AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು

Notice To Hanuman Temple : ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನು ಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು
Lord Hanuman Gets Notice From Railways in Dhanbad
TV9 Web
| Updated By: ಶ್ರೀದೇವಿ ಕಳಸದ|

Updated on: Oct 12, 2022 | 5:39 PM

Share

Trending : ಜಾರ್ಖಂಡ್​ನ ಧನಬಾದ್​ನಲ್ಲಿರುವ ಹನುಮಂತ ದೇವಸ್ಥಾನವನ್ನು ತೆರವುಗೊಳಿಸಲು ರೈಲ್ವೇ ಇಲಾಖೆಯು ನೋಟೀಸ್ ನೀಡಿದೆ. ಈ ದೇವಾಲಯವು ರೈಲ್ವೇ ಇಲಾಖೆಯ ಜಾಗವನ್ನು ಅತಿಕ್ರಮಿಸಿಕೊಂಡಿಸಿರುವುದರಿಂದ 10 ದಿನಗಳಲ್ಲಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಬೇಕೆಂಬ ನೋಟೀಸ್​ ಅನ್ನು ದೇವಸ್ಥಾನದ ಗೋಡೆಯ ಮೇಲೆ ಅಂಟಿಸಲಾಗಿದೆ. ಈ ನೋಟೀಸ್​ ಹನುಮಂತದೇವರನ್ನು ಉದ್ದೇಶಿಸಿ ಪ್ರಸ್ತಾಪಿಸಲಾಗಿದೆ. ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನುಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಇನ್ನು 10 ದಿನಗಳಲ್ಲಿ ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ದೇವಾಲಯದ ಸಮೀಪದಲ್ಲಿ ಖಟಿಕ್ ಬಸ್ತಿ ಇದೆ. ಇಲ್ಲಿ ವಾಸಿಸುವ ಸುಮಾರು 60 ಜನರಿಗೂ ಜಾಗವನ್ನು ಅತಿಕ್ರಮಿಸಿಕೊಂಡ ಬಗ್ಗೆ ರೈಲ್ವೆ ಇಲಾಖೆಯು ನೋಟೀಸ್ ಕಳುಹಿಸಿದೆ. ಆದರೆ ಸ್ಥಳೀಯರು ರೈಲ್ವೇ ನೀಡಿರುವ ನೋಟೀಸ್​ಗೆ ವಿರೋಧ ವ್ಯಕ್ತಪಡಿಸಿದ್ದು, 1921 ರಿಂದ ತಾವು ಇಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಹಣ್ಣು,  ಮೀನು, ತರಕಾರಿಯಂಥ ಸಣ್ಣ ವ್ಯಾಪಾರಗಳಿಂದ ಅವರು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲರ ನಿವೇಶನಗಳು ಅಕ್ರಮವಾಗಿದ್ದು, ತೆರವುಗೊಳಿಸಬೇಕೆನ್ನುವುದು ರೈಲ್ವೇ ಇಲಾಖೆಯ ಆದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರದಂದು ಹನುಮಂತ ದೇವಸ್ಥಾನದ ಬಳಿ ಸೇರಿದ ಈ ಎಲ್ಲ ಜನರು ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗ ಹನುಮಂತ ಮನುಷ್ಯರನ್ನು ಕಾಯುತ್ತಾನಾ? ಮನುಷ್ಯರು ಹನುಮಂತನನ್ನು ಕಾಯುತ್ತಾರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್