಗ ಆಗಿಲ್ಲ, ವರ್ಷ ಎರಡು ಮೂರು ಆಗುತ್ತಿದ್ದಂತೆ ನರ್ಸರಿ ಎಂದು ಪುಟಾಣಿಗಳನ್ನು ಶಾಲೆಗೆ ಸೇರಿಸಿಯಾಗಿರುತ್ತದೆ. ಮಕ್ಕಳ (children) ಬಾಲ್ಯವನ್ನು ಕಸಿಯುತ್ತಿರುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟ್ಟ ಮಕ್ಕಳು ತರಗತಿಯ ಕಿಟಕಿಯಿಂದ ಹೊರ ನೋಡುತ್ತಾ ಅಮ್ಮನಿಗಾಗಿ ಕಣ್ಣೀರು ಸುರಿಸುತ್ತಿರುವ ದೃಶ್ಯ ಇದಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ.

ಸುರಾಜ್ ಕುಮಾರ್ ಬೌದ್‌ (Suraj kumar Bauddh) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋಗೆ ಶಾಲೆಯಲ್ಲಿ ಮಕ್ಕಳು ತಮ್ಮ ತಾಯಿಯ ಮಡಿಲಲ್ಲಿ ಮಲಗಿ ಹಾಲು ಕುಡಿಯಲು ಬಯಸುತ್ತಾರೆ. ಎಲ್‌ಕೆಜಿ ಹೆಸರಿನಲ್ಲಿ 2-3 ವರ್ಷದ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಶಿಕ್ಷಣವಲ್ಲ. ಇದು ಬಾಲ್ಯವನ್ನೇ ಕಸಿಯುತ್ತಿದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿ ಪುಟಾಣಿಗಳು ತರಗತಿಯ ಕಿಟಕಿಯಲ್ಲಿ ನಿಂತುಕೊಂಡು ಹೊರಗಡೆ ನೋಡುತ್ತಾ ಅಳುತ್ತಿರುವುದನ್ನು ನೋಡಬಹುದು. ಮಗುವೊಂದು ಅಳುತ್ತಾ ನನ್ನಮ್ಮನಿಗೆ ಫೋನ್ ಮಾಡಿ… ನನ್ನಮ್ಮನ ಹೆಸರು ಮಮ್ಮಾ ಎಂದು ಹೇಳುತ್ತಿದೆ. ಮತ್ತೊಂದು ಮಗು ಭಯ ಹಾಗೂ ಅಮ್ಮ ತನ್ನನ್ನು ಕರೆದುಕೊಂಡು ಹೋಗಲು ಬರುತ್ತಾಳೆ ಎಂದು ನಿರೀಕ್ಷೆಯಿಂದ ಹೊರಗೆ ನೋಡುವುದನ್ನು ನೀವಿಲ್ಲಿ ನೋಡಬಹುದು.  ಪುಟಾಣಿಗಳ ಈ ಮಾತುಗಳು ಕರುಳು ಹಿಂಡುವಂತೆ ಮಾಡಿದೆ.

ಇದನ್ನೂ ಓದಿ:ಮಧ್ಯರಾತ್ರಿ ಎಚ್ಚರಗೊಂಡು ಅಮ್ಮನನ್ನು ಅರಸುತ್ತಾ ರಸ್ತೆ ರಸ್ತೆಗಳಲ್ಲಿ ಅಲೆದಾಡಿದ ಮಗು

ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ ಶಿಕ್ಷಣದ ಹೆಸರಿನಲ್ಲಿ ತಾಯಿ ಮಗುವನ್ನು ದೂರ ಮಾಡುವುದು ಸರಿಯಲ್ಲ ಎಂದಿದ್ದಾರೆ. ಇನ್ನೊಬ್ಬರು, ಪುಟಾಣಿಗಳ ಮಾತು ಕೇಳಿದ್ರೆ ಕರುಳು ಚುರ್ ಅನ್ನುತ್ತೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ವಯಸ್ಸಿನಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ತುಂಬಾ ಆಘಾತಕಾರಿ, ಅವರು ನಿಜವಾಗಿಯೂ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿರಬೇಕಾಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Thu, 4 December 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?