AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

ಪುಟ್ಟ ಬಾಲಕಿಯೊಬ್ಬಳು  ಜನರು ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ಎಂದು ಬೇಡಿಕೊಂಡು ಯುದ್ಧ ನಿಲ್ಲಿಸುವಂತೆ ಕೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

'ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ' ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​
ಪುಟ್ಟ ಬಾಲಕಿ
TV9 Web
| Edited By: |

Updated on: Feb 27, 2022 | 9:37 AM

Share

ಉಕ್ರೇನ್​ (Ukraine)ಮೇಲೆ ರಷ್ಯಾ(Russia) ದಾಳಿಯಿಂದ ಪರಿಸ್ಥಿತಿ ಹದಗೆಟ್ಟಿದೆ. ಜನ ಜೀವ ಉಳಿಸಿಕೊಳ್ಳಲು ಹೆಣಗಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಹೊರಗಿನಿಂದ ಮಧ್ಯಪ್ರವೇಶಿಸುವ ಪ್ರಯತ್ನ ಮಾಡಿದರೆ, ನೀವು ಇತಿಹಾಸದಲ್ಲಿ ಎದುರಿಸಿದ ಪರಿಣಾಮಗಳಿಗಿಂತ ಹೆಚ್ಚಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಎಲ್ಲಾ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೀವು ನನ್ನನ್ನು ಕೇಳುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ವ್ಲಾಡಿಮಿರ್ ಪುಟಿನ್(Vladimir Putin) ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟು ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ ಪುಟ್ಟ ಬಾಲಕಿಯೊಬ್ಬಳು  ಜನರು ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ಎಂದು ಬೇಡಿಕೊಂಡು ಯುದ್ಧ ನಿಲ್ಲಿಸುವಂತೆ ಕೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ಲಿಲಿ ಎಂಬ ಪುಟ್ಟ ಬಾಲಕಿ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದಾಳೆ. ಎಲ್ಲರೂ ಸುರಕ್ಷಿತವಾಗಿರಲಿ, ಶಾಂತಿ ನೆಲೆಸಲಿ ನನಗೆ ಭೂಮಿಯ ಮೇಲೆ ಶಾಂತಿ ಬೇಕು ಭೂಮಿಯ ತುಂಡುಗಳಲ್ಲ. ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ ಎಂದು ಹೇಳಿದ್ದಾಳೆ. ಬ್ರಿಟ್ಟಿ ಕಿಟ್ಟಿ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು, ಬಾಲಕಿಯ ಕಾಳಜಿ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ ಒಂದು ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು,ವಿಡಿಯೋಕ್ಕೆ ನಾವು ಉಕ್ರೇನ್ ಮತ್ತು ಬಾಧಿತರಾದ ಎಲ್ಲಾ ಮುಗ್ಧ ಜೀವಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ಉಕ್ರೇನ್ನನಲ್ಲಿ ಯುದ್ಧದ ವಾತಾವರಣ ಮುಂದುವರೆದಿದೆ. ಜನ ದೇಶ ತೊರೆದು ಹೋಗುತ್ತಿದ್ದಾರೆ, ಈಗಾಗಲೇ ಆತಂಕದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ.  ರಕ್ಷಣಾ ಕಾರ್ಯ ಮುಂದುವರೆದಿದ್ದು, ದೇಶದ ಪರಿಸ್ಥಿತಿ ಮಾತ್ರ ಇನ್ನೂ ಹದಗೆಡುತ್ತಲೇ ಇದೆ.

ಇದನ್ನೂ ಓದಿ:

ಉಕ್ರೇನ್ ಗಡಿಯಾಚೆಯಿದ್ದ ಅಮ್ಮನ ಬಳಿ ಆಕೆಯ ಇಬ್ಬರು ಮಕ್ಕಳನ್ನು ತಲುಪಿಸಿದ್ದು ಕೂಡ ಎರಡು ಮಕ್ಕಳ ಇನ್ನೊಬ್ಬ ತಾಯಿ!!

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ