AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 60ಕ್ಕೂ ಹೆಚ್ಚು ಆನೆಗಳ ಜೀವ ಉಳಿಸಿದ ಲೋಕೋ ಪೈಲಟ್, ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

ಲೋಕೋ ಪೈಲಟ್‌ ಗಳಿಬ್ಬರೂ ತಮ್ಮ ಬುದ್ಧಿವಂತಿಕೆ ಹಾಗೂ ಜಾಣ್ಮೆಯಿಂದ ರೈಲು ಹಳಿ ದಾಟುತ್ತಿದ್ದ ಅರವತ್ತು ಹೆಚ್ಚು ಆನೆಗಳ ಹಿಂಡನ್ನು ರಕ್ಷಿಸಿದ್ದಾರೆ. ಕೋಲ್ಕತ್ತಾದಿಂದ ಅಸ್ಸಾಂಗೆ ಹೋಗುತ್ತಿದ್ದ ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಇಬ್ಬರೂ ಲೋಕೋ ಪೈಲಟ್‌ಗಳು ಆನೆಗಳನ್ನು ರಕ್ಷಣೆ ಮಾಡಿದ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಅವರ ಈ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಾಯಿನಂದಾ
| Edited By: |

Updated on: Oct 19, 2024 | 3:28 PM

Share

ಆನೆಗಳು ನಿಜಕ್ಕೂ ಮುಗ್ಧ ಜೀವಿಗಳು. ನೋಡಲು ದೈತ್ಯಾಕಾರದಲ್ಲಿದ್ದರೂ ತನ್ನ ಸೌಮ್ಯ ಸ್ವಭಾವದಿಂದಲೇ ಎಲ್ಲರಿಗೂ ಕೂಡ ಇಷ್ಟವಾಗುತ್ತದೆ. ತನ್ನ ಸಂಗಡಿಗರ ಜೊತೆಯಲ್ಲಿ ತುಂಟಾಟ ಆಡುವ, ಗುಂಪು ಗುಂಪಾಗಿ ಸಾಗುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ರೈಲು ಹಳಿ ದಾಟುತ್ತಿದ್ದ 60 ಕ್ಕೂ ಹೆಚ್ಚು ಆನೆಗಳನ್ನು ಲೋಕೋ ಪೈಲಟ್‌ ಗಳು ರಕ್ಷಿಸಿದ್ದಾರೆ.

ಅಕ್ಟೋಬರ್ 16 ರಂದು ಈ ಘಟನೆ ಸಂಭವಿಸಿದ್ದು, ರೈಲು ಸಂಖ್ಯೆ 15959 ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕುವ ಮೂಲಕ 60 ಕ್ಕೂ ಹೆಚ್ಚು ಕಾಡು ಆನೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕೋ ಪೈಲಟ್ ಜೆ.ಡಿ.ದಾಸ್ ಮತ್ತು ಸಹಾಯಕ ಉಮೇಶ್ ಕುಮಾರ್ ಅವರು ಹಬೀಪುರ್ ಮತ್ತು ಲಮ್ಸಾಖಾಂಗ್ ನಡುವಿನ ರೈಲ್ವೆ ಹಳಿಯನ್ನು ಆನೆಗಳ ಹಿಂಡು ದಾಟುತ್ತಿರುವುದನ್ನು ನೋಡಿದ್ದಾರೆ. ಈ ತಕ್ಷಣವೇ ತುರ್ತು ಬ್ರೇಕ್ ಹಾಕುವ ಮೂಲಕ ಆನೆಗಳ ಜೀವವನ್ನು ಉಳಿಸಿದ್ದಾರೆ.

ಇದನ್ನೂ ಓದಿ: ಅಮ್ಮಾ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಅತ್ತ ಬಾಲಕನನ್ನು ತನ್ನ ಬಳಿಯೇ ಕೂರಿಸಿಕೊಂಡ ಬಸ್‌ ಚಾಲಕ

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆನೆಗಳ ಹಿಂಡು ರೈಲು ಹಳಿಯನ್ನು ದಾಟುವುದನ್ನು ನೋಡಬಹುದು. ತುರ್ತಾಗಿ ರೈಲನ್ನು ನಿಲ್ಲಿಸಲಾಗಿದೆ. ಹಳಿ ದಾಟುತ್ತಿರುವ ಆನೆಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುತ್ತಿದೆ. ರೈಲು ಚಾಲಕರ ಈ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗೆ ನೆಟ್ಟಿಗರೊಬ್ಬರು, ‘ನಿಜಕ್ಕೂ ಗ್ರೇಟ್ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಇದು ನಿಜಕ್ಕೂ ಅದ್ಭುತವಾದ ವಿಡಿಯೋ, ಇದನ್ನು ಹಂಚಿಕೊಂಡ ನಿಮಗೆ ಧನ್ಯವಾದಗಳು’ ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್