AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು

Notice To Hanuman Temple : ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನು ಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು
Lord Hanuman Gets Notice From Railways in Dhanbad
TV9 Web
| Edited By: ಶ್ರೀದೇವಿ ಕಳಸದ|

Updated on: Oct 12, 2022 | 5:39 PM

Share

Trending : ಜಾರ್ಖಂಡ್​ನ ಧನಬಾದ್​ನಲ್ಲಿರುವ ಹನುಮಂತ ದೇವಸ್ಥಾನವನ್ನು ತೆರವುಗೊಳಿಸಲು ರೈಲ್ವೇ ಇಲಾಖೆಯು ನೋಟೀಸ್ ನೀಡಿದೆ. ಈ ದೇವಾಲಯವು ರೈಲ್ವೇ ಇಲಾಖೆಯ ಜಾಗವನ್ನು ಅತಿಕ್ರಮಿಸಿಕೊಂಡಿಸಿರುವುದರಿಂದ 10 ದಿನಗಳಲ್ಲಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಬೇಕೆಂಬ ನೋಟೀಸ್​ ಅನ್ನು ದೇವಸ್ಥಾನದ ಗೋಡೆಯ ಮೇಲೆ ಅಂಟಿಸಲಾಗಿದೆ. ಈ ನೋಟೀಸ್​ ಹನುಮಂತದೇವರನ್ನು ಉದ್ದೇಶಿಸಿ ಪ್ರಸ್ತಾಪಿಸಲಾಗಿದೆ. ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನುಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಇನ್ನು 10 ದಿನಗಳಲ್ಲಿ ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ದೇವಾಲಯದ ಸಮೀಪದಲ್ಲಿ ಖಟಿಕ್ ಬಸ್ತಿ ಇದೆ. ಇಲ್ಲಿ ವಾಸಿಸುವ ಸುಮಾರು 60 ಜನರಿಗೂ ಜಾಗವನ್ನು ಅತಿಕ್ರಮಿಸಿಕೊಂಡ ಬಗ್ಗೆ ರೈಲ್ವೆ ಇಲಾಖೆಯು ನೋಟೀಸ್ ಕಳುಹಿಸಿದೆ. ಆದರೆ ಸ್ಥಳೀಯರು ರೈಲ್ವೇ ನೀಡಿರುವ ನೋಟೀಸ್​ಗೆ ವಿರೋಧ ವ್ಯಕ್ತಪಡಿಸಿದ್ದು, 1921 ರಿಂದ ತಾವು ಇಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಹಣ್ಣು,  ಮೀನು, ತರಕಾರಿಯಂಥ ಸಣ್ಣ ವ್ಯಾಪಾರಗಳಿಂದ ಅವರು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲರ ನಿವೇಶನಗಳು ಅಕ್ರಮವಾಗಿದ್ದು, ತೆರವುಗೊಳಿಸಬೇಕೆನ್ನುವುದು ರೈಲ್ವೇ ಇಲಾಖೆಯ ಆದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರದಂದು ಹನುಮಂತ ದೇವಸ್ಥಾನದ ಬಳಿ ಸೇರಿದ ಈ ಎಲ್ಲ ಜನರು ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗ ಹನುಮಂತ ಮನುಷ್ಯರನ್ನು ಕಾಯುತ್ತಾನಾ? ಮನುಷ್ಯರು ಹನುಮಂತನನ್ನು ಕಾಯುತ್ತಾರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ