AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 60ಕ್ಕೂ ಹೆಚ್ಚು ಆನೆಗಳ ಜೀವ ಉಳಿಸಿದ ಲೋಕೋ ಪೈಲಟ್, ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

ಲೋಕೋ ಪೈಲಟ್‌ ಗಳಿಬ್ಬರೂ ತಮ್ಮ ಬುದ್ಧಿವಂತಿಕೆ ಹಾಗೂ ಜಾಣ್ಮೆಯಿಂದ ರೈಲು ಹಳಿ ದಾಟುತ್ತಿದ್ದ ಅರವತ್ತು ಹೆಚ್ಚು ಆನೆಗಳ ಹಿಂಡನ್ನು ರಕ್ಷಿಸಿದ್ದಾರೆ. ಕೋಲ್ಕತ್ತಾದಿಂದ ಅಸ್ಸಾಂಗೆ ಹೋಗುತ್ತಿದ್ದ ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಇಬ್ಬರೂ ಲೋಕೋ ಪೈಲಟ್‌ಗಳು ಆನೆಗಳನ್ನು ರಕ್ಷಣೆ ಮಾಡಿದ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಅವರ ಈ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಾಯಿನಂದಾ
| Edited By: |

Updated on: Oct 19, 2024 | 3:28 PM

Share

ಆನೆಗಳು ನಿಜಕ್ಕೂ ಮುಗ್ಧ ಜೀವಿಗಳು. ನೋಡಲು ದೈತ್ಯಾಕಾರದಲ್ಲಿದ್ದರೂ ತನ್ನ ಸೌಮ್ಯ ಸ್ವಭಾವದಿಂದಲೇ ಎಲ್ಲರಿಗೂ ಕೂಡ ಇಷ್ಟವಾಗುತ್ತದೆ. ತನ್ನ ಸಂಗಡಿಗರ ಜೊತೆಯಲ್ಲಿ ತುಂಟಾಟ ಆಡುವ, ಗುಂಪು ಗುಂಪಾಗಿ ಸಾಗುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ರೈಲು ಹಳಿ ದಾಟುತ್ತಿದ್ದ 60 ಕ್ಕೂ ಹೆಚ್ಚು ಆನೆಗಳನ್ನು ಲೋಕೋ ಪೈಲಟ್‌ ಗಳು ರಕ್ಷಿಸಿದ್ದಾರೆ.

ಅಕ್ಟೋಬರ್ 16 ರಂದು ಈ ಘಟನೆ ಸಂಭವಿಸಿದ್ದು, ರೈಲು ಸಂಖ್ಯೆ 15959 ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕುವ ಮೂಲಕ 60 ಕ್ಕೂ ಹೆಚ್ಚು ಕಾಡು ಆನೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕೋ ಪೈಲಟ್ ಜೆ.ಡಿ.ದಾಸ್ ಮತ್ತು ಸಹಾಯಕ ಉಮೇಶ್ ಕುಮಾರ್ ಅವರು ಹಬೀಪುರ್ ಮತ್ತು ಲಮ್ಸಾಖಾಂಗ್ ನಡುವಿನ ರೈಲ್ವೆ ಹಳಿಯನ್ನು ಆನೆಗಳ ಹಿಂಡು ದಾಟುತ್ತಿರುವುದನ್ನು ನೋಡಿದ್ದಾರೆ. ಈ ತಕ್ಷಣವೇ ತುರ್ತು ಬ್ರೇಕ್ ಹಾಕುವ ಮೂಲಕ ಆನೆಗಳ ಜೀವವನ್ನು ಉಳಿಸಿದ್ದಾರೆ.

ಇದನ್ನೂ ಓದಿ: ಅಮ್ಮಾ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಅತ್ತ ಬಾಲಕನನ್ನು ತನ್ನ ಬಳಿಯೇ ಕೂರಿಸಿಕೊಂಡ ಬಸ್‌ ಚಾಲಕ

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆನೆಗಳ ಹಿಂಡು ರೈಲು ಹಳಿಯನ್ನು ದಾಟುವುದನ್ನು ನೋಡಬಹುದು. ತುರ್ತಾಗಿ ರೈಲನ್ನು ನಿಲ್ಲಿಸಲಾಗಿದೆ. ಹಳಿ ದಾಟುತ್ತಿರುವ ಆನೆಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುತ್ತಿದೆ. ರೈಲು ಚಾಲಕರ ಈ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗೆ ನೆಟ್ಟಿಗರೊಬ್ಬರು, ‘ನಿಜಕ್ಕೂ ಗ್ರೇಟ್ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಇದು ನಿಜಕ್ಕೂ ಅದ್ಭುತವಾದ ವಿಡಿಯೋ, ಇದನ್ನು ಹಂಚಿಕೊಂಡ ನಿಮಗೆ ಧನ್ಯವಾದಗಳು’ ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್