AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

ಪುಟ್ಟ ಬಾಲಕಿಯೊಬ್ಬಳು  ಜನರು ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ಎಂದು ಬೇಡಿಕೊಂಡು ಯುದ್ಧ ನಿಲ್ಲಿಸುವಂತೆ ಕೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

'ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ' ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​
ಪುಟ್ಟ ಬಾಲಕಿ
TV9 Web
| Edited By: |

Updated on: Feb 27, 2022 | 9:37 AM

Share

ಉಕ್ರೇನ್​ (Ukraine)ಮೇಲೆ ರಷ್ಯಾ(Russia) ದಾಳಿಯಿಂದ ಪರಿಸ್ಥಿತಿ ಹದಗೆಟ್ಟಿದೆ. ಜನ ಜೀವ ಉಳಿಸಿಕೊಳ್ಳಲು ಹೆಣಗಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಹೊರಗಿನಿಂದ ಮಧ್ಯಪ್ರವೇಶಿಸುವ ಪ್ರಯತ್ನ ಮಾಡಿದರೆ, ನೀವು ಇತಿಹಾಸದಲ್ಲಿ ಎದುರಿಸಿದ ಪರಿಣಾಮಗಳಿಗಿಂತ ಹೆಚ್ಚಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಎಲ್ಲಾ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೀವು ನನ್ನನ್ನು ಕೇಳುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ವ್ಲಾಡಿಮಿರ್ ಪುಟಿನ್(Vladimir Putin) ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟು ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ ಪುಟ್ಟ ಬಾಲಕಿಯೊಬ್ಬಳು  ಜನರು ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ಎಂದು ಬೇಡಿಕೊಂಡು ಯುದ್ಧ ನಿಲ್ಲಿಸುವಂತೆ ಕೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ಲಿಲಿ ಎಂಬ ಪುಟ್ಟ ಬಾಲಕಿ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದಾಳೆ. ಎಲ್ಲರೂ ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ನನಗೆ ಭೂಮಿಯ ಮೇಲೆ ಶಾಂತಿ ಬೇಕು ಭೂಮಿಯ ತುಂಡುಗಳಲ್ಲ. ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ ಎಂದು ಹೇಳಿದ್ದಾಳೆ. ಬ್ರಿಟ್ಟಿ ಕಿಟ್ಟಿ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು, ಬಾಲಕಿಯ ಕಾಳಜಿ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ ಒಂದು ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು,ವಿಡಿಯೋಕ್ಕೆ ನಾವು ಉಕ್ರೇನ್ ಮತ್ತು ಬಾಧಿತರಾದ ಎಲ್ಲಾ ಮುಗ್ಧ ಜೀವಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ಉಕ್ರೇನ್ನನಲ್ಲಿ ಯುದ್ಧದ ವಾತಾವರಣ ಮುಂದುವರೆದಿದೆ. ಜನ ದೇಶ ತೊರೆದು ಹೋಗುತ್ತಿದ್ದಾರೆ, ಈಗಾಗಲೇ ಆತಂಕದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ.  ರಕ್ಷಣಾ ಕಾರ್ಯ ಮುಂದುವರೆದಿದ್ದು, ದೇಶದ ಪರಿಸ್ಥಿತಿ ಮಾತ್ರ ಇನ್ನೂ ಹದಗೆಡುತ್ತಲೇ ಇದೆ.

ಇದನ್ನೂ ಓದಿ:

ಉಕ್ರೇನ್ ಗಡಿಯಾಚೆಯಿದ್ದ ಅಮ್ಮನ ಬಳಿ ಆಕೆಯ ಇಬ್ಬರು ಮಕ್ಕಳನ್ನು ತಲುಪಿಸಿದ್ದು ಕೂಡ ಎರಡು ಮಕ್ಕಳ ಇನ್ನೊಬ್ಬ ತಾಯಿ!!

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ