AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವರ್ಷಗಳ ಬಳಿಕ ಅಮ್ಮನನ್ನು ಕಂಡಾಗ ಮುದ್ದು ಕಂದಮ್ಮನ ಖುಷಿ ಹೇಗಿತ್ತು ನೋಡಿ

ಒಂದು ವರ್ಷದ ಬಳಿಕ ಅಮ್ಮನನ್ನು ಕಂಡಾಗ ಮಗುವಿನ ಮುಖದಲ್ಲಿರುವ ಖುಷಿ ನೆಟ್ಟಿಗರ ಮನಸ್ಸು ಗೆದ್ದಿದೆ. ಸದ್ಯ ಈ ವಿಡಿಯೋ ಮೂರೇ ದಿನದಲ್ಲಿ 2 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ. ಮಗುವಿನ ಮುಗ್ಧ ನಗು, ಖುಷಿ ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವುದಂತೂ ಖಂಡಿತಾ

Viral Video: ವರ್ಷಗಳ ಬಳಿಕ ಅಮ್ಮನನ್ನು ಕಂಡಾಗ ಮುದ್ದು ಕಂದಮ್ಮನ ಖುಷಿ ಹೇಗಿತ್ತು ನೋಡಿ
Video viral on social mediaImage Credit source: instagram
ಅಕ್ಷತಾ ವರ್ಕಾಡಿ
|

Updated on: Oct 07, 2023 | 10:57 AM

Share

ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಪ್ರತೀ ದಿನ ಲಕ್ಷಾಂತರ ವಿಡಿಯೋಗಳು ಹರಿದಾಡುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳ ಮಾತ್ರ ಭಾರೀ ವೈರಲ್​​ ಆಗುವುದುಂಟು. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಈ ಮುದ್ದು ಕಂದಮ್ಮನ ವಿಡಿಯೋ. ಒಂದು ವರ್ಷದ ಬಳಿಕ ಅಮ್ಮನನ್ನು ಕಂಡಾಗ ಮಗುವಿನ ಮುಖದಲ್ಲಿರುವ ಖುಷಿ ನೆಟ್ಟಿಗರ ಮನಸ್ಸು ಗೆದ್ದಿದೆ. ಸದ್ಯ ಈ ವಿಡಿಯೋ ಮೂರೇ ದಿನದಲ್ಲಿ 2 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋದಲ್ಲಿ ವಿದೇಶದಲ್ಲಿರುವ ಅಮ್ಮನ ಬರುವಿಕೆಗಾಗಿ ಮಗು ಅಪ್ಪ ಹಾಗೂ ಸಂಬಂಧಿಕರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವುದನ್ನು ಕಾಣಬಹುದು. ದೂರದಲ್ಲಿ ಅಮ್ಮ ಬರುವುದು ಕಾಣುತ್ತಿದ್ದಂತೆ ಮಗುವಿನ ಖುಷಿಗೆ ಪಾರವೇ ಇಲ್ಲ. ಮಗುವಿನ ಮುಗ್ಧ ನಗು, ಖುಷಿ ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವುದಂತೂ ಖಂಡಿತಾ. ವಿಡಿಯೋ ಹಂಚಿಕೊಂಡ ಕೇವಲ ಮೂರೇ ದಿನದಲ್ಲಿ 2ಮಿಲಿಯನ್​​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿರುವ ಮುದ್ದು ಕಂದಮ್ಮನ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Jerrin James (@lucifer_lcr)

ಇದನ್ನೂ ಓದಿ: ‘2 ಲಕ್ಷಕ್ಕೆ ಮಾರಾಟಕ್ಕಿರುವ ಅಪ್ಪ’ 8 ವರ್ಷದ ಮಗಳು ಬರೆದ ಸೇಲ್ ನೋಟ್​ ವೈರಲ್

ಈ ವಿಡಿಯೋವನ್ನು ಜೆರಿನ್ ಜೇಮ್ಸ್ ಎಂಬವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಮೂರೇ ದಿನಕ್ಕೆ 334,915 ಲೈಕುಗಳನ್ನು ಪಡೆದುಕೊಂಡಿದೆ. ‘ಈ ವಿಡಿಯೋ ನನ್ನ ಕಣ್ಣಲ್ಲಿ ನೀರು ತರಿಸಿತು’ ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ. ಈ ವಿಡಿಯೋ ಎಷ್ಟು ನೋಡಿದರೂ ಸಾಲುವುದಿಲ್ಲ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?