AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು; ವಿಡಿಯೋ ವೈರಲ್

ಪ್ರಾಣಿಗಳ ವಿಡಿಯೋಗಳು ಹೆಚ್ಚು ಮನಸೆಳೆಯುತ್ತವೆ. ಮತ್ತೆ ಮತ್ತೆ ವಿಡಿಯೋ ನೋಡಿ ಬಿಡೋಣ ಅನ್ನುವಷ್ಟರ ಮಟ್ಟಿಗೆ ಕಾಡುತ್ತದೆ. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

Viral Video: ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು; ವಿಡಿಯೋ ವೈರಲ್
ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು
shruti hegde
|

Updated on:Jun 01, 2021 | 7:28 AM

Share

ಪುಟ್ಟ ಬಾಲಕಿಯು ತಾನು ಸಾಕಿದ ನಾಯಿಮರಿಗಾಗಿ ಹಾಡು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಮಗು ಹಾಡು ಹೇಳುತ್ತಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಣಿಗಳು ಮನುಷ್ಯನನ್ನು ಹಚ್ಚಿಕೊಂಡಷ್ಟು ಮನುಷ್ಯರೇ ಮನುಷ್ಯರನ್ನು ಹಚ್ಚಿಕೊಳ್ಳುವುದಿಲ್ಲ. ಮೂಕ ಪ್ರಾಣಿಗಳಾದರೂ ಮನುಷ್ಯನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ. ಸಾಕು ಪ್ರಾಣಿಗಳು ಮಾನವರನ್ನು ಎಷ್ಟರ ಮಟ್ಟಿಗೆ ಅರ್ಥಮಾಡಿಕೊಳ್ಳಬಹುದು ಎಂಬುದಕ್ಕೆ ಇಲ್ಲೊಂದು ವಿಡಿಯೋ ಸಾಕ್ಷಿಯಾಗಿದೆ.

ಪ್ರಾಣಿಗಳ ವಿಡಿಯೋಗಳು ಹೆಚ್ಚು ಮನಸೆಳೆಯುತ್ತವೆ. ಮತ್ತೆ ಮತ್ತೆ ವಿಡಿಯೋ ನೋಡಿ ಬಿಡೋಣ ಅನ್ನುವಷ್ಟರ ಮಟ್ಟಿಗೆ ಕಾಡುತ್ತದೆ. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಪುಟ್ಟ ಮುಖ, ಕೆಂಪಾದ ಕೆನ್ನೆ, ಸುಮಧುರ ಕಂಠ. ತಾನು ಪ್ರೀತಿಯಿಂದ ಸಾಕಿದ ನಾಯಿ ಮರಿಗೆ ಮುದ್ದಾಗಿ ಕಾಡು ಹೇಳುತ್ತಾಳೆ ಆ ಕಂದಮ್ಮ. ಮನೆಯ ಸುತ್ತಲು ಹಸಿರು ಹುಲ್ಲು, ಮಧ್ಯೆ ಆ ಪುಟ್ಟ ಬಾಲಕಿ ನಾಯಿ ಮರಿಯನ್ನು ಮುದ್ದಿಸುತ್ತಾಳೆ. ‘ಮಗು ತುಂಬಾ ಸುಮಧುರವಾಗಿ ಹಾಡು ಹೇಳುತ್ತಿದ್ದಾಳೆ’ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದರೆ. ‘ಆ ಪುಟ್ಟ ಮಗು ನಾಯಿ ಮರಿಯನ್ನು ಮಲಗಿಸಿಕೊಂಡಿರುವುದು ಅಪಾಯಕಾರಿ, ಏಕೆಂದರೆ ನಾಯಿ ಮರಿಗೆ ಉದ್ದಾದ ಉಗುರುಗಳಿವೆ’ ಎಂದು ಹೇಳಿದ್ದಾರೆ.

18 ಸೆಂಕೆಂಡುಗಳ ವಿಡಿಯೋದಲ್ಲಿ ಮಗು, ನಾಯಿ ಮರಿಗಾಗಿ ಹಾಡು ಹಾಡುತ್ತಿರುವುದನ್ನು ನೋಡಬಹುದು. ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 94,000ಕ್ಕೂ ಹೆಚ್ಚು ವೀಕ್ಷಣೆಯನ್ನು ಗಳಿಸಿಕೊಂಡಿದೆ. ವಿಡಿಯೋ ನೋಡಿದ ನೆಟ್ಟಿಗರು, ನಾಯಿ ಉದ್ದದ ಉಗುರುಗಳನ್ನು ಹೊಂದಿದೆ. ಮುದ್ದಾದ ಮಗುವಿಗೆ ಅಪಾಯವಾಗಬಹುದು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಗು ತುಂಬಾ ಚೆನ್ನಾಗಿ ಹಾಡು ಹೇಳುತ್ತಿದೆ ಎಂದು ಇನ್ನೋರ್ವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: 

Pranitha Marriage: ನಟಿ ಪ್ರಣಿತಾ ಮದುವೆ ಫೋಟೋ ವೈರಲ್​; ಲಾಕ್​ಡೌನ್​ನಲ್ಲಿ ಗುಟ್ಟಾಗಿ ಹಸೆಮಣೆ ಏರಿದ ‘ಪೊರ್ಕಿ’ ಬೆಡಗಿ

ಕಳೆದುಕೊಂಡ ಸ್ನೇಹಿತೆ ಮತ್ತೆ ಸಿಕ್ಕಿದ್ದಾಳೆ, ಕತ್ತೆಯು ಮಗುವನ್ನು ಅಪ್ಪಿಕೊಂಡಿರುವುದು ಹೇಗೆ ನೋಡಿ; ವೈರಲ್​ ಆಯ್ತು ವಿಡಿಯೋ

Published On - 4:19 pm, Mon, 31 May 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ