AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಟರಿ ಹೊಡೆಯಿತೋ!’ ಆರ್ಡರ್ ಮಾಡಿದ್ದು ಐಫೋನ್​ 13, ತಲುಪಿದ್ದು ಐಫೋನ್ 14

Iphone : ಪ್ರಾಮಾಣಿಕತೆಯಿಂದ ಗ್ರಾಹಕರು ಫೋನ್ ಹಿಂದಿರುಗಿಸಬೇಕು ಎಂದು ಒಬ್ಬರು, ಇಂಥ ಅದೃಷ್ಟ ನನಗೇ ಸಿಗಲಿ ಎಂದು ಮತ್ತೊಬ್ಬರು. ಈ ಟ್ವೀಟ್​ಗೆ ನೆಟ್ಟಿಗರ ಮಿಶ್ರಪ್ರತಿಕ್ರಿಯೆ ದೊರಕುತ್ತಿದೆ. ನೀವೇನಂತೀರಿ?

‘ಲಾಟರಿ ಹೊಡೆಯಿತೋ!’ ಆರ್ಡರ್ ಮಾಡಿದ್ದು ಐಫೋನ್​ 13, ತಲುಪಿದ್ದು ಐಫೋನ್ 14
Man Orders iPhone 13 From Flipkart Receives iPhone 14 Instead
TV9 Web
| Edited By: |

Updated on: Oct 06, 2022 | 6:13 PM

Share

Trending : ಇತ್ತೀಚೆಗಷ್ಟೇ ಆನ್​ಲೈನ್​ನಲ್ಲಿ ಲ್ಯಾಪ್​ಟಾಪ್​ ಆರ್ಡರ್ ಮಾಡಿದ್ದವರಿಗೆ ಘಡಿ ಸೋಪ್​, ಡ್ರೋನ್ ಕ್ಯಾಮೆರಾ ಆರ್ಡರ್ ಮಾಡಿದವರಿಗೆ ಒಂದು ಕೇಜಿ ಆಲೂಗಡ್ಡೆ ತಲುಪಿದ ವಿಷಯವನ್ನು ಓದಿದ್ದೀರಿ, ನೋಡಿದ್ದೀರಿ. ಇದೀಗ ವೈರಲ್ ಆಗುತ್ತಿರುವ ವಿಷಯ ಮಾತ್ರ ಸ್ವಲ್ಪ ಭಿನ್ನವಾಗಿದೆ. ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದು ಐಫೋನ್13, ಆದರೆ ಅವರಿಗೆ ಫ್ಲಿಪ್​ಕಾರ್ಟ್​ ಮೂಲಕ ತಲುಪಿದ್ದು ಐಫೋನ್​14! ಯಾರಿಗೆ ತಾನೆ ಅಚ್ಚರಿಯಾಗದು ಇಂಥ ವಿಷಯ. ರಸೀದಿಯ ಸ್ಕ್ರೀನ್​ ಶಾಟ್​ ಈಗ ಅಂತರ್ಜಾಲದ ಪೂರ್ತಿ ಹರಿದಾಡುತ್ತಿದೆ. ಭಾರತೀಯ ಹಬ್ಬಗಳ ನೆಪದಲ್ಲಿ ಎಲ್ಲ ಆನ್​ಲೈನ್​ ಮಳಿಗೆಗಳು ರಿಯಾಯ್ತಿ ದರದಲ್ಲಿ ಮಾರಾಟಮೇಳ ನಡೆಸಿರುವುದರ ಫಲ ಮತ್ತು ಮಾಯೆ ಇದು!

ಅದೃಷ್ಟ ಎನ್ನುವುದು ಇದಕ್ಕೇ. ಬಯಸಿದವರಿಗೆ ಅದು ಸಿಗುವುದಿಲ್ಲ. ಅನಿರೀಕ್ಷಿತಾಗಿ ಅದು ಇನ್ನ್ಯಾರನ್ನೋ ದೊರಕಿರುತ್ತದೆ. ಅಶ್ವಿನ್​ ಹೆಗಡೆ ಎಂಬುವವರು ಆ ದಿನ ತನ್ನ ಫಾಲೋವರ್ ಒಬ್ಬರು ಐಫೋನ್ 13 ರ ಬದಲಿಗೆ ಐಫೋನ್ 14 ಅನ್ನು ಪಡೆದಿದ್ದಾರೆ ಎಂದು ಟ್ವೀಟ್ ಮಾಡಿ ಸ್ಕ್ರೀನ್ ಶಾಟ್ ಹಂಚಿಕೊಂಡರು. ಈ ಟ್ವೀಟ್​ ವೈರಲ್ ಆಗುತ್ತಿದ್ದಂತೆ ಅನೇಕರು ಇದನ್ನು ಮೊದಮೊದಲಿಗೆ ನಂಬಲಿಲ್ಲ. ಒಬ್ಬ ವ್ಯಕ್ತಿ ಆಪಲ್‌ ಸಂಸ್ಥೆಗೆ ತಮಾಷೆ ಮಾಡಿದ್ದಾರೆ- ‘ಐಫೋನ್​13 ಮತ್ತು ಐಫೋನ್14ರ ನಡುವೆ ಹೋಲಿಕೆ ಎಷ್ಟಿದೆಯೆಂದರೆ, 14 ಅನ್ನು 13 ಎಂದು ತಪ್ಪಾಗಿ ಭಾವಿಸಿ ಆರ್ಡರ್ ಮಾಡಿದ್ದಾರೆ. ಆಗ 13ರ ಬದಲಿಗೆ 14 ಅನ್ನು ಕಂಪೆನಿ ವಿತರಿಸಿದೆ’.

ಇನ್ನೊಬ್ಬರು, ‘ಐಫೋನ್ 13 ಬದಲಿಗೆ ಐಫೋನ್​14 ಪಡೆದ ವ್ಯಕ್ತಿ ಅದೃಷ್ಟವಂತ. ನಾನು ಇಂಥ ಅದೃಷ್ಟಶಾಲಿಯಾಗಲು ಬಯಸುತ್ತೇನೆ’ ಎಂದಿದ್ದಾರೆ. ಇನ್ನೂ ಕೆಲವರು, ಪ್ರಾಮಾಣಿಕತೆಯಿಂದ ಗ್ರಾಹಕರು ಫೋನ್ ಹಿಂದಿರುಗಿಸಬೇಕು ಎಂದಿದ್ದಾರೆ. ಮಗದೊಬ್ಬರು, ‘ಹಿಂದಿರುಗಿಸುವುದು ಒಳಿತು, ಯಾವುದೇ ರೀತಿಯ ವಾರೆಂಟಿಯನ್ನು ಕ್ಲೈಮ್ ಮಾಡಿಕೊಳ್ಳುವಾಗ ಸಮಸ್ಯೆ ಎದುರಾಗಬಹುದು’ ಎಂದಿದ್ದಾರೆ.

ಈ ಅದೃಷ್ಟ ನಿಮ್ಮದಾಗಿದ್ದರೆ ನೀವೇನು ಮಾಡುತ್ತಿದ್ದಿರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ