AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಲಿಗೆ ಈ ಪುಟ್ಟಿ ತಿನ್ನೋದಕ್ಕೆ ಏನೋ ಕೊಡ್ತಿದಾಳೆ, ಏನಿರಬಹುದು?

Squirrel : ತಿಂಡಿಪೋತ ಈ ಅಳಿಲು ಹೇಗೆ ಈ ಪುಟ್ಟಿಯ ಜಾಕೆಟ್​ ಏರಿ ಅವಳ ಕೈಯ್ಯೊಳಗಿನ ತಿಂಡಿ ತಿಂದು ಓಡಿಹೋಗುವುದು ನೋಡಿ. 1.8 ಮಿಲಿಯನ್ ಜನರು ಈ ಮುದ್ದಾದ ದೃಶ್ಯ ನೋಡಿದ್ದಾರೆ.

ಅಳಿಲಿಗೆ ಈ ಪುಟ್ಟಿ ತಿನ್ನೋದಕ್ಕೆ ಏನೋ ಕೊಡ್ತಿದಾಳೆ, ಏನಿರಬಹುದು?
Little girl feeds squirrel
TV9 Web
| Edited By: |

Updated on: Oct 13, 2022 | 5:10 PM

Share

Viral Video : ಅಳಿಲುಗಳಿಗೆ ನಮ್ಮ ಸಾಂಗತ್ಯ ಬೇಕು. ಹಾಗಂತ ಪೂರ್ತಿ ಮನೆಗಳಲ್ಲೇ ಇರಲಾರವು, ತಮಗೆ ಬೇಕಾದ ಸ್ವಾತಂತ್ರ್ಯವನ್ನು ಪಡೆದುಕೊಂಡು ನಮ್ಮನ್ನು ದಿನಕ್ಕೊಮ್ಮೆಯಾದರೂ ಮಾತನಾಡಿಸಿ, ಕೊಟ್ಟ ತಿಂಡಿ ತಿಂದು ಮುದ್ದು ಮಾಡಿ, ಮಾಡಿಸಿಕೊಂಡು ಮತ್ತೆ ತಮ್ಮ ಜಾಗಗಳಿಗೆ ಸಾಗುವಂಥವು. ಈ ವಿಡಿಯೋ 1.8 ಮಿಲಿಯನ್​ ವೀಕ್ಷಕರನ್ನು ತಲುಪಿ ವೈರಲ್ ಆಗುತ್ತಿದೆ. ಈ ಪುಟ್ಟಿ ಕೈಯಲ್ಲಿ ಏನನ್ನೋ ಹಿಡಿದುಕೊಂಡಿದ್ದಾಳೆ. ಅದಕ್ಕೇ ಅಲ್ಲವೆ ಈ ಅಳಿಲು ಹೀಗೆ ಅವಳನ್ನು ಏರಿ ಅವಳ ಕೈಲಿದ್ದ ತಿಂಡಿಯನ್ನು ತಿಂದು ಸರಕ್ಕನೆ ಮತ್ತೆ ಓಡಿಹೋಗುತ್ತಿರುವುದು.

ನಮ್ಮಲ್ಲಿ ಸಹನೆ, ಸಹಾನುಭೂತಿ ಇದ್ದಲ್ಲಿ ಪ್ರಾಣಿ, ಪಕ್ಷಿಗಳು ತಾವಾಗಿಯೇ ಹತ್ತಿರ ಬರುತ್ತವೆ. ಮನುಷ್ಯನ ಆಂತರ್ಯವನ್ನು ಬಹುಬೇಗನೆ ಅರ್ಥ ಮಾಡಿಕೊಳ್ಳುವಂಥ ಶಕ್ತಿ ಇವುಗಳಿಗಿದೆ. ತಿಂಡಿ ಎನ್ನುವುದು ನೆಪವಷ್ಟೇ. ನಮಗೂ ಅವುಗಳ ಸಾಂಗತ್ಯ ಬೇಕು, ಅವುಗಳಿಗೂ ನಮ್ಮ ಸಾಂಗತ್ಯ ಬೇಕು. ಎಳವೆಯಿಂದಲೇ ಮಕ್ಕಳಿಗೆ ಪ್ರಾಣಿಗಳೊಂದಿಗೆ ಒಡನಾಟ ಅಭ್ಯಾಸ ಮಾಡಿಸಿದರೆ ಕರುಣೆ, ದಯೆ, ಸಹಾನುಭೂತಿ, ತಾಳ್ಮೆ, ಸಹಾಯದಂಥ ಮಾನವೀಯ ಗುಣಗಳು ಮೊಳಕೆ ಒಡೆಯುತ್ತವೆ. ಮುಂದೆ ವಿದ್ಯೆ, ಬುದ್ಧಿಯೂ ಸೇರಿ ಅವರ ವ್ಯಕ್ತಿತ್ವವು ಉದಾತ್ತವಾಗುತ್ತದೆ.

ನಿಮ್ಮ ಮನೆ ಹೀಗೆ ಬರುವ ಅಳಿಲು, ಬೆಕ್ಕು, ನಾಯಿ, ಹಸು, ಕಾಗೆ, ಪಾರಿವಾಳಗಳಿಗೆ ಆಹಾರ ಕೊಡುವ ಅಭ್ಯಾಸವನ್ನು ನೀವೂ ಮಾಡಿ, ನಿಮ್ಮ ಮಕ್ಕಳಿಗೂ ಮಾಡಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ