Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅರ್ಜುನನಿಗೆ ನೋವು ಮಾಡಿ ಬಲಿ ಪಡೆ ಆನೆ ಇದುವೇ ನೋಡಿ 

ಇತ್ತಿಚೇಗಷ್ಟೇ ಒಂಟಿ ಸಲಗ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಕಾಡಾನೆಯ ದಾಳಿಗೆ ಬಲಿಯಾದ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿಯನ್ನು ಹೊತ್ತಿದ್ದ, ಅರ್ಜುನ ಆನೆ ಮೃತಪಟ್ಟಿದ್ದು, ಇಡೀ ರಾಜ್ಯವೇ  ಅರ್ಜುನನ ಸಾವಿಗೆ ಕಂಬನಿ ಮಿಡಿದಿದೆ. ಇದೀಗ ಅರ್ಜುನನ್ನು ಬಲಿ ಪಡೆದ ಒಂಟಿ ಸಲಗದ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ   ವೈರಲ್ ಆಗುತ್ತಿದ್ದು, ಈ ವಿಡಿಯೋ ನೋಡಿದ ಹಲವರು ನಿನ್ನ ಸೊಕ್ಕಡಗಿಸಲು ಅರ್ಜುನನ ಗೆಳೆಯ ಅಭಿಮನ್ಯು ಬಂದೇ ಬರುತ್ತಾನೆ ಎಂದು ಕಾಡಾನೆಯ ವಿರುದ್ಧ ತಮ್ಮ ಸಿಟ್ಟನ್ನು ವ್ಯಕ್ತಪಡಿಸಿದ್ದಾರೆ. 

Viral Video: ಅರ್ಜುನನಿಗೆ ನೋವು ಮಾಡಿ ಬಲಿ ಪಡೆ ಆನೆ ಇದುವೇ ನೋಡಿ 
ಕಾಡಾನೆ ಅರ್ಜುನ ಅಭಿಮನ್ಯು
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 06, 2023 | 12:42 PM

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯದಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾಡಾನೆಯ ದಾಳಿಗೆ ತುತ್ತಾಗಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿಯನ್ನು ಹೊತ್ತಿದ್ದ, ಅರ್ಜುನ ಆನೆ ಮೃತಪಟ್ಟಿದೆ. ಕಾರ್ಯಾಚರಣೆಯ ವೇಳೆ ಮದವೇರಿದ ಕಾಡಾನೆ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಅಲ್ಲಿಂದ ಓಡಿ ಹೋಗಿವೆ. ಆದರೆ ಅರ್ಜುನ ಆನೆ ಈ ಕಾಡಾನೆಯೊಂದಿಗೆ ಒಬ್ಬಂಟಿಯಾಗಿ ಹೋರಾಡಿದೆ. ಈ ವೇಳೆಯಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಮುಂದಾಗುತ್ತಿದ್ದಾಗ, ಈ ಮದವೇರಿದ ಕಾಡಾನೆ ತನ್ನ ದಂತದಿಂದ ಅರ್ಜುನನ ಹೊಟ್ಟೆಗೆ ತಿವಿದಿದೆ. ಇದರ ಪರಿಣಾಮವಾಗಿ ಅರ್ಜುನ ಆನೆ ಮೃತಪಟ್ಟಿದೆ. ಅರ್ಜುನನ ಸಾವಿಗೆ ಇಡೀ ರಾಜ್ಯವೇ ಕಂಬನಿ ಮಿಡಿದಿದ್ದು, ಅರ್ಜುನನ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಅಲ್ಲದೆ ಅರ್ಜುನ ಆನೆಗೆ ಅನ್ಯಾಯವಾಗಿದೆ, ಅವನ ಸಾವಿಗೆ ನ್ಯಾಯ ಕೊಡಿಸಿ, ಎಂಬ ಕೂಗೂ ಕೇಳಿ ಬರುತ್ತಿದೆ.  ಈ ಮಧ್ಯೆ ಇದೀಗ ಅರ್ಜುನನ ಸಾವಿಗೆ ಕಾರಣವಾದ ಒಂಟಿ ಸಲಗದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು,  ವಿಡಿಯೋವನ್ನು ಕಂಡು ನಿನ್ನ ಸೊಕ್ಕಡಗಿಸಲು ಅರ್ಜುನನ ಗೆಳೆಯ ಅಭಿಮನ್ಯು ಆನೆ ಬಂದೇ ಬರುತ್ತಾನೆ ಎಂದು ಕಾಡಾನೆಯ ವಿರುದ್ಧ ನೆಟ್ಟಿಗರು ಸಿಟ್ಟನ್ನು ವ್ಯಕ್ತಪಡಿಸಿದ್ದಾರೆ.

@mudigere_adventures ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಇದೇ ಒಂಟಿ ಸಲಗ ಅರ್ಜುನ ಆನೆಯನ್ನು ಬಲಿ ಪಡದಿದ್ದು ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವಿಡಿಯೋದಲ್ಲಿ ಅರ್ಜುನ ಆನೆಯನ್ನು ಬಲಿ ಪಡೆದ ಕಾಡಾನೆ ಕಾಡಿನಲ್ಲಿ ತಿರುಗಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ವೈರಲ್​​ ವಿಡಿಯೋ ಇಲ್ಲಿದೆ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 907K ವೀಕ್ಷಣೆಗಳನ್ನು ಹಾಗೂ  71.8K ಲೈಕ್ಸ್ ಗಳನ್ನು ಪಡೆದುಕೊಂಡಿವೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ.  ಒಬ್ಬ ಬಳಕೆದಾರರು ʼಇದೇ ಆನೆಯನ್ನು ಹಿಡಿದು ಪಳಗಿಸಿ ಅರ್ಜುನನ ಜಾಗಕ್ಕೆ ತರಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼತನ್ನ ಗೆಳೆಯನ ಸಾವಿಗೆ ನ್ಯಾಯ ನೀಡಲು ನಿನ್ನ ಸೊಕ್ಕಡಗಿಸಲು ವೀರಾಧಿವೀರ ಅಭಿಮನ್ಯು ಆನೆ ಬಂದೇ ಬರುತ್ತಾನೆʼ ಎಂದು ಹೇಳಿದ್ದಾರೆ.  ಇನ್ನೂ ಅನೇಕರು ಈ ಕಾಡನೆಯನ್ನು ಸದೆಬಡಿಯಲು ನಮ್ಮ ವೀರ ಅಭಿಮನ್ಯವನ್ನು ಕರೆಸಿ ಎಂದು ಕೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:28 pm, Wed, 6 December 23

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ